Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:31 - ಕನ್ನಡ ಸತ್ಯವೇದವು C.L. Bible (BSI)

31 ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ - ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡವರಾದರೆ ನಿಜವಾಗಿ ನನ್ನ ಶಿಷ್ಯರಾಗಿದ್ದು ಸತ್ಯವನ್ನು ತಿಳಿದುಕೊಳ್ಳುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದ್ದರಿಂದ ಯೇಸು ತನ್ನಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ, “ನೀವು ನನ್ನ ಉಪದೇಶಕ್ಕೆ ವಿಧೇಯರಾಗಿದ್ದರೆ, ನೀವು ನಿಜವಾಗಿಯೂ ನನ್ನ ಹಿಂಬಾಲಕರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಜೆಜುನ್ ಅಪ್ನಾಚ್ಯಾ ವರ್ತಿ ವಿಶ್ವಾಸ್ ಕರ್‍ತಲ್ಯಾ ಜುದೆವಾಕ್ನಿ, “ತುಮಿ ಮಿಯಾ ಶಿಕ್ವುತಲ್ಯಾಕ್ ಖಾಲ್ತಿ ಹೊಲ್ಯಾರ್ ತುಮಿ ಖರೆಚ್! ಮಾಜಿ ಶಿಸಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:31
25 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ನೀನಾದರೋ ನಿನಗೆ ಬೋಧಿಸಲಾಗಿರುವ ಹಾಗೂ ನೀನು ದೃಢವಾಗಿ ನಂಬಿರುವ ಸತ್ಯಗಳನ್ನು ಅನುಸರಿಸು.


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೆ ವಿಧೇಯರಾಗಿ ಅವರನ್ನೇ ಪೂಜಿಸಿರಿ; ಅವರ ಮಾತನ್ನು ತಪ್ಪದೆ ಪಾಲಿಸುತ್ತಾ ಅವರನ್ನೇ ಹೊಂದಿಕೊಂಡಿರಿ. ಹೀಗೆ ಮಾಡಿದರೆ ಎಷ್ಟೋ ಒಳ್ಳೆಯದು.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಮೊದಲಿನಿಂದಲೂ ನೀವು ಯಾವ ಸಂದೇಶವನ್ನು ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಸಲಿ. ಮೊದಲಿನಿಂದಲೂ ನೀವು ಕೇಳಿದ ಸಂದೇಶ ನಿಮ್ಮಲ್ಲಿ ನೆಲೆಸಿದರೆ ಪುತ್ರನಲ್ಲಿಯೂ ಪಿತನಲ್ಲಿಯೂ ನೀವು ನೆಲೆಸುತ್ತೀರಿ.


ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಆದರೆ ಕೊನೆಯವರೆಗೂ ಸ್ಥಿರವಾಗಿರುವವರು ಜೀವೋದ್ಧಾರವನ್ನು ಹೊಂದುವರು.


ಪುತ್ರನು ನಿಮಗೆ ಸ್ವಾತಂತ್ರ್ಯ ನೀಡಿದರೆ, ನೀವು ನಿಜವಾಗಿಯೂ ಸ್ವತಂತ್ರರು.


ನನ್ನ ಮಾಂಸವೇ ನಿಜವಾದ ಆಹಾರ; ನನ್ನ ರಕ್ತವೇ ನಿಜವಾದ ಪಾನ.


ಪ್ರಾರ್ಥನಾಕೂಟ ಮುಗಿದಮೇಲೆ ಅನೇಕ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳಾದ ಅನ್ಯರೂ ಪೌಲ ಮತ್ತು ಬಾರ್ನಬರನ್ನು ಹಿಂಬಾಲಿಸಿದರು. ಈ ಪ್ರೇಷಿತರು ಅವರೊಡನೆ ಮಾತನಾಡಿ ದೈವಾನುಗ್ರಹದಲ್ಲಿ ದೃಢವಾಗಿ ಬಾಳುವಂತೆ ಪ್ರೋತ್ಸಾಹಿಸಿದರು.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ಈ ಒಡಂಬಡಿಕೆ, ನಾನು ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕೈಹಿಡಿದು ಕರೆತಂದಾಗ ಮಾಡಿದ ಒಡಂಬಡಿಕೆಯಂತಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ; ಎಂದೇ, ನಾನು ಅವರನ್ನು ಲಕ್ಷಿಸಲೂ ಇಲ್ಲ, ಎಂದರು ಸರ್ವೇಶ್ವರ.


ಮಹಿಳೆ ಸಚ್ಚರಿತಳಾಗಿದ್ದು ವಿಶ್ವಾಸ, ಪ್ರೀತಿ ಮತ್ತು ಪವಿತ್ರತೆಯಲ್ಲಿ ಪ್ರವರ್ಧಿಸಿದರೆ, ತನ್ನ ತಾಯ್ತನದ ಮೂಲಕ ಸಂರಕ್ಷಣೆಯನ್ನು ಪಡೆಯುತ್ತಾಳೆ.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ಆದರೆ, ಇಂದಿನವರೆಗೂ ದೇವರು ನನಗೆ ನೆರವಾಗುತ್ತಾ ಬಂದಿದ್ದಾರೆ. ಎಂದೇ ದೊಡ್ಡವರು ಚಿಕ್ಕವರೆನ್ನದೆ, ಎಲ್ಲರಿಗೂ ಕ್ರಿಸ್ತಯೇಸುವಿನ ಪರವಾಗಿ ಸಾಕ್ಷಿನೀಡುತ್ತಾ ನಿಮ್ಮ ಮುಂದೆ ನಿಂತಿರುತ್ತೇನೆ. ನಾನು ಹೇಳುತ್ತಿರುವುದು, ಪ್ರವಾದಿಗಳು ಮತ್ತು ಮೋಶೆಯು ಮುಂದೆ ಏನು ಸಂಭವಿಸುವುದೆಂದು ಹೇಳಿದ್ದರೋ, ಅದನ್ನೇ ಹೊರತು ಮತ್ತೇನನ್ನೂ ನಾನು ಹೇಳುತ್ತಿಲ್ಲ.


ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು