Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:32 - ಕನ್ನಡ ಸತ್ಯವೇದವು C.L. Bible (BSI)

32 ಯೇಸು ಸ್ವಾಮಿಯನ್ನು ಕುರಿತು ಜನರು ಹೀಗೆ ಆಡುತ್ತಿದ್ದ ಗುಸುಗುಸು ಮಾತು ಫರಿಸಾಯರ ಕಿವಿಗೆ ಮುಟ್ಟಿತು. ಅವರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸಲು ಕಾಲಾಳುಗಳನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಜನರು ಆತನ ವಿಷಯವಾಗಿ ಗುಜುಗುಜು ಆಡಿದ ಈ ಮಾತುಗಳನ್ನು ಫರಿಸಾಯರು ಕೇಳಲು ಮಹಾಯಾಜಕರೂ ಫರಿಸಾಯರೂ ಆತನನ್ನು ಹಿಡಿಯುವದಕ್ಕೆ ಓಲೇಕಾರರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸುವಿನ ಬಗ್ಗೆ ಜನರು ಹೇಳುತ್ತಿದ್ದ ಈ ಸಂಗತಿಗಳನ್ನು ಫರಿಸಾಯರು ಕೇಳಿದರು. ಆದ್ದರಿಂದ ಮಹಾಯಾಜಕರು ಮತ್ತು ಫರಿಸಾಯರು ಯೇಸುವನ್ನು ಬಂಧಿಸುವುದಕ್ಕಾಗಿ ದೇವಾಲಯದ ಸಿಪಾಯಿಗಳಲ್ಲಿ ಕೆಲವರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಲೊಕಾಂಚೊ ತಾಂಡೊ ಜೆಜುಚ್ಯಾ ವಿಶಯಾತ್ ಪುಸ್ವುಸುನ್ ಬೊಲ್ತಲೆ ಸಗ್ಳೆ ಫಾರಿಜೆವಾನಿ ಆಯಿಕ್ಲ್ಯಾನಿ, ತೆಚೆಸಾಟ್ನಿ ತೆನಿ ಅನಿ ಯಾಜಕಾಂಚ್ಯಾ ಮುಖಂಡಾನಿ ಉಲ್ಲ್ಯಾ ರಾಕ್ವಾಲ್ಯಾಕ್ನಿ ಜೆಜುಕ್ ಧರುಕ್ ಮನುನ್ ಧಾಡುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:32
13 ತಿಳಿವುಗಳ ಹೋಲಿಕೆ  

ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲು ತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ.


ಆದುದರಿಂದ ಯೂದನು ಸೈನಿಕರ ಒಂದು ತಂಡವನ್ನೂ ಮುಖ್ಯಯಾಜಕರು ಮತ್ತು ಫರಿಸಾಯರು ಕಳುಹಿಸಿದ ಕಾವಲಾಳುಗಳನ್ನೂ ಕರೆದುಕೊಂಡು ದೀವಟಿಗೆ, ಪಂಜು ಮತ್ತು ಆಯುಧಗಳ ಸಮೇತ ಅಲ್ಲಿಗೆ ಬಂದನು.


ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ !” ಎಂದುಕೊಂಡರು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಕೂಡಲೆ ಅವನನ್ನು ಹಿಡಿದುತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿಸಮೂಹವು ಪರವಶವಾಗಿ ಮಾತಾಡುವುದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನೂ ಕಂಡರು. ಆಗ ದೇವರ ಆತ್ಮ ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.


ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.


ಅಲ್ಲಿ ಧರ್ಮಶಾಸ್ತ್ರಿಗಳೂ ಪ್ರಮುಖರೂ ಸಭೆಸೇರಿದ್ದರು. ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು, ಹೊರಾಂಗಣವನ್ನು ಹೊಕ್ಕು ಪಹರೆಯವರ ಜೊತೆ ಕುಳಿತುಕೊಂಡನು. ಇದೆಲ್ಲ ಹೇಗೆ ಕೊನೆಗೊಳ್ಳುವುದೆಂದು ನೋಡಬೇಕೆಂಬ ಉದ್ದೇಶ ಅವನದಾಗಿತ್ತು.


ಇದನ್ನು ಕೇಳಿದ ಯೆಹೂದ್ಯರು ಯೇಸುವನ್ನು ಹಿಡಿದು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಗಳಿಗೆ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅವರ ಮೇಲೆ ಕೈಹಾಕಲಿಲ್ಲ.


ಕೆಲವರಾದರೋ ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ್ದೆಲ್ಲವನ್ನೂ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು