Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:17 - ಕನ್ನಡ ಸತ್ಯವೇದವು C.L. Bible (BSI)

17 ಆದ್ದರಿಂದ ಫರಿಸಾಯರು ಆ ಕುರುಡನನ್ನು ಕುರಿತು, “ಅವನೇ ನಿನಗೆ ಕಣ್ಣುಕೊಟ್ಟನೆಂದು ಹೇಳುತ್ತೀಯಲ್ಲಾ. ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ವಿಚಾರಿಸಿದರು. ಅದಕ್ಕೆ ಅವನು, “ಅವರೊಬ್ಬ ಪ್ರವಾದಿಯೇ ಸರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗಿರಲಾಗಿ ಅವರು ತಿರಿಗಿ ಆ ಕುರುಡನನ್ನು - ಅವನು ನಿನಗೆ ಕಣ್ಣುಕೊಟ್ಟದ್ದರಿಂದ ನೀನು ಅವನ ವಿಷಯವಾಗಿ ಏನು ಹೇಳುತ್ತೀ ಎಂದು ಕೇಳಿದಾಗ ಅವನು - ಆತನು ಪ್ರವಾದಿ ಅನ್ನುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೂದ್ಯನಾಯಕರು ಗುಣಹೊಂದಿದವನಿಗೆ, “ಆ ಮನುಷ್ಯನು (ಯೇಸು) ನಿನ್ನನ್ನು ಗುಣಪಡಿಸಿದನು ಮತ್ತು ನಿನಗೆ ಕಣ್ಣು ಕಾಣಿಸುತ್ತಿದೆ. ಆದರೆ ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ಕೇಳಿದರು. ಅದಕ್ಕೆ ಅವನು, “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ತಿರುಗಿ, “ಆತನು ನಿನಗೆ ದೃಷ್ಟಿಕೊಟ್ಟದ್ದರಿಂದ ಆತನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದಾಗ, ಅವನು, “ಅವರು ಒಬ್ಬ ಪ್ರವಾದಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಸೆ ಮನುನ್ ಫಾರಿಜೆವಾನಿ ಅನಿ ಎಗ್ದಾ ತ್ಯಾ ಮಾನ್ಸಾಕ್ ಇಚಾರ್‍ಲ್ಯಾನಿ, “ತೆನಿ ತುಕಾ ಡೊಳ್ಯಾಕ್ ದಿಸ್ಟ್ ದಿಲ್ಲ್ಯಾ ಮಾನ್ಸಾಚ್ಯಾ ವಿಶಯಾತ್ ಕಾಯ್ ಮನ್ತೆಯ್?” ಮನುನ್ ಇಚಾರ್‍ಲ್ಯಾನಿ. ತನ್ನಾ ತ್ಯಾ ಮಾನ್ಸಾನ್ “ತೊ ಎಕ್ ಪ್ರವಾದಿ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:17
9 ತಿಳಿವುಗಳ ಹೋಲಿಕೆ  

ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು.


ಅದಕ್ಕೆ ಆ ಮಹಿಳೆ, “ಸ್ವಾಮೀ, ತಾವು ಪ್ರವಾದಿ ಎಂದು ನನಗೀಗ ತಿಳಿಯಿತು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.


“ಏನು ನಡೆಯಿತು?” ಎಂದು ಯೇಸು ಪುನಃ ಕೇಳಿದಾಗ ಆ ಶಿಷ್ಯರಿಬ್ಬರು, “ಇವು ನಜರೇತಿನ ಯೇಸುವಿಗೆ ಸಂಭವಿಸಿದ ಘಟನೆಗಳು. ಅವರು ನಡೆಯಲ್ಲೂ ನುಡಿಯಲ್ಲೂ ದೇವರ ಹಾಗೂ ಸಕಲ ಮಾನವರ ದೃಷ್ಟಿಯಲ್ಲಿ ಪ್ರವಾದಿಯಾಗಿದ್ದರು.


“ಇವರು ಗಲಿಲೇಯಕ್ಕೆ ಸೇರಿದ ನಜರೇತಿನ ಪ್ರವಾದಿ-ಯೇಸು,” ಎಂದು ಮಾರ್ದನಿಸಿತು ಜನರ ಗುಂಪು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಹೋದರರಲ್ಲಿ, ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸುವರು. ಅವನಿಗೆ ಮಾತ್ರ ಕಿವಿಗೊಡಬೇಕು.


ಕಣ್ಣು ಬಂದುದು ಹೇಗೆಂದು ಫರಿಸಾಯರು ಅವನನ್ನು ಮತ್ತೆ ಕೇಳಿದರು. “ಯೇಸು ನನ್ನ ಕಣ್ಣುಗಳಿಗೆ ಮಣ್ಣಿನ ಲೇಪವನ್ನು ಹಚ್ಚಿದರು; ನಾನು ಹೋಗಿ ಕಣ್ಣುಗಳನ್ನು ತೊಳೆದುಕೊಳ್ಳುತ್ತಲೇ ನನಗೆ ದೃಷ್ಟಿ ಬಂತು,” ಎಂದನು ಅವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು