Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:14 - ಕನ್ನಡ ಸತ್ಯವೇದವು C.L. Bible (BSI)

14 ಅವರು ಇದನ್ನು ಕೇಳಿ ಇನ್ನೂ ಹೆಚ್ಚಾಗಿ ಅತ್ತರು. ಅನಂತರ ಒರ್ಫಾ ಅತ್ತೆಗೆ ಮುತ್ತಿಟ್ಟು ತನ್ನ ಮನೆಗೆ ಹಿಂದಿರುಗಿ ಹೋದಳು. ರೂತಳು ಮಾತ್ರ ಅತ್ತೆಯನ್ನು ಬಿಟ್ಟುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಅವರು ತಿರಿಗಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟುಹೋದಳು; ರೂತಳಾದರೋ ಅತ್ತೆಯನ್ನೇ ಅಂಟಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರೆಲ್ಲರೂ ಮತ್ತೊಮ್ಮೆ ಗಟ್ಟಿಯಾಗಿ ಅತ್ತರು. ಒರ್ಫಾಳು ನೊವೊಮಿಗೆ ಮುದ್ದಿಟ್ಟು ಹೊರಟುಹೋದಳು. ಆದರೆ ರೂತಳು ಅವಳನ್ನು ಮುದ್ದಿಟ್ಟು ಆಕೆಯೊಂದಿಗೆ ಉಳಿದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವರು ತಿರುಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಾ ತನ್ನ ಅತ್ತೆಯನ್ನು ಮುದ್ದಿಟ್ಟು ಹೊರಟು ಹೋದಳು; ಆದರೆ ರೂತಳು ಅತ್ತೆಯನ್ನು ಅಂಟಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:14
22 ತಿಳಿವುಗಳ ಹೋಲಿಕೆ  

ಗೆಳೆಯರಂತೆ ನಟಿಸಿ ನಾಶಗೊಳಿಸುವವರು ಅನೇಕರುಂಟು; ಸಹೋದರನಿಗಿಂತ ಪ್ರಿಯನಾದ ಸ್ನೇಹಿತನೂ ಉಂಟು.


ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


“ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು.


ಇದನ್ನು ಕೇಳಿದ್ದೇ ಆ ಯುವಕ ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟೇಹೋದ. ಏಕೆಂದರೆ ಅವನಿಗೆ ಅಪಾರ ಆಸ್ತಿಪಾಸ್ತಿಯಿತ್ತು.


ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ದಯೆತೋರಿಸುವರು ಸರ್ವೇಶ್ವರ ಯಕೋಬ್ಯರಿಗೆ, ಆರಿಸಿಕೊಳ್ಳುವರು ಮತ್ತೆ ಇಸ್ರಯೇಲರನ್ನೆ, ನೆಲೆಗೊಳಿಸುವರವರನ್ನು ತಾಯಿನಾಡಿನಲ್ಲೆ. ಹೊರನಾಡಿಗರು ಕೂಡಿಕೊಳ್ಳುವರು ಅವರೊಡನೆ, ಸೇರಿಕೊಳ್ಳುವರವರು ಯಕೋಬ ಮನೆತನಕ್ಕೆ.


ಮಿತ್ರನ ಪ್ರೀತಿ ನಿರಂತರ; ಕಷ್ಟಕ್ಕಾದವನೆ ಹುಟ್ಟುನಂಟ.


ಕೂಡಲೆ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ; ಅನಂತರ ನಿನ್ನನ್ನು ಹಿಂಬಾಲಿಸುವೆನು,” ಎಂದನು. ಅದಕ್ಕೆ ಎಲೀಯನು, “ಹೋಗಿ ಬಾ; ನಾನು ನಿನಗೆ ಮಾಡಬೇಕಾದದ್ದನ್ನು ಮಾಡಿದ್ದೇನೆ,” ಎಂದು ಉತ್ತರಕೊಟ್ಟನು.


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಕೆಲವರು ಅವನನ್ನು ಸೇರಿಕೊಂಡು ಭಕ್ತವಿಶ್ವಾಸಿಗಳಾದರು. ಇವರಲ್ಲಿ ಅರಿಯೊಪಾಗದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.


ಬೆಳಿಗ್ಗೆ ಲಾಬಾನನು ಎದ್ದು, ತನ್ನ ಪುತ್ರಿಯರಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು, ಆಶೀರ್ವದಿಸಿ, ತನ್ನ ಊರಿಗೆ ಹೊರಟುಹೋದನು.


ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು ಬೀಳ್ಕೊಡಲೂ ಆಗದಂತೆ ಮಾಡಿದೆ. ನೀನು ಮಾಡಿದ್ದು ಎಂಥ ಹುಚ್ಚು ಕೆಲಸ.


ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.


ಅವರು ಬೆಳೆದು ದೊಡ್ಡವರಾಗುವವರೆಗೂ ಮದುವೆಯಾಗದೆ ಇರುವಿರೋ? ಬೇಡ, ಮಕ್ಕಳೇ, ಸರ್ವೇಶ್ವರ ನನ್ನ ಕೈ ಬಿಟ್ಟಿದ್ದಾರೆ, ನಿಮಗಾಗಿ ನಾನು ಬಹಳ ವಿಷಾದಿಸುತ್ತೇನೆ,” ಎಂದು ಸಮಾಧಾನ ಹೇಳಿದಳು.


ಆಗ ನವೊಮಿ ರೂತಳಿಗೆ: “ನೋಡು, ನಿನ್ನ ಓರಗಿತ್ತಿಯು ತನ್ನ ಜನಾಂಗದವರ ಬಳಿಗೂ ತನ್ನ ಕುಲದೇವರ ಬಳಿಗೂ ಹಿಂದಿರುಗಿ ಹೋಗಿದ್ದಾಳೆ. ನೀನೂ ಅವಳಂತೆಯೇ ಹೋಗಿಬಿಡು,” ಎಂದು ಒತ್ತಾಯಪಡಿಸಿದಳು.


ಜನರೆಲ್ಲರು ನದಿ ದಾಟಿದರು. ಅರಸನು ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಮರಳಿದನು.


ಆದ್ದರಿಂದ ಅವಳು ಅಲ್ಲಿಗೆ ಹಿಂದಿರುಗಿ ಹೋಗಲು ಸಿದ್ಧತೆಮಾಡಿ ಜುದೇಯಕ್ಕೆ ಹೊರಟಳು. ಸೊಸೆಯರು ಅವಳ ಜೊತೆಯಲ್ಲೆ ಹೋದರು.


ಅದಕ್ಕೆ ಬೋವಜನು, “ನಿನ್ನ ಪತಿ ತೀರಿಹೋದಂದಿನಿಂದ ನೀನು ಅತ್ತೆಗಾಗಿ ಮಾಡಿದ್ದ ಎಲ್ಲವನ್ನೂ ಕುರಿತು ಕೇಳಿದ್ದೇನೆ. ನೀನು ಹೇಗೆ ನಿನ್ನ ತಂದೆತಾಯಿಗಳನ್ನು ಮತ್ತು ಸ್ವಂತ ನಾಡನ್ನು ಬಿಟ್ಟು, ಅಪರಿಚಿತರಾದ ಜನರ ಮಧ್ಯೆ ವಾಸಿಸಲು ಬಂದಿರುವೆ ಎಂಬುದು ಸಹ ನನಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು