Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:16 - ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ರೂತಳು: “ನಿಮ್ಮನ್ನು ಬಿಟ್ಟು ಹೋಗುವಂತೆ ಒತ್ತಾಯಪಡಿಸಬೇಡಿ. ನೀವು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುತ್ತೇನೆ. ನೀವು ಎಲ್ಲಿ ವಾಸಿಸಿದರೂ ನಾನು ಅಲ್ಲೇ ವಾಸಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಕೆಯು, “ನಿನ್ನನ್ನು ಬಿಟ್ಟು ಹಿಂದಿರುಗಿ ಹೋಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಕೆಯು - ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅದಕ್ಕೆ ರೂತಳು, “ನಿನ್ನನ್ನು ಬಿಟ್ಟು ಸ್ವಜನರ ಬಳಿಗೆ ಹಿಂದಿರುಗಿ ಹೋಗೆಂದು ನನಗೆ ಒತ್ತಾಯ ಮಾಡಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು. ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು. ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ರೂತಳು, “ನಿಮ್ಮನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡಿರಿ. ಏಕೆಂದರೆ ನೀವು ಎಲ್ಲಿ ಹೋಗುವಿರೋ ನಾನು ಅಲ್ಲಿಗೇ ಬರುವೆನು. ನೀವು ಎಲ್ಲಿ ಇಳುಕೊಳ್ಳುವಿರೋ ನಾನು ಅಲ್ಲಿ ಇಳುಕೊಳ್ಳುವೆನು. ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:16
23 ತಿಳಿವುಗಳ ಹೋಲಿಕೆ  

ಅದಕ್ಕೆ ಇತ್ತೈ, “ಸರ್ವೇಶ್ವರನಾಣೆ, ನನ್ನ ಒಡೆಯರಾದ ಅರಸರ ಜೀವದಾಣೆ, ಪ್ರಾಣಹೋದರೂ ಉಳಿದರೂ ನನ್ನ ಒಡೆಯರಾದ ಅರಸರಿರುವಲ್ಲಿಗೇ ಹೋಗುವೆನು,” ಎಂದು ಉತ್ತರಕೊಟ್ಟನು.


ಎಲೌ ಕುವರಿಯೇ, ಕೇಳು, ಎನ್ನ ಮಾತಿಗೆ ಕಿವಿಗೊಡು I ನಿನ್ನ ಜನರನು, ತೌರು ಮನೆಯನು ಮರೆತುಬಿಡು II


ಆಗ ಒಬ್ಬ ಧರ್ಮಶಾಸ್ತ್ರಿ ಬಂದು, “ಗುರುವೇ, ನೀವು ಎಲ್ಲಿಗೆಹೋದರೂ ನಿಮ್ಮನ್ನು ಹಿಂಬಾಲಿಸಿ ಬರುತ್ತೇನೆ,” ಎಂದನು.


ಪೇತ್ರನು, “ಈಗಲೇ ನಿಮ್ಮ ಹಿಂದೆಬರಲು ಏಕಾಗದು? ಪ್ರಭೂ, ನಿಮಗಾಗಿ ಪ್ರಾಣವನ್ನು ಕೊಡಲೂ ಸಿದ್ಧನಿದ್ದೇನೆ,” ಎಂದನು.


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ದಯೆತೋರಿಸುವರು ಸರ್ವೇಶ್ವರ ಯಕೋಬ್ಯರಿಗೆ, ಆರಿಸಿಕೊಳ್ಳುವರು ಮತ್ತೆ ಇಸ್ರಯೇಲರನ್ನೆ, ನೆಲೆಗೊಳಿಸುವರವರನ್ನು ತಾಯಿನಾಡಿನಲ್ಲೆ. ಹೊರನಾಡಿಗರು ಕೂಡಿಕೊಳ್ಳುವರು ಅವರೊಡನೆ, ಸೇರಿಕೊಳ್ಳುವರವರು ಯಕೋಬ ಮನೆತನಕ್ಕೆ.


ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ.


ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


ಈ ನಾಡಿನ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಸಕಲ ದೇಶ-ಕುಲ-ಭಾಷೆಗಳವರಲ್ಲಿ ಯಾರಾದರು ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರ ವಿಷಯದಲ್ಲಿ ಅಲ್ಲಸಲ್ಲದ ಮಾತನಾಡಿದರೆ ಅಂಥವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸಬೇಕೆಂದು ಆಜ್ಞೆ ವಿಧಿಸುತ್ತೇನೆ. ಹೀಗೆ ರಕ್ಷಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವೇ ಇಲ್ಲ,” ಎಂದು ಹೇಳಿದನು.


ಆಗ ನವೊಮಿ ರೂತಳಿಗೆ: “ನೋಡು, ನಿನ್ನ ಓರಗಿತ್ತಿಯು ತನ್ನ ಜನಾಂಗದವರ ಬಳಿಗೂ ತನ್ನ ಕುಲದೇವರ ಬಳಿಗೂ ಹಿಂದಿರುಗಿ ಹೋಗಿದ್ದಾಳೆ. ನೀನೂ ಅವಳಂತೆಯೇ ಹೋಗಿಬಿಡು,” ಎಂದು ಒತ್ತಾಯಪಡಿಸಿದಳು.


ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು; ನೀವು ಸಾಯುವಲ್ಲೇ ನಾನು ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಲ್ಲಿಯೂ ನಾನು ನಿಮ್ಮನ್ನು ಬಿಟ್ಟಿರಲಾರೆ. ಇಲ್ಲದಿದ್ದರೆ ಸರ್ವೇಶ್ವರ ನನಗೆ ತಕ್ಕ ದಂಡನೆಯನ್ನು ವಿಧಿಸಲಿ!” ಎಂದು ಬೇಡಿಕೊಂಡಳು.


ಅವನು ನಿನಗೆ ನವಚೈತನ್ಯವನ್ನು ಕೊಟ್ಟು ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಣೆಯನ್ನು ನೀಡುವನು. ಸಪ್ತಕುವರರಿಗಿಂತ ನಿನಗೆ ಮೆಚ್ಚುಗೆ ಆದ ನಿನ್ನ ಪ್ರಿಯ ಸೊಸೆ ಈ ಮಗುವನ್ನು ನಿನಗೆ ಕೊಟ್ಟಿದ್ದಾಳೆ!” ಎಂದು ಹರಸಿದರು.


ಮಿತ್ರನ ಪ್ರೀತಿ ನಿರಂತರ; ಕಷ್ಟಕ್ಕಾದವನೆ ಹುಟ್ಟುನಂಟ.


ಅದಕ್ಕೆ ಆ ಮೇಸ್ತ್ರಿ, “ಇವಳು ಮೋವಾಬ್ಯಳು, ನವೊಮಿಯ ಸಂಗಡ ಮೋವಾಬ್ ನಾಡಿನಿಂದ ಹಿಂದಿರುಗಿ ಬಂದವಳು.


ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು