Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:22 - ಕನ್ನಡ ಸತ್ಯವೇದವು C.L. Bible (BSI)

22 ಅದಕ್ಕೆ ಯೆಹೂದ್ಯರು, ‘ತಾನು ಹೋಗುವಲ್ಲಿಗೆ ನಮ್ಮಿಂದ ಬರಲಾಗದಂತೆ! ಹಾಗೆಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬುದು ಇವನ ಇಂಗಿತವೆ?’ ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ಮಾತಿಗೆ ಯೆಹೂದ್ಯರು - ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ಯೆಹೂದ್ಯರು, “ಯೇಸು ತನ್ನನ್ನು ತಾನೇ ಕೊಂದುಕೊಳ್ಳುವನೇ? ಅದಕ್ಕಾಗಿಯೇ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳಿದನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಯೆಹೂದ್ಯರು, “ಈತನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದಾನೋ? ಏಕೆಂದರೆ, ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳುತ್ತಾನಲ್ಲಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಚೆಸಾಟ್ನಿ ಜುದೆವಾಂಚ್ಯಾ “ಹ್ಯೊ, ತೊ ಜಾತಾ ಥೈ ಅಮ್ಚ್ಯಾನ್ ಜಾವ್ಕ್ ಹೊಯ್ನಾ ಮನುನ್ ಮನುಲಾ, ಅಶೆ ಮಟ್ಲ್ಯಾರ್ ಹ್ಯೊ ಅಪ್ನಾಚೊಚ್ ಜಿವ್ ಕಾಡುನ್ ಘೆಟ್ನಾರ್ ಹಾಯ್ ಕಿ ಕಾಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:22
11 ತಿಳಿವುಗಳ ಹೋಲಿಕೆ  

“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.


ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.


ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.


ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು.


ಯೆಹೂದ್ಯ ಅಧಿಕಾರಿಗಳು, “ನಮಗೆ ಕಾಣಸಿಗದ ಹಾಗೆ ಇವನು ಎಲ್ಲಿ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿಹೋಗಿರುವ ಯೆಹೂದ್ಯರಲ್ಲಿಗೆ ಹೋಗಿ ಅವರಿಗೆ ಬೋಧಿಸುವನೋ?


ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿರಬೇಕು; ನಿನ್ನನ್ನು ಕೊಲ್ಲಲು ಹವಣಿಸುತ್ತಿರುವವರಾದರು ಯಾರು?” ಎಂದರು.


ಬೇಸತ್ತಿದೆ ಮನ ಗರ್ವಿಗಳ ನಿಂದೆಯಿಂದ I ಸುಖಭೋಗಿಗಳು ಮಾಡುವ ಅಪಹಾಸ್ಯದಿಂದ II


ಸೇದಿಹೋಗಲಿ ಸಜ್ಜನರ ವಿರುದ್ಧ ಸುಳ್ಳಾಡುವ ನಾಲಿಗೆ I ಬಿದ್ದುಹೋಗಲಿ, ಸೊಕ್ಕಿನಿಂದವರನು ಧಿಕ್ಕರಿಸುವ ನಾಲಿಗೆ II


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು