Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:66 - ಕನ್ನಡ ಸತ್ಯವೇದವು C.L. Bible (BSI)

66 ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂಜರಿದು ಆತನ ಕೂಡ ಸಂಚಾರಮಾಡುವದನ್ನು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

66 ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತನ ಹಿಂಬಾಲಕರಲ್ಲಿ ಅನೇಕರು ಆತನನ್ನು ತೊರೆದುಬಿಟ್ಟರು. ಅವರು ಆತನನ್ನು ಹಿಂಬಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

66 ಅಂದಿನಿಂದ ಯೇಸುವಿನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟು ಹೋದರು ಮತ್ತು ಯೇಸುವಿನ ಸಂಗಡ ಸಂಚಾರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

66 ಹ್ಯಾ ಗೊಸ್ಟಿಯಾ ಲಾಗುನ್ ಜೆಜುಚ್ಯಾ ವಾಂಗ್ಡಾ ಹೊತ್ತಿ ಸುಮಾರ್ ಲೊಕಾ ತೆಕಾ ಸೊಡುನ್ ಗೆಲಿ, ಅನಿ ತ್ಯೆಚ್ಯಾ ಫಾಟ್ನಾ ಕನ್ನಾಬಿ ಯೆವ್ಕನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:66
17 ತಿಳಿವುಗಳ ಹೋಲಿಕೆ  

ಯೇಸು ಅವನನ್ನು ನೋಡಿ, “ನೇಗಿಲಿಗೆ ಕೈಹಾಕಿ ಹಿಂದಕ್ಕೆ ನೋಡುವವನು ದೇವರ ಸಾಮ್ರಾಜ್ಯಕ್ಕೆ ತಕ್ಕವನಲ್ಲ,” ಎಂದರು.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರು ಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ.


ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು, “ಇವು ಕಟುವಾದ ಮಾತುಗಳು, ಇವನ್ನು ಯಾರುತಾನೆ ಕೇಳಿಯಾರು?” ಎಂದು ಮಾತನಾಡಿಕೊಂಡರು.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.


ಇದನ್ನು ಕೇಳಿದ್ದೇ ಆ ಯುವಕ ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟೇಹೋದ. ಏಕೆಂದರೆ ಅವನಿಗೆ ಅಪಾರ ಆಸ್ತಿಪಾಸ್ತಿಯಿತ್ತು.


ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.)


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.


“ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಅಲ್ಲಿ ನೀನು ಮಾಡುವುದನ್ನೆಲ್ಲಾ ನಿನ್ನ ಅನುಯಾಯಿಗಳು ನೋಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು