Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:33 - ಕನ್ನಡ ಸತ್ಯವೇದವು C.L. Bible (BSI)

33 ಅದಕ್ಕೆ ಯೆಹೂದ್ಯರು, “ನಾವು ಅಬ್ರಹಾಮನ ವಂಶಜರು; ಯಾರಿಗೂ ಎಂದೂ ನಾವು ದಾಸರಾಗಿಲ್ಲ. ಅಂದಮೇಲೆ ನಾವು ಸ್ವತಂತ್ರರಾಗುತ್ತೇವೆ, ಎಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅದಕ್ಕವರು - ನಾವು ಅಬ್ರಹಾಮನ ಸಂತಾನದವರು; ನಾವು ಯಾರಿಗೂ ಎಂದೂ ದಾಸರಾಗಿಲ್ಲ; ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಳುವದು ಹೇಗೆ? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೆಹೂದ್ಯರು, “ನಾವು ಅಬ್ರಹಾಮನ ಮಕ್ಕಳು. ನಾವೆಂದೂ ಯಾರ ಗುಲಾಮರೂ ಆಗಿರಲಿಲ್ಲ. ಹೀಗಿದ್ದರೂ, ನಮಗೆ ಬಿಡುಗಡೆ ಆಗುವುದೆಂದು ನೀನು ಹೇಳುವುದೇಕೆ?” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅದಕ್ಕೆ ಅವರು ಯೇಸುವಿಗೆ, “ನಾವು ಅಬ್ರಹಾಮನ ಸಂತತಿಯವರು, ನಾವು ಯಾರಿಗೂ ಎಂದೂ ಗುಲಾಮರಾಗಿರಲಿಲ್ಲ. ನೀವು ಸ್ವತಂತ್ರರಾಗುವಿರಿ ಎಂದು ನೀನು ಹೇಳುವುದು ಹೇಗೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತನ್ನಾ ತೆನಿ ಅಮಿ ಅಬ್ರಾಹಾಮಾಚ್ಯಾ ಘರಾನ್ಯಾಚೆ ಅನಿ ಅಮಿ ಕನ್ನಾಚ್ ಕೊನಾಚೆ ಗುಲಾಮ್ ಹೊವ್ಕನಾವ್. ತುಮಿ ಸ್ವತಂತ್ರ್ ಹೊತ್ಯಾಶಿ ಮನುನ್ ತಿಯಾ ಸಾಂಗಲ್ಲ್ಯಾ ಗೊಸ್ಟಿಚೊ ಅರ್ತ್ ಕಾಯ್? ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:33
18 ತಿಳಿವುಗಳ ಹೋಲಿಕೆ  

‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ಆಗ ಆ ಯೆಹೂದ್ಯರು, ಅಬ್ರಹಾಮನೇ ನಮ್ಮ ತಂದೆ,” ಎಂದು ಮರುನುಡಿದರು. ಯೇಸು, “ಅಬ್ರಹಾಮನ ಮಕ್ಕಳು ನೀವಾಗಿದ್ದರೆ ಅಬ್ರಹಾಮನು ಮಾಡಿದಂತೆ ನೀವು ಮಾಡುತ್ತಿದ್ದಿರಿ.


ನೀವು ಅಬ್ರಹಾಮನ ವಂಶಜರೆಂದು ನಾನು ಬಲ್ಲೆ. ಆದರೆ ನನ್ನ ಮಾತು ಹಿಡಿಸದ ಕಾರಣ ನನ್ನನ್ನು ಕೊಲ್ಲಲು ಹವಣಿಸುತ್ತೀರಿ.


ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.


ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿ ಮರಿಯ ಮತ್ತು ಮಗ್ದಲದ ಮರಿಯ - ಇವರು ಶಿಲುಬೆಯ ಬಳಿಯಲ್ಲಿ ನಿಂತಿದ್ದರು.


ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ, ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜುದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ ಅಭಯಾಶ್ರಯ ಸಿಕ್ಕುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದೀರಿ.


ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.


ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.


ವೈರಿಗಳ ಹಿಂಸೆಯನ್ನು ತಾಳಲಾರದೆ ಇಸ್ರಯೇಲರು ಗೋಳು ಇಟ್ಟರು. ಸರ್ವೇಶ್ವರ ಅದನ್ನು ಕೇಳಿ ಕನಿಕರಪಟ್ಟು ನ್ಯಾಯಾಧಿಪತಿಗಳನ್ನು ಕಳುಹಿಸಿಕೊಟ್ಟರು; ಜೀವಮಾನವೆಲ್ಲ ಅವರ ಸಂಗಡವೇ ಇದ್ದು ಅವರ ಮುಖಾಂತರ ಇಸ್ರಯೇಲರನ್ನು ಶತ್ರುಗಳಿಂದ ಬಿಡಿಸಿದರು. ತಮ್ಮನ್ನು ಹಿಂಸಿಸುತ್ತಿದ್ದವರ ಕಾಟವನ್ನು ತಾಳದೆ ಮೊರೆಯಿಡುವುದನ್ನು ಸರ್ವೇಶ್ವರ ಕೇಳಿ ಮನಮರುಗಿದರು.


ಅಂಥವರು ನನಗೇ ದಾಸರು. ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದೆ. ಗುಲಾಮರನ್ನು ಮಾರುವಂತೆ ನೀವು ಅವರನ್ನು ವಿಕ್ರಯಿಸಬಾರದು.


ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ನಾನು ಹೇಳುವುದು ನಿಮಗೆ ಅರ್ಥವಾಗುವುದಿಲ್ಲ, ಏಕೆ? ನನ್ನ ಸಂದೇಶಕ್ಕೆ ಕಿವಿಗೊಡಲು ನಿಮ್ಮಿಂದಾಗದಿರುವುದೇ ಇದಕ್ಕೆ ಕಾರಣ.


ಅಂತೆಯೇ ಅಬ್ರಹಾಮನ ಸಂತತಿಯಲ್ಲಿ ಹುಟ್ಟಿದ ಮಾತ್ರಕ್ಕೆ ಎಲ್ಲರೂ ಅಬ್ರಹಾಮನ ಮಕ್ಕಳಾಗುವುದಿಲ್ಲ. “ಇಸಾಕನಿಂದ ಹುಟ್ಟುವವರು ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ದೇವರು ಅಬ್ರಹಾಮನಿಗೆ ನುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು