Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:14 - ಕನ್ನಡ ಸತ್ಯವೇದವು C.L. Bible (BSI)

14 ಹಬ್ಬವು ಅರ್ಧಕ್ಕೆ ಅರ್ಧ ಮುಗಿಯತು. ಆಗ ಯೇಸು ಮಹಾದೇವಾಲಯಕ್ಕೆ ಹೋಗಿ ಬೋಧನೆ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹಬ್ಬದ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಜಾತ್ರೆಯ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹಬ್ಬದಲ್ಲಿ ಸುಮಾರು ಅರ್ಧಭಾಗ ಮುಗಿದುಹೋಗಿತ್ತು. ಆಗ ಯೇಸು ದೇವಾಲಯಕ್ಕೆ ಹೋಗಿ ಉಪದೇಶಿಸಲು ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾಲಯಕ್ಕೆ ಹೋಗಿ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಸನ್ ಜಗ್ಗೊಳ್ ಅರ್ದೊ ಹೊಲ್ಲೊ ತನ್ನಾ ಜೆಜು ಗುಡಿತ್ ಗೆಲೊ, ಅನಿ ಶಿಕ್ವುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:14
16 ತಿಳಿವುಗಳ ಹೋಲಿಕೆ  

ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು ಸ್ವಾಮಿ ಆಗ ಗಟ್ಟಿಯಾಗಿ ಇಂತೆಂದರು: “ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೇ ಬಂದವನಲ್ಲ: ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ.


ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು.


ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ.


ಮರುದಿನ ಮುಂಜಾನೆ ಅವರು ಮತ್ತೆ ಮಹಾದೇವಾಲಯಕ್ಕೆ ಬಂದರು. ಜನರು ಸುತ್ತಲೂ ಬಂದು ನೆರೆಯಲು ಯೇಸು ಕುಳಿತುಕೊಂಡು ಬೋಧಿಸತೊಡಗಿದರು.


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ಯೆಹೂದ್ಯರ ಪರ್ಣಕುಟೀರಗಳ ಹಬ್ಬವು ಹತ್ತಿರವಾಗುತ್ತಿತ್ತು. ಯೇಸುವಿನ ಸೋದರರು,


ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.


ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.


ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋದರು. ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು. ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಆ ಹಬ್ಬದ ಎರಡನೆಯ ದಿನದಲ್ಲಿ ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಹನ್ನೆರಡು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳು ಇವುಗಳನ್ನು ಸಮರ್ಪಿಸಬೇಕು.


‘ಮೂರನೆಯ ದಿನ, ದೈನಿಕ ದಹನಬಲಿಯನ್ನು, ಅದಕ್ಕೆ ಸಂಬಂಧಿಸಿದ ಧಾನ್ಯ-ಪಾನದ್ರವ್ಯಗಳ ಜೊತೆಗೆ ಕಳಂಕರಹಿತವಾದ ಹನ್ನೊಂದು ಹೋರಿ, ಎರಡು ಟಗರು ಹಾಗು ವರ್ಷದ ಹದಿನಾಲ್ಕು ಕುರಿ ಇವುಗಳನ್ನು ಸಮರ್ಪಿಸಬೇಕು.


ಮಹಾದೇವಾಲಯದೊಳಗೆ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಕೋಣೆಯಲ್ಲಿ ಯೇಸು ಮಾತನಾಡುತ್ತಾ ಹೇಳಿದ ಮಾತುಗಳಿವು. ಅವರ ಗಳಿಗೆ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು