Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:65 - ಕನ್ನಡ ಸತ್ಯವೇದವು C.L. Bible (BSI)

65 “ ‘ಪಿತನು ಅನುಗ್ರಹಿಸಿದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಮತ್ತು ಆತನು - ತಂದೆಯ ಅನುಗ್ರಹವಿಲ್ಲದೆ ಯಾರೂ ನನ್ನ ಬಳಿಗೆ ಬರಲಾರರು ಎಂಬದನ್ನು ನಾನು ನಿಮಗೆ ಅದರ ದೆಸೆಯಿಂದಲೇ ಹೇಳಿದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಇದಲ್ಲದೆ ಯೇಸು, “ತಂದೆಯ ಅನುಮತಿ ಇಲ್ಲದೆ ಯಾವನೂ ನನ್ನ ಬಳಿಗೆ ಬರಲಾರನು ಎಂದು ನಾನು ನಿಮಗೆ ಹೇಳಿದ್ದಕ್ಕೆ ಅದೇ ಕಾರಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಯೇಸು ಮುಂದುವರಿಸಿ ಹೇಳಿದ್ದೇನೆಂದರೆ, “ಯಾರನ್ನಾದರೂ ನನ್ನ ತಂದೆಯು ನನಗೆ ಕೊಟ್ಟರಷ್ಟೇ ಅವರು ನನ್ನ ಬಳಿಗೆ ಬರಲು ಸಾಧ್ಯ, ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

65 ಜೆಜುನ್ ಫಿಡೆ ಬೊಲುನ್ ತೆನಿ,“ತೆಚೆಸಾಟ್ನಿ ಮಿಯಾ ಬಾಬಾನ್ ಯೆಯ್ ಸರ್ಕೆ ಕರ್‍ತಲ್ಯಾ ಶಿವಾಯ್ ಮಾಜ್ಯಾಕ್ಡೆ ಕೊನ್ಬಿ ಯೆಯ್ನಾತ್ ಮನುನ್ ಮಿಯಾ ಸಾಂಗಲ್ಲೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:65
14 ತಿಳಿವುಗಳ ಹೋಲಿಕೆ  

ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ಅದಕ್ಕೆ ಯೊವಾನ್ನನು, “ದೇವರು ದಯಪಾಲಿಸದೆ ಹೋದರೆ ಮಾನವನಿಗೇನೂ ದಕ್ಕದು.


ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.


ಕ್ರಿಸ್ತಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.


ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು