Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:59 - ಕನ್ನಡ ಸತ್ಯವೇದವು C.L. Bible (BSI)

59 ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಅವರು ಈ ಮಾತನ್ನು ಕೇಳಿ ಆತನನ್ನು ಕೊಲ್ಲುವದಕ್ಕಾಗಿ ಕಲ್ಲು ತಕ್ಕೊಳ್ಳಲು ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ಇದನ್ನು ಕೇಳಿದ ಕೂಡಲೇ ಜನರು ಆತನತ್ತ ಬೀರಲು ಕಲ್ಲುಗಳನ್ನು ತೆಗೆದುಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

59 ತನ್ನಾ ತೆನಿ ಜೆಜುಕ್ ಮಾರುಕ್ ಮನುನ್ ಗುಂಡೆ ಎಚುನ್ ಘೆಟ್ಲ್ಯಾನಿ , ಖರೆ ಜೆಜುನ್ ತೆಂಕಾ ಚುಕ್ವುನ್ ದೆವಾಚ್ಯಾ ಗುಡಿತ್ನಾ ಭಾಯ್ರ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:59
18 ತಿಳಿವುಗಳ ಹೋಲಿಕೆ  

ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು.


ಸರ್ವೇಶ್ವರನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶೀಯನಾಗಿರಲಿ, ಸ್ವದೇಶೀಯನಾಗಿರಲಿ ಸರ್ವೇಶ್ವರನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು.


ಅದಕ್ಕೆ ಪಿಲಾತನು, “ಹಾಗಾದರೆ ನೀವೇ ಕರೆದುಕೊಂಡುಹೋಗಿ, ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಈತನಿಗೆ ತೀರ್ಪುಕೊಡಿ,” ಎಂದನು. ಯೆಹೂದ್ಯರು, “ಮರಣದಂಡನೆ ವಿಧಿಸುವ ಅಧಿಕಾರ ನಮಗಿಲ್ಲವಲ್ಲಾ,” ಎಂದು ಉತ್ತರಿಸಿದರು.


ನಿಮ್ಮೊಡನೆ ಇನ್ನೂ ಜ್ಯೋತಿ ಇರುವುದರಿಂದ ಆ ಜ್ಯೋತಿಯಲ್ಲಿ ನಂಬಿಕೆಯಿಡಿ. ಆಗ ನೀವು ಜ್ಯೋತಿಯ ಮಕ್ಕಳು ಆಗುವಿರಿ,” ಎಂದರು. ಇದನ್ನು ಕೇಳಿದ ತರುವಾಯ ಯೇಸು ಅಲ್ಲಿಂದ ಹೊರಟು ಜನರ ಕಣ್ಣಿಗೆ ಬೀಳದಂತೆ ಮರೆಯಾದರು.


ಎಂದೇ ಯೇಸು ಜುದೇಯದಲ್ಲಿ ಬಹಿರಂಗವಾಗಿ ಓಡಾಡುವುದನ್ನು ಕೈಬಿಟ್ಟರು. ಬೆಂಗಾಡಿನ ಪಕ್ಕದಲ್ಲಿದ್ದ ಪ್ರದೇಶಕ್ಕೆ ತೆರಳಿ ಎಫ್ರಯಿಮ್ ಎಂಬ ಗ್ರಾಮದಲ್ಲಿ ತಮ್ಮ ಶಿಷ್ಯರ ಸಂಗಡ ತಂಗಿದರು.


ತನ್ನನ್ನು ಗುಣಪಡಿಸಿದವರು ಯಾರೆಂದು ಅವನಿಗೆ ತಿಳಿದಿರಲಿಲ್ಲ; ಅಲ್ಲದೆ ಜನಸಂದಣಿಯ ನಿಮಿತ್ತ ಯೇಸು ಆಗಲೇ ಮರೆಯಾಗಿಬಿಟ್ಟಿದ್ದರು.


ಆಗಲೇ ಶಿಷ್ಯರ ಕಣ್ಣುಗಳು ತೆರೆದವು; ಯೇಸುವನ್ನು ಗುರುತುಹಚ್ಚಿದರು. ಆಗ ಯೇಸು ಅವರಿಂದ ಅದೃಶ್ಯರಾದರು.


ದೊಡ್ಡವರು ಚಿಕ್ಕವರು ಎನ್ನದೆ, ಹೊರಗಿದ್ದ ಆ ಜನರೆಲ್ಲರ ಕಣ್ಣು ಕುರುಡಾಗುವಂತೆ ಮಾಡಿದರು; ಬಾಗಿಲು ಯಾವುದೆಂದು ತಿಳಿಯದೆ ಅವರು ತಡಕಾಡುವಂತೆ ಮಾಡಿಬಿಟ್ಟರು.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.


ಯೇಸು ಸ್ವಾಮಿ ನಡೆದುಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು