Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:39 - ಕನ್ನಡ ಸತ್ಯವೇದವು C.L. Bible (BSI)

39 ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಜೆಜು ಆತ್ಮ್ಯಾಚ್ಯಾ ವಿಶಯಾತ್ ಬೊಲ್ಲ್ಯಾನ್. ಹೆ ಅಪ್ನಾಚ್ಯಾ ವರ್ತಿ ವಿಶ್ವಾಸ್ ಕರ್‍ತಲ್ಯಾಕ್ನಿ ಗಾವ್ತಲೆ ಹೊತ್ತೆ. ಪವಿತ್ರ್ ತ್ಯಾ ಎಳಾರ್ ಅಜುನ್ ಪವಿತ್ರ್ ಆತ್ಮ್ಯಾಕ್ ದಿಲ್ಲೆ ನತ್ತೆ, ಕಶ್ಯಾಕ್ ಮಟ್ಲ್ಯಾರ್, ಅಜುನ್ ಬಿ ಜೆಜುಕ್ ಮಹಿಮೆಚ್ಯಾ ವಾಂಗ್ಡಾ ಉಟ್ವಲ್ಲೆ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:39
42 ತಿಳಿವುಗಳ ಹೋಲಿಕೆ  

ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.


“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.


ಇದೆಲ್ಲ ಶಿಷ್ಯರಿಗೆ ಆಗ ಅರ್ಥವಾಗಲಿಲ್ಲ. ಇದೆಲ್ಲವನ್ನೂ ಬರೆದದ್ದು ಅವರನ್ನು ಕುರಿತೇ; ಆ ಪ್ರಕಾರವೇ ನೆರವೇರಿದೆ ಎಂಬುದನ್ನು ಯೇಸು ಮಹಿಮಾಪದವಿಯನ್ನು ಪಡೆದಾದ ಮೇಲೆ ಅವರು ನೆನಪಿಗೆ ತಂದುಕೊಂಡರು.


ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ.


ಅದಕ್ಕೆ ಯೇಸು, “ನರಪುತ್ರನು ಮಹಿಮೆಯನ್ನು ಹೊಂದುವ ಗಳಿಗೆ ಬಂದಿದೆ.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿತ್ತಾದರೆ ಪವಿತ್ರಾತ್ಮ ಚೈತನ್ಯದಿಂದ ಕೂಡಿದ ಸೇವೆಯು ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು?


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.


ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


‘ಆತ ಒಳ್ಳೆಯ ವ್ಯಕ್ತಿ’ ಎಂದು ಕೆಲವರು ಹೇಳಿದರೆ, ‘ಇಲ್ಲ, ಆತನು ಜನರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾನೆ,’ ಎನ್ನುತ್ತಿದ್ದರು ಇತರರು.


ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು.


ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ. ಆದರೆ ನೀರಿನಿಂದ ಸ್ನಾನದೀಕ್ಷೆಕೊಡುವಂತೆ ನನ್ನನ್ನು ಕಳುಹಿಸಿದ ದೇವರು, ‘ಪವಿತ್ರಾತ್ಮ ಇಳಿದುಬಂದು ಯಾವ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತ,’ ಎಂದಿದ್ದರು.


ಹಾಗಾದರೆ, “ನೀನು ಎಲೀಯನೋ?’ ಎಂದು ಕೇಳಲು ‘ಅಲ್ಲ’ ಎಂದನು. “ನೀನು ಬರಬೇಕಾಗಿದ್ದ ಪ್ರವಾದಿಯಿರಬಹುದೇ?’ ಎಂದು ಅವರು ಮತ್ತೆ ಕೇಳಲು, “ಅದೂ ಅಲ್ಲ” ಎಂದು ಮರುನುಡಿದನು.


ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.


ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.


ಅದಕ್ಕೆ ಉತ್ತರವಾಗಿ ಯೊವಾನ್ನನು, “ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ; ಅವರು ನಿಮಗೆ ಪವಿತ್ರಾತ್ಮ ಅವರಿಂದಲೂ ಅಗ್ನಿಯಿಂದಲೂ ದೀಕ್ಷಾಸ್ನಾನ ಕೊಡುವರು.


ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು.


ನನ್ನ ಎಚ್ಚರಿಕೆಯ ಮಾತಿನತ್ತ ಗಮನಕೊಡಿ; ನನ್ನ ಚೈತನ್ಯವನ್ನು ನಿಮ್ಮ ಮೇಲೆ ಸುರಿಸಿ, ನನ್ನ ನುಡಿಯನ್ನು ನಿಮಗೆ ತಿಳಿಯಪಡಿಸುವೆನು.


ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


“ಇವರು ಗಲಿಲೇಯಕ್ಕೆ ಸೇರಿದ ನಜರೇತಿನ ಪ್ರವಾದಿ-ಯೇಸು,” ಎಂದು ಮಾರ್ದನಿಸಿತು ಜನರ ಗುಂಪು.


ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ.


ಅವರು, ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸಿ ನನ್ನ ಮಹಿಮೆಯನ್ನು ಬೆಳಗಿಸುವರು.


ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.


“ನೀವು ವಿಶ್ವಾಸಿಸಿದಾಗ ಪವಿತ್ರಾತ್ಮ ಅವರನ್ನು ಪಡೆದಿರೋ?’ ಎಂದು ಕೇಳಿದನು. ಅದಕ್ಕೆ ಅವರು, “ಪವಿತ್ರಾತ್ಮ ಎಂಬವರು ಇದ್ದಾರೆಂದು ನಾವು ಕೇಳಿಯೇ ಇಲ್ಲ,” ಎಂದು ಉತ್ತರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು