Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:6 - ಕನ್ನಡ ಸತ್ಯವೇದವು C.L. Bible (BSI)

6 ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ಅವರ ಮೇಲೆ ತಪ್ಪುಹೊರಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು. ಯೇಸುವಾದರೋ ಬಗ್ಗಿಕೊಂಡು ಬೆರಳಿನಿಂದ ಮರಳ ಮೇಲೆ ಏನನ್ನೋ ಬರೆಯುತ್ತಾ ಕುಳಿತರು. ಬಂದವರಾದರೋ ಮೇಲಿಂದ ಮೇಲೆ ಪ್ರಶ್ನೆಹಾಕುತ್ತಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನ ಮೇಲೆ ತಪ್ಪುಹೊರಿಸುವದಕ್ಕೆ ಏನಾದರೂ ಒಂದು ನಿವಿುತ್ತ ಬೇಕಾಗಿದ್ದದರಿಂದ ಈತನು ಏನನ್ನುತ್ತಾನೋ ನೋಡೋಣ ಎಂದು ಹಾಗೆ ಕೇಳಿದರು. ಆದರೆ ಯೇಸು ಬೊಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿದರೆ ಆತನ ಮೇಲೆ ಅಪವಾದ ಹೊರಿಸಲು ಸಾಧ್ಯವಾಗುತ್ತದೆ ಎಂದು ಈ ಪ್ರಶ್ನೆಯನ್ನು ಕೇಳಿದರು. ಆದರೆ ಯೇಸು ತಲೆ ಬಾಗಿಸಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆಯತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ತಪ್ಪು ಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೆಜುಕ್ ಗೊಂದ್ಳುನ್ ಘಾಲುನ್ ಹೆಚ್ಯಾವೈನಾ ತೆಕಾ ಶಿರ್ಕುನ್ ಘಾಲುಕ್ ಮನುನ್ ಅಶೆಚ್ ಮಟ್ಲ್ಯಾನಿ. ಖರೆ ತೊ ಖಾಲ್ತಿ ವ್ಹಾಕ್ಲೊ ಅನಿ ತ್ಯೆಚ್ಯಾ ಬೊಟಾನಿ ಜಿಮ್ನಿ ವರ್ತಿ ಲಿವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:6
27 ತಿಳಿವುಗಳ ಹೋಲಿಕೆ  

ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.


ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು.


ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಯಾವುದಾದರೂ ಕಾರಣದಿಂದ ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.


ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.


ಹರಿಯುವ ಸಮಯ, ಹೊಲಿಯುವ ಸಮಯ ಸುಮ್ಮನಿರುವ ಸಮಯ, ಮಾತಾಡುವ ಸಮಯ.


ಅವರ ಪೈಕಿ ಕೆಲವರು ಪ್ರಭುವನ್ನು ಶೋಧಿಸಿದರು. ಪರಿಣಾಮವಾಗಿ ಸರ್ಪಗಳಿಂದ ನಾಶವಾದರು. ಅವರಂತೆ ಪ್ರಭುವನ್ನು ಶೋಧನೆಮಾಡುವುದು ನಮಗೆ ಬೇಡ.


ಫರಿಸಾಯರಲ್ಲಿ ಕೆಲವರು, ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೇ?” ಎಂದು ಕೇಳಿದರು.


ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ: “ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿತೋರಿಸು,” ಎಂದು ಕೇಳಿದರು.


ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.


ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು:


ಯೇಸು ಅವರ ಕುತಂತ್ರವನ್ನು ಅರಿತುಕೊಂಡು, “ಕಪಟಿಗಳೇ, ನನ್ನನ್ನೇಕೆ ಪರೀಕ್ಷಿಸುತ್ತೀರಿ?


ತರುವಾಯ ಫರಿಸಾಯರು ಮತ್ತು ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸ್ವಾಮಿಯನ್ನು ಪರೀಕ್ಷಿಸುವ ದುರದ್ದೇಶದಿಂದ, “ನೀನು ದೇವರಿಂದ ಬಂದವನೆಂದು ಸೂಚಿಸಲು ಅದ್ಭುತವೊಂದನ್ನು ನಮಗೆ ಮಾಡಿತೋರಿಸು,” ಎಂದರು.


ಯೇಸು ಆಕೆಗೆ ಒಂದು ಮಾತನ್ನೂ ಹೇಳಲಿಲ್ಲ. ಶಿಷ್ಯರು ಹತ್ತಿರಕ್ಕೆ ಬಂದು, “ಇವಳನ್ನು ಕಳಿಸಿಬಿಡಿ, ಒಂದೇ ಸಮನೆ ಗೋಳಿಡುತ್ತಾ, ನಮ್ಮನ್ನು ಬೆಂಬತ್ತಿ ಬರುತ್ತಿದ್ದಾಳೆ,” ಎಂದು ಕೇಳಿಕೊಂಡರು.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.


ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಕೈಬೆರಳುಗಳು ಕಾಣಿಸಿಕೊಂಡು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು. ಬರೆಯುತ್ತಿದ್ದ ಆ ಕೈಯನ್ನು ರಾಜನು ನೋಡಿದನು.


ಬೇರೆಯವರ ವ್ಯಾಜ್ಯದಲ್ಲಿ ತಲೆಹಾಕುವವನು ಬೀದಿ ನಾಯಿಯ ಬಾಲ ಎಳೆದ ದಾರಿಹೋಕನಿಗೆ ಸಮಾನನು.


ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ.


ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ?


ಮರುದಿನ ಮುಂಜಾನೆ ಅವರು ಮತ್ತೆ ಮಹಾದೇವಾಲಯಕ್ಕೆ ಬಂದರು. ಜನರು ಸುತ್ತಲೂ ಬಂದು ನೆರೆಯಲು ಯೇಸು ಕುಳಿತುಕೊಂಡು ಬೋಧಿಸತೊಡಗಿದರು.


ಸ್ವರ್ಗದಿಂದ ಒಂದು ಅದ್ಭುತಕಾರ್ಯವನ್ನು ಮಾಡಿತೋರಿಸುವಂತೆ ಕೇಳಿದರು.


ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು.


ನಾ ಇಂತೆಂದುಕೊಂಡೆ : “ಜಾಗರೂಕನಾಗಿರುವೆ ಜಿಹ್ವೆ ಪಾಪಕ್ಕೆಳೆಯದಂತೆ I ಬಾಯಿಗೆ ಕುಕ್ಕೆ ಹಾಕಿಕೊಂಡಿರುವೆ ದುರ್ಜನರ ಮುಂದೆ” II


ಅವನನ್ನು ಸಬ್ಬತ್‍ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪುಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚುಹಾಕುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು