Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:41 - ಕನ್ನಡ ಸತ್ಯವೇದವು C.L. Bible (BSI)

41 ನೀವಾದರೋ ನಿಮಗೆ ತಂದೆಯಾದವನು ಮಾಡಿದಂತೆ ಮಾಡುತ್ತೀರಿ,” ಎಂದರು. ಅದಕ್ಕೆ ಅವರು, “ನಾವೇನು ಹಾದರಕ್ಕೆ ಹುಟ್ಟಿದವರಲ್ಲ, ದೇವರೇ ನಮ್ಮ ತಂದೆ,” ಎಂದು ಪ್ರತಿಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ” ಎಂದನು. ಅದಕ್ಕವರು, “ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನೀವು ನಿಮ್ಮ ತಂದೆಯ ಕೃತ್ಯಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು - ನಾವು ಹಾದರಕ್ಕೆ ಹುಟ್ಟಿದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆದ್ದರಿಂದ ನಿಮ್ಮ ಸ್ವಂತ ತಂದೆ ಮಾಡಿದ್ದನ್ನೇ ನೀವು ಮಾಡುತ್ತಿದ್ದೀರಿ” ಎಂದು ಹೇಳಿದನು. ಆದರೆ ಯೆಹೂದ್ಯರು, “ನಾವು ಹಾದರಕ್ಕೆ ಹುಟ್ಟಿದವರಲ್ಲ. ದೇವರೇ ನಮ್ಮ ತಂದೆ. ನಮಗಿರುವ ತಂದೆ ಆತನೊಬ್ಬನೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ,” ಎಂದರು. ಅದಕ್ಕವರು, “ನಾವು ಅನೈತಿಕತೆಯಿಂದ ಹುಟ್ಟಿದವರಲ್ಲ. ನಮಗೆ ದೇವರೇ ತಂದೆ,” ಎಂದು ಪ್ರತಿಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತುಮಿ ತುಮ್ಚ್ಯಾ ಬಾಬಾನ್ ಕರಲ್ಲ್ಯಾ ಸರ್ಕೆಚ್ ಕರುಕ್ ಲಾಗ್ಲ್ಯಾಶಿ” ಮಟ್ಲ್ಯಾನ್. ತನ್ನಾ ತೆನಿ ಸಾಂಗಲ್ಲ್ಯಾನ್ ಅಮಿ ವೆಭಿಚಾರಾಕ್ ಜಲ್ಮುಕ್ನಾಂವ್ , “ದೆವ್ ಎಕ್ಲೊಚ್ ಅಮ್ಚೊ ಬಾಬಾ ಹೊವ್ನ್ ಹಾಯ್ ಅನಿ ಅಮಿ ತೆಚಿ ಖರಿ ಪೊರಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:41
17 ತಿಳಿವುಗಳ ಹೋಲಿಕೆ  

ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ನಾನಾಡುವ ಮಾತುಗಳು ಪಿತನ ಸನ್ನಿಧಿಯಲ್ಲಿ ನಾನು ಕಂಡದ್ದನ್ನೇ ನಿರೂಪಿಸುತ್ತವೆ. ನೀವು ಮಾಡುವ ಕಾರ್ಯಗಳೋ ನಿಮ್ಮ ತಂದೆಯಿಂದ ನೀವು ಕಲಿತದ್ದನ್ನೇ ವ್ಯಕ್ತಪಡಿಸುತ್ತವೆ,” ಎಂದರು.


ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.


ಜುದೇಯದ ಜನರು ದ್ರೋಹಮಾಡಿದ್ದಾರೆ. ಇಸ್ರಯೇಲಿನಲ್ಲಿಯೂ ಜೆರುಸಲೇಮಿನಲ್ಲಿಯೂ ದುರಾಚಾರ ನಡೆಯುತ್ತಿದೆ. ಯೆಹೂದ್ಯರು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ, ಸರ್ವೇಶ್ವರಸ್ವಾಮಿಗೆ ಪ್ರಿಯವಾದ ದೇವಾಲಯವನ್ನು ಹೊಲೆಗೆಡಿಸಿದ್ದಾರೆ.


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?


“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಕ್ಕಳು. ಆದುದರಿಂದ ಸತ್ತವರಿಗಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು; ನಿಮ್ಮ ಮುಂದಲೆಯನ್ನು ಬೋಳಿಸಿಕೊಳ್ಳಬಾರದು.


ಆಗ ನೀನು ಅವನಿಗೆ ತಿಳಿಸಬೇಕಾದುದು, 'ಸರ್ವೇಶ್ವರನು ಹೇಳುವುದನ್ನು ಕೇಳು: ಇಸ್ರಯೇಲ್ ಜನತೆ ನನಗೆ ಮಗನಂತೆ, ಜ್ಯೇಷ್ಠಪುತ್ರನಂತಿದೆ.


ಸರ್ವೇಶ್ವರಸ್ವಾಮಿ ಪ್ರಥಮವಾಗಿ ಹೊಶೇಯನ ಸಂಗಡ ಮಾತನಾಡುತ್ತಾ ಆತನಿಗೆ ಹೇಳಿದ್ದೇನೆಂದರೆ: “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೊ. ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೊ. ಏಕೆಂದರೆ, ನನ್ನ ಪ್ರಜೆ ನನ್ನನ್ನು ತೊರೆದುಬಿಟ್ಟು ವ್ಯಭಿಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇದು ನಿದರ್ಶನವಾಗಿರಲಿ.”


ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು