Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:11 - ಕನ್ನಡ ಸತ್ಯವೇದವು C.L. Bible (BSI)

11 ಅವಳು, “ಇಲ್ಲ, ಸ್ವಾಮೀ,” ಎಂದಳು. ಯೇಸು ಅವಳಿಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪಮಾಡಬೇಡ,” ಎಂದರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಆಕೆಯು “ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ” ಎಂದಳು. ಯೇಸು ಆಕೆಗೆ “ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೇಸು ಆಕೆಗೆ - ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಎಂದು ಹೇಳಿದನು.]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸ್ತ್ರೀಯು, “ಸ್ವಾಮೀ, ಅವರಲ್ಲಿ ಯಾರೂ ನನಗೆ ತೀರ್ಪು ನೀಡಲಿಲ್ಲ” ಎಂದು ಉತ್ತರಕೊಟ್ಟಳು. ಯೇಸು ಆಕೆಗೆ, “ಆದ್ದರಿಂದ ನಾನು ಸಹ ನಿನಗೆ ತೀರ್ಪು ನೀಡುವುದಿಲ್ಲ. ಈಗ ನೀನು ಹೋಗಬಹುದು, ಆದರೆ ಇನ್ನು ಮುಂದೆ ಪಾಪ ಮಾಡಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಆಕೆಯು, “ಸ್ವಾಮಿ, ಯಾರೂ ಶಿಕ್ಷೆ ವಿಧಿಸಲಿಲ್ಲ,” ಎಂದಳು. ಯೇಸು ಆಕೆಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ತಿನಿ, “ನಾ, ಕೊನ್ಬಿ ನಾ ಸಾಯ್ಬಾ” ಮನುನ್ ಜಬಾಬ್ ದಿಲಿನ್, ತನ್ನಾ ಜೆಜುನ್ ತಿಕಾ “ತಸೆಜಾಲ್ಯಾರ್ ಮಿಯಾಬಿ ತುಕಾ ಚುಕಿದಾರ್ ಮನಿನಾ ಜಾ, ಖರೆ ಅನಿ ಫಿಡೆ ಪಾಪ್ ಕರುನಕೊ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:11
27 ತಿಳಿವುಗಳ ಹೋಲಿಕೆ  

ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.


ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.


ನೀವು ತೀರ್ಪುಕೊಡುವುದು ಲೋಕದ ದೃಷ್ಟಿಯಿಂದ, ನಾನಾದರೋ ಯಾರ ಬಗ್ಗೆಯೂ ತೀರ್ಪುಕೊಡಲು ಹೋಗುವುದಿಲ್ಲ.


“ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.


ನಾನು ಬಂದಿರುವುದು ಧರ್ಮಿಷ್ಠರನ್ನು ಕರೆಯುವುದಕ್ಕಲ್ಲ, ‘ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ, ದೇವರಿಗೆ ಅಭಿಮುಖಿಗಳಾಗಿರಿ’ ಎಂದು ಪಾಪಿಷ್ಠರನ್ನು ಕರೆಯುವುದಕ್ಕೆ,” ಎಂದರು.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಅಂಥ ಮನುಷ್ಯನು ದೇವರಿಗೆ: ‘ಪ್ರಾಯಶ್ಚಿತ್ತ ಮಾಡಿರುವೆ, ಇನ್ನು ಮುಂದೆ ಪಾಪಮಾಡೆ.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ.


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ಅದಕ್ಕೆ ಯೇಸು, “ನನ್ನ ಸಾಮ್ರಾಜ್ಯ ಈ ಲೋಕದ್ದಲ್ಲ, ನನ್ನ ಸಾಮ್ರಾಜ್ಯ ಈ ಲೋಕದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಬೀಳದಂತೆ ನನ್ನ ಅನುಯಾಯಿಗಳು ಕಾದಾಡುತ್ತಿದ್ದರು. ನಿಜವಾಗಿಯೂ ನನ್ನ ಸಾಮ್ರಾಜ್ಯ ಇಹಲೋಕದ್ದಲ್ಲ,” ಎಂದರು.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು.


ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.


ಯಾಜಕಸೇವೆಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಬೇಕು. ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.


ಧರ್ಮಸಭೆಗೆ ಸೇರದೆ ಇರುವವರ ಬಗ್ಗೆ ತೀರ್ಪುಮಾಡುವುದು ನನ್ನ ಕೆಲಸವಲ್ಲ. ಅವರನ್ನು ಕುರಿತು ದೇವರೇ ತೀರ್ಪುನೀಡುವರು. ನೀವು ತೀರ್ಪುಮಾಡಬೇಕಾದುದು ಧರ್ಮಸಭೆಗೆ ಸೇರಿದವರನ್ನು ಕುರಿತು ದುರುಳನನ್ನು ನಿಮ್ಮಿಂದ ದೂರತಳ್ಳಿರಿ.


ಅನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು