Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:29 - ಕನ್ನಡ ಸತ್ಯವೇದವು C.L. Bible (BSI)

29 ಮೋಶೆಯೊಡನೆ ದೇವರು ಮಾತನಾಡಿದರು ಎಂಬುದನ್ನು ನಾವು ಬಲ್ಲೆವು. ಆದರೆ ಇವನು ಎಲ್ಲಿಯವನೋ ನಾವು ಅರಿಯೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೋಶೆಯ ಸಂಗಡ ದೇವರು ಮಾತಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ಅರಿಯೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದೇವರು ಮೋಶೆಯೊಂದಿಗೆ ಮಾತಾಡಿದನೆಂಬುದನ್ನು ನಾವು ಬಲ್ಲೆವು. ಆದರೆ ಆ ಮನುಷ್ಯನು (ಯೇಸು) ಎಲ್ಲಿಂದ ಬಂದನೆಂಬುದು ಸಹ ನಮಗೆ ಗೊತ್ತಿಲ್ಲ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೋಶೆಯ ಮೂಲಕ ದೇವರು ಮಾತನಾಡಿದನೆಂದು ನಾವು ಬಲ್ಲೆವು. ಆದರೆ ಈತನು ಎಲ್ಲಿಂದ ಬಂದನೋ ನಮಗೆ ಗೊತ್ತಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ದೆವಾನ್ ಮೊಯ್ಜೆಕ್ಡೆ ಬೊಲ್ಲ್ಯಾನ್, ತೆ ಅಮ್ಕಾ ಗೊತ್ತ್ ಹಾಯ್, ಖರೆ ಹ್ಯೊ ಖೈತ್ನಾ ಯೆಲಾ ಅನಿ ಕೊನ್ ಮನುನ್ ಅಮ್ಕಾ ಗೊತ್ತ್ ನಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:29
28 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, ‘ನಾನೇ ನನ್ನ ಪರವಾಗಿ ಸಾಕ್ಷಿ ನೀಡಿದರೂ ನನ್ನ ಸಾಕ್ಷಿಗೆ ಬೆಲೆಯುಂಟು. ಏಕೆಂದರೆ, ನಾನು ಎಲ್ಲಿಂದ ಬಂದೆ, ಎಲ್ಲಿಗೆ ಹೋಗುತ್ತಿರುವೆ, ಎಂದು ನನಗೆ ತಿಳಿದಿದೆ. ನಿಮಗಾದರೋ ನಾನು ‘ಬಂದುದು ಎಲ್ಲಿಂದ, ಹೋಗುವುದು ಎಲ್ಲಿಗೆ’ ಎಂದು ತಿಳಿಯದು.


ಆದರೆ, ಇಂದಿನವರೆಗೂ ದೇವರು ನನಗೆ ನೆರವಾಗುತ್ತಾ ಬಂದಿದ್ದಾರೆ. ಎಂದೇ ದೊಡ್ಡವರು ಚಿಕ್ಕವರೆನ್ನದೆ, ಎಲ್ಲರಿಗೂ ಕ್ರಿಸ್ತಯೇಸುವಿನ ಪರವಾಗಿ ಸಾಕ್ಷಿನೀಡುತ್ತಾ ನಿಮ್ಮ ಮುಂದೆ ನಿಂತಿರುತ್ತೇನೆ. ನಾನು ಹೇಳುತ್ತಿರುವುದು, ಪ್ರವಾದಿಗಳು ಮತ್ತು ಮೋಶೆಯು ಮುಂದೆ ಏನು ಸಂಭವಿಸುವುದೆಂದು ಹೇಳಿದ್ದರೋ, ಅದನ್ನೇ ಹೊರತು ಮತ್ತೇನನ್ನೂ ನಾನು ಹೇಳುತ್ತಿಲ್ಲ.


ಇಲ್ಲಿಯವರೆಗೆ ಪೌಲನು ಹೇಳುತ್ತಿದ್ದನ್ನು ಜನರು ಕಿವಿಗೊಟ್ಟು ಕೇಳುತ್ತಿದ್ದರು. ಆಮೇಲೆ ಅವರು, “ಇವನು ಈ ಲೋಕದಿಂದಲೇ ತೊಲಗಬೇಕು; ಇಂಥವನು ಜೀವದಿಂದ ಇರಬಾರದು,” ಎಂದು ಗಟ್ಟಿಯಾಗಿ ಕೂಗಾಡಲಾರಂಭಿಸಿದರು.


“ ‘ನಮ್ಮ ನ್ಯಾಯತೀರಿಸುವ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?’ ಎಂದು ಇಸ್ರಯೇಲರಿಂದ ತಿರಸ್ಕೃತನಾದವನೇ ಆ ಮೋಶೆ. ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡ ತಮ್ಮ ದೂತನ ಮೂಲಕ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ನೇಮಿಸಿದ್ದು ಇವನನ್ನೇ.


ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು.


ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.


ಲೋಕೋದ್ಧಾರಕನು ಕಾಣಿಸಿಕೊಳ್ಳುವಾಗ ಆತನು ಎಲ್ಲಿಂದ ಬಂದನೆಂದು ಯಾರಿಗೂ ತಿಳಿದಿರುವುದಿಲ್ಲ. ಆದರೆ ಈತನು ಎಲ್ಲಿಂದ ಬಂದವರೆಂದು ನಮ್ಮೆಲ್ಲರಿಗೂ ತಿಳಿದಿದೆಯಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇ ‘ಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು.


“ ‘ಮಹಾದೇವಾಲಯವನ್ನು ಕೆಡವಿಬಿಟ್ಟು ಅದನ್ನು ಮೂರು ದಿನಗಳಲ್ಲಿ ಮರಳಿ ಕಟ್ಟುವ ಶಕ್ತಿ ನನಗಿದೆ,’ ಎಂದು ಇವನು ಹೇಳಿದ್ದಾನೆ,” ಎಂದರು.


ಆದರೆ ಫರಿಸಾಯರು ಇದನ್ನು ಕೇಳಿದಾಗ, “ಇವನು ದೆವ್ವಗಳನ್ನು ಬಿಡಿಸುತ್ತಿರುವುದು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದಲೇ,” ಎಂದರು.


“ನಾನು ನನ್ನ ದಾಸನಾದ ಮೋಶೆಗೆ ಬೋಧಿಸಿದ ಧರ್ಮಶಾಸ್ತ್ರವನ್ನು ಜ್ಞಾಪಕಕ್ಕೆ ತಂದುಕೊಳ್ಳಿ. ಆ ವಿಧಿನಿಯಮಗಳನ್ನು ಆತನಿಗೆ ಹೋರೇಬ್ ಬೆಟ್ಟದಲ್ಲಿ ಕೊಟ್ಟದ್ದು ಇಸ್ರಯೇಲರು ಅವುಗಳನ್ನು ಅನುಸರಿಸಲೆಂದೇ.”


ಅಸೂಯೆಗೊಂಡರು ಪಾಳೆಯದೊಳು ಮೋಶೆಯ ಮೇಲೆ I ಪ್ರಭುವಿಗೆ ಪ್ರತಿಷ್ಠಿತನಾದ ಆ ಆರೋನನ ಮೇಲೆ II


ಕಳಿಸಿದ ತನ್ನ ದಾಸ ಮೋಶೆಯನು I ತಾನು ಆರಿಸಿಕೊಂಡ ಆರೋನನನು II


ತೋರಿಸಿದಾತ ತನ್ನ ಮಾರ್ಗವನು ಮೋಶೆಗೆ I ತನ್ನ ಮಹತ್ಕಾರ್ಯಗಳನು ಇಸ್ರಯೇಲರಿಗೆ II


ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ಯೇಹುವು ಮರಳಿ ತನ್ನ ಒಡೆಯನ ಸೇವಕರ ಹತ್ತಿರ ಬಂದನು. ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಅವನು, “ಆ ಮನುಷ್ಯ ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೆ ಗೊತ್ತಲ್ಲವೆ?” ಎಂದು ಉತ್ತರಕೊಟ್ಟನು.


ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕರಗಿಸಬೇಕು,’ ಎಂದು ಆಜ್ಞಾಪಿಸಿದನು.


ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡಿದರು.


ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲ ನನ್ನ ಸ್ವಂತ ಆಲೋಚನೆಯಿಂದ ಆಗಲಿಲ್ಲ, ಸರ್ವೇಶ್ವರನೇ ಇವುಗಳನ್ನು ನಡೆಸುವುದಕ್ಕೆ ನನ್ನನ್ನು ಕಳಿಸಿದ್ದಾರೆಂದು ನೀವೇ ತಿಳಿದುಕೊಳ್ಳಬಹುದು.


ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು ಸ್ವಾಮಿ ಆಗ ಗಟ್ಟಿಯಾಗಿ ಇಂತೆಂದರು: “ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೇ ಬಂದವನಲ್ಲ: ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ.


ಅದಕ್ಕೆ ಆ ಕುರುಡ, “ಏನಾಶ್ಚರ್ಯ! ನನಗೆ ಕಣ್ಣು ಬರಿಸಿದ್ದಾರೆ. ಆದರೂ ‘ಅವನು ಎಲ್ಲಿಯವನೋ ನಾವರಿಯೆವು’ ಎನ್ನುತ್ತೀರಿ.


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು