Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:36 - ಕನ್ನಡ ಸತ್ಯವೇದವು C.L. Bible (BSI)

36 ‘ನನ್ನನ್ನು ಅರಸುವಿರಿ, ಆದರೆ ನಾನು ನಿಮಗೆ ಕಾಣಸಿಗುವುದಿಲ್ಲ. ನಾನಿರುವಲ್ಲಿಗೆ ನೀವು ಬರುವಂತಿಲ್ಲ’ ಎಂದು ಇವನು ಹೇಳುವುದರ ಅರ್ಥ ಏನಿರಬಹುದು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ, ನಾನು ಇರುವಲ್ಲಿಗೆ ನೀವು ಬರಲಾರಿರಿ ಎಂದು ಅವನು ಹೇಳಿದ ಮಾತು ಏನಿದ್ದೀತು? ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಇವನು (ಯೇಸು), ‘ನೀವು ನನ್ನನ್ನು ಹುಡುಕುವಿರಿ, ಆದರೆ ನೀವು ನನ್ನನ್ನು ಕಂಡುಕೊಳ್ಳುವುದಿಲ್ಲ’ ಎನ್ನುತ್ತಾನೆ. ಅಲ್ಲದೆ ಇವನು, ‘ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎನ್ನುತ್ತಾನೆ. ಇದರರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಈತನು, ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವುದಿಲ್ಲ ಮತ್ತು ನಾನಿರುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳಿದ ಮಾತು ಏನಾಗಿರಬಹುದು?” ಎಂದು ತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತೊ ಅಮಿ ತೆಕಾ ಹುಡಕ್ತಾಂವ್ ಖರೆ ತೊ ಅಮ್ಕಾ ಗಾವಿನಾ, ಅನಿ ಮಿಯಾ ಖೈ ಜಾತಾ ಥೈ ಯೆವ್ಕ್ ಹೊಯ್ನಾ ಮನ್ತಾ. ಹೆಚ್ಯಾ ಗೊಸ್ಟಿಯಾಂಚೊ ಅರ್ತ್ ಕಾಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:36
11 ತಿಳಿವುಗಳ ಹೋಲಿಕೆ  

ಅದಕ್ಕೆ ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.


ಆಗ ನೀವು ನನ್ನನ್ನು ಹುಡುಕುವಿರಿ. ಆದರೆ ನಾನು ನಿಮಗೆ ಕಾಣಸಿಗುವುದಿಲ್ಲ. ನಾನು ಇರುವಲ್ಲಿಗೆ ನೀವು ಬರುವಂತೆಯೂ ಇಲ್ಲ,” ಎಂದು ಹೇಳಿದರು.


ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.


ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.


ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು, “ಇವು ಕಟುವಾದ ಮಾತುಗಳು, ಇವನ್ನು ಯಾರುತಾನೆ ಕೇಳಿಯಾರು?” ಎಂದು ಮಾತನಾಡಿಕೊಂಡರು.


ಅಷ್ಟಕ್ಕೆ ಆ ಯೆಹೂದ್ಯರಲ್ಲಿ ತೀವ್ರ ವಾಗ್ವಾದ ಉಂಟಾಯಿತು. “ಈತನು ತನ್ನ ಮಾಂಸವನ್ನು ತಿನ್ನಲು ಹೇಗೆ ಕೊಟ್ಟಾನು?” ಎಂದು ಕೇಳತೊಡಗಿದರು.


“ಸ್ವರ್ಗದಿಂದ ಇಳಿದುಬಂದ ರೊಟ್ಟಿ ನಾನೇ” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಗೊಣಗತೊಡಗಿದರು.


ಅದಕ್ಕೆ ನಿಕೊದೇಮನು, “ವಯಸ್ಸಾದ ಒಬ್ಬನು ಹೊಸದಾಗಿ ಹುಟ್ಟುವುದಾದರೂ ಹೇಗೆ? ತಾಯಿಯ ಗರ್ಭವನ್ನು ಮತ್ತೊಮ್ಮೆ ಹೊಕ್ಕು ಅವನು ಹುಟ್ಟಲು ಸಾಧ್ಯವೇ?” ಎಂದು ಕೇಳಿದನು.


ಯೇಸು ಸ್ವಾಮಿ ಪುನಃ ಅವರಿಗೆ, “ನಾನು ಹೊರಟುಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


ಪ್ರಿಯ ಮಕ್ಕಳೇ, ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ, ಆಮೇಲೆ ನೀವು ನನ್ನನ್ನು ಹುಡುಕುವಿರಿ, ‘ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು