Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:18 - ಕನ್ನಡ ಸತ್ಯವೇದವು C.L. Bible (BSI)

18 ಆ ಕುರುಡನು ಹಿಂದೆ ನಿಜವಾಗಿಯೂ ಕುರುಡನಾಗಿದ್ದು ಈಗ ದೃಷ್ಟಿಪಡೆದಿದ್ದಾನೆ ಎಂದು ಯೆಹೂದ್ಯ ಅಧಿಕಾರಿಗಳು ನಂಬಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಕಣ್ಣುಬಂದವನ ವಿಷಯವಾಗಿ ಆ ಯೆಹೂದ್ಯರು - ಇವನು ಕುರುಡನಾಗಿದ್ದು ಈಗ ಕಣ್ಣುಳ್ಳವನಾದನೆಂದು ನಂಬದೆ ಅವನ ತಂದೆತಾಯಿಗಳನ್ನು ಕರೆಯಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಮನುಷ್ಯನು ಮೊದಲು ಕುರುಡನಾಗಿದ್ದನು. ಆದರೆ ಈಗ ಇವನಿಗೆ ಗುಣವಾಗಿದೆ ಎಂದು ಯೆಹೂದ್ಯನಾಯಕರುಗಳು ನಂಬಲಿಲ್ಲ. ಆದ್ದರಿಂದ ಅವರು ಅವನ ತಂದೆತಾಯಿಗಳನ್ನು ಕರೆಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೃಷ್ಟಿಹೊಂದಿದವನ ತಂದೆತಾಯಿಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ, ಅವನು ಕುರುಡನಾಗಿದ್ದು ದೃಷ್ಟಿಹೊಂದಿದನೆಂದು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೊ ಕುಡ್ಡೊ ಹೊತ್ತೊ, ಅತ್ತಾ ತೆಕಾ ದಿಸುಲಾಲಾ ಮನುನ್ ಅಜುನ್ಬಿ ಜುದೆವಾಂಚ್ಯಾ ಫುಡಾರ್‍ಯಾಕ್ನಿ ವಿಶ್ವಾಸ್‍ ನತ್ತೊ, ತಸೆಮನುನ್ ತೆನಿ ತ್ಯಾ ಮಾನ್ಸಾಚ್ಯಾ ಬಾಯ್-ಬಾಬಾಕ್ ಬಲ್ವುನ್ ಘೆವ್ನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:18
11 ತಿಳಿವುಗಳ ಹೋಲಿಕೆ  

ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.


ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”


ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


ಈ ಕಾರಣ ಅವನ ಹೆತ್ತವರನ್ನು ಕರೆಯಿಸಿ, “ಇವನು ನಿಮ್ಮ ಮಗನೋ? ಇವನು ಹುಟ್ಟುಕುರುಡನೋ? ಹಾಗಾದರೆ ಇವನಿಗೆ ಈಗ ಕಣ್ಣು ಬಂದದ್ದು ಹೇಗೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು