Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:7 - ಕನ್ನಡ ಸತ್ಯವೇದವು C.L. Bible (BSI)

7 (’ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ಸಿಲೋವ ಕೊಳಕ್ಕೆ ಹೋಗಿ ತೊಳಕೋ ಅಂದನು. (ಸಿಲೋವ ಎಂಬ ಮಾತಿಗೆ ಕಳುಹಿಸಲ್ಪಟ್ಟವನು ಎಂದರ್ಥ.) ಅವನು ಹೋಗಿ ತೊಳಕೊಂಡು ಕಣ್ಣು ಹೊಂದಿದವನಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಆ ಮನುಷ್ಯನಿಗೆ, “ಹೋಗಿ ಸಿಲೋವ ಕೊಳದಲ್ಲಿ ತೊಳೆದುಕೊ” ಎಂದು ಹೇಳಿದನು. (ಸಿಲೋವ ಅಂದರೆ “ಕಳುಹಿಸಲ್ಪಟ್ಟವನು.”) ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನಿಗೆ, “ಹೋಗು, ಸಿಲೋವ ಕೊಳದಲ್ಲಿ ತೊಳೆದುಕೋ,” ಎಂದರು. ಸಿಲೋವ ಎಂದರೆ, “ಕಳುಹಿಸಲಾದವನು” ಎಂದರ್ಥ. ಕುರುಡನು ಹೋಗಿ ಕಣ್ಣು ತೊಳೆದುಕೊಂಡು ದೃಷ್ಟಿಹೊಂದಿದವನಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಜಾವ್ನ್ ಸಿಲೊಆಮ್ ತಳ್ಯಾತ್ ಧುವ್ನ್ ಘೆ ಮಟ್ಲ್ಯಾನ್ ಸಿಲೊಆಮ್ ಮಟ್ಲ್ಯಾರ್ ಧಾಡಲ್ಲೊ ಮನುನ್ ಅರ್ತ್ ತನ್ನಾ ತೊ ಮಾನುಸ್ ಗೆಲೊ ಅನಿ ಅಪ್ನಾಚೆ ತೊಂಡ್ ಧುವ್ನ್ ಘೆವ್ನ್ ಯೆಲೊ. ತನ್ನಾ ತೆಕಾ ದಿಸುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:7
21 ತಿಳಿವುಗಳ ಹೋಲಿಕೆ  

ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ.


ಕೆಲವರಾದರೋ, “ಆ ಕುರುಡನಿಗೆ ಕಣ್ಣುಕೊಟ್ಟ ಈತ ಲಾಸರನು ಸಾಯದಂತೆ ಮಾಡಬಾರದಿತ್ತೆ?” ಎಂದರು.


ಅದಕ್ಕೆ ಅವನು, “ಯೇಸು ಎಂಬುವರು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿದರು, ‘ಶಿಲೋವಾಮಿಗೆ ಹೋಗಿ ತೊಳೆದುಕೊ,’ ಎಂದು ಹೇಳಿದರು; ನಾನು ಹೋಗಿ ತೊಳೆದುಕೊಂಡೆ; ನನಗೆ ಕಣ್ಣು ಬಂತು,” ಎಂದು ಹೇಳಿದನು.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


“ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ.


ಕಣ್ಣನ್ನೀಯುವನು ಪ್ರಭು ಕುರುಡರಿಗೆ I ಉದ್ಧಾರಕನಾ ಪ್ರಭು ಕುಗ್ಗಿದವರಿಗೆ I ಆತನ ಒಲವಿರುವುದು ಸಾಧು ಸಜ್ಜನರಿಗೆ II


ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸಿತ್ತೀರೋ?


ಕೊಡುವೆ ನೀನು ಕಣ್ಣನ್ನು ಕುರುಡರಿಗೆ ತರುವೆ ಬಂಧಿಗಳನ್ನು ಸೆರೆಯಿಂದ ಹೊರಗೆ ಕತ್ತಲೆಯ ಕಾರಾಗೃಹದಿಂದ ಅವರನ್ನು ಬೆಳಕಿಗೆ.


ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.


ಅದಕ್ಕೆ ಸರ್ವೇಶ್ವರ, “ಮನುಷ್ಯರಿಗೆ ಬಾಯಿಕೊಟ್ಟವರು ಯಾರು? ಒಬ್ಬನನ್ನು ಮೂಕನಾಗಿ, ಮತ್ತೊಬ್ಬನನ್ನು ಕಿವುಡನಾಗಿ, ಇನ್ನೊಬ್ಬನನ್ನು ಕಣ್ಣುಳ್ಳವನಾಗಿ, ಮಗದೊಬ್ಬನನ್ನು ಕಣ್ಣಿಲ್ಲದವನಾಗಿ ಇಡುವವರು ಯಾರು? ಸರ್ವೇಶ್ವರನಾಗಿರುವ ನಾನೇ ಅಲ್ಲವೆ?


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?


ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು.


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


ಕರೆಗೊಡಿರಿ ಆ ಜನರಿಗೆ ಕಣ್ಣಿದ್ದರೂ ಕುರುಡರಾದವರಿಗೆ ಕಿವಿಯಿದ್ದರೂ ಕಿವುಡಾದವರಿಗೆ.


ಆಗ ನೋಡುವವರ ಕಣ್ಣು ಮಬ್ಬಾಗದು, ಕೇಳುವವರ ಕಿವಿ ಮಂದವಾಗದು.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು