Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:22 - ಕನ್ನಡ ಸತ್ಯವೇದವು C.L. Bible (BSI)

22 ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನ ತಂದೆತಾಯಿಗಳು ಯೆಹೂದ್ಯರಿಗೆ ಅಂಜಿದ ಕಾರಣ ಈ ಪ್ರಕಾರ ಹೇಳಿದರು. ಯಾಕಂದರೆ - ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡು ಹೇಳಿದರೆ ಅಂಥವನಿಗೆ ಬಹಿಷ್ಕಾರಹಾಕಬೇಕೆಂದು ಯೆಹೂದ್ಯರು ಅದಕ್ಕೆ ಮುಂಚೆ ಗೊತ್ತುಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಹೆದರಿಕೊಂಡಿದ್ದರಿಂದ ಹಾಗೆ ಹೇಳಿದರು. ಯೇಸುವನ್ನು ಕ್ರಿಸ್ತನೆಂದು ಹೇಳುವ ಯಾರನ್ನೇ ಆಗಲಿ ಸಭಾಮಂದಿರದಿಂದ ಬಹಿಷ್ಕರಿಸುವುದಾಗಿ ಯೆಹೂದ್ಯನಾಯಕರುಗಳು ಪ್ರಕಟಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜುದೆವಾಂಚ್ಯಾ ಫುಡಾರ್‍ಯಾಂಚ್ಯಾ ಭಿಂಯಾನ್ ತೆನಿ ಅದ್ದಿಚ್ ನಿರ್‍ದಾರ್ ಕರಲ್ಲ್ಯಾನಿ. ತ್ಯೆಚ್ಯಾ ಬಾಯ್ -ಬಾಬಾನಿ ಅಶೆ ಮಟ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಜೆ ಕೊನ್ ಜೆಜುಕ್ ಮೆಸ್ಸಿಯಾ ಮನ್ತಾ ತೆಕಾ ಸಿನಾಗೊಗಾತ್ನಾ ಭಾಯ್ರ್ ಘಾಲ್ತಲೆ ಮನುನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:22
24 ತಿಳಿವುಗಳ ಹೋಲಿಕೆ  

ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


ಯೆಹೂದ್ಯರಿಗೆ ಅಂಜಿ ಅವರಾರೂ ಬಹಿರಂಗವಾಗಿ ಮಾತನಾಡುತ್ತಿರಲಿಲ್ಲ.


ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.


ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು, ನಮಗೇ ಬುದ್ಧಿಹೇಳಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿಬಿಟ್ಟರು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟುಬಿಟ್ಟರು.


ಹೊರಗಿನವರು ಅವರನ್ನು ಬಹಳವಾಗಿ ಹೊಗಳುತ್ತಿದ್ದರೂ ಅವರ ಸಂಗಡ ಸೇರಲು ಯಾರಿಗೂ ಧೈರ್ಯವಿರಲಿಲ್ಲ.


ಅನಂತರ ಪ್ರೇಷಿತರನ್ನು ಒಳಕ್ಕೆ ಕರೆದು, “ಇನ್ನು ಮುಂದೆ ಯೇಸುವಿನ ಹೆಸರೆತ್ತಿ ಮಾತನಾಡಬಾರದು, ಬೋಧಿಸಕೂಡದು,” ಎಂದು ಕಟ್ಟಪ್ಪಣೆ ಮಾಡಿದರು.


ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು.


ಅರಿಮತಾಯ ಊರಿನ ಜೋಸೆಫ್ ಎಂಬುವನೂ ಕೂಡ ಯೇಸುವಿನ ಶಿಷ್ಯರಲ್ಲಿ ಒಬ್ಬನು. ಈತನು ಯೆಹೂದ್ಯರಿಗೆ ಹೆದರಿ ತಾನು ಶಿಷ್ಯನೆಂದು ತೋರಿಸಿಕೊಳ್ಳುತ್ತಿರಲಿಲ್ಲ. ಮೇಲೆ ಹೇಳಿದ್ದೆಲ್ಲ ನಡೆದಾದ ಮೇಲೆ ಈತನು ಯೇಸುವಿನ ಪಾರ್ಥಿವ ಶರೀರವನ್ನು ಕೊಂಡೊಯ್ಯಲು ಪಿಲಾತನಿಂದ ಅಪ್ಪಣೆ ಕೇಳಿದನು. ಪಿಲಾತನು ಒಪ್ಪಿಗೆ ಕೊಡಲು ಈತನು ಬಂದು ಪಾರ್ಥಿವ ಶರೀರವನ್ನು ಕೊಂಡೊಯ್ದನು.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ಆ ಕುರುಡನು ಹಿಂದೆ ನಿಜವಾಗಿಯೂ ಕುರುಡನಾಗಿದ್ದು ಈಗ ದೃಷ್ಟಿಪಡೆದಿದ್ದಾನೆ ಎಂದು ಯೆಹೂದ್ಯ ಅಧಿಕಾರಿಗಳು ನಂಬಲು ಒಪ್ಪಲಿಲ್ಲ.


ಇವನನ್ನೇ ಕೇಳಿ, ಹೇಗೂ ಪ್ರಾಯದವನಾಗಿದ್ದಾನಲ್ಲವೆ? ತನ್ನ ವಿಷಯವಾಗಿ ತಾನೇ ಮಾತನಾಡಬಲ್ಲ,” ಎಂದು ಉತ್ತರಿಸಿದರು.


ಹುಟ್ಟುಕುರುಡನನ್ನು ಹೊರಗೆ ತಳ್ಳಿದ ವಾರ್ತೆ ಯೇಸು ಸ್ವಾಮಿಯ ಕಿವಿಗೆ ಮುಟ್ಟಿತು. ಯೇಸು ಅವನನ್ನು ಕಂಡು, “ನರಪುತ್ರನಲ್ಲಿ ನಿನಗೆ ವಿಶ್ವಾಸವಿದೆಯೇ?’ ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು