Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:12 - ಕನ್ನಡ ಸತ್ಯವೇದವು C.L. Bible (BSI)

12 ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ಮಾಡಿದ ಉಪಕಾರಕ್ಕೆ ಪ್ರತಿಯಾಗಿ ಯೆಹೋವನು ನಿನಗೆ ಉಪಕಾರಮಾಡಲಿ; ನೀನು ಯಾವಾತನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳ ಬಂದಿಯೋ ಆ ಇಸ್ರಾಯೇಲ್‍ದೇವರಾದ ಯೆಹೋವನು ನಿನಗೆ ಉತ್ತಮವಾದ ಪ್ರತಿಫಲವನ್ನು ಅನುಗ್ರಹಿಸಲಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀನು ಮಾಡಿದ ಎಲ್ಲ ಸತ್ಕಾರ್ಯಕ್ಕೆ ಯೆಹೋವನು ನಿನಗೆ ಸಂಪೂರ್ಣ ಪ್ರತಿಫಲ ಕೊಡುವನು; ಯಾಕೆಂದರೆ ನೀನು ಯಾವಾತನ ಆಶ್ರಯವನ್ನು ಕೋರಿ ಬಂದಿರುವಿಯೋ ಆತನು ನಿನ್ನನ್ನು ರಕ್ಷಿಸುತ್ತಾನೆ” ಎಂದು ಸಮಾಧಾನ ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:12
29 ತಿಳಿವುಗಳ ಹೋಲಿಕೆ  

ನಿನ್ನಚಲ ಪ್ರೀತಿ, ಹೇ ದೇವಾ, ಎಷ್ಟೋ ಅಮೂಲ್ಯ I ನಿನ್ನಕ್ಕರೆಯ ರೆಕ್ಕೆಗಳಡಿ ನರಮಾನವರಿಗಾಶ್ರಯ II


ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II


ನನಗೆ ನೀನು ನಿರಂತರದ ಸಹಾಯಕ I ನಿನ್ನ ರೆಕ್ಕೆಗಳಡಿ ನಾ ಸುಖಿ ಗಾಯಕ II


ಮುತ್ತಿಗೆ ಹಾಕಿರುವ ಹೀನ ಶತ್ರುಗಳಿಂದ I ಸುತ್ತುವರೆದಿರುವ ಪ್ರಾಣ ವೈರಿಗಳಿಂದ I ನಿನ್ನ ಕನೀನಿಕೆಯಂತೆ ಎನ್ನ ಕಾಪಾಡು I ನಿನ್ನ ರೆಕ್ಕೆಗಳ ನೆರಳಲಿ ಎನ್ನ ಮರೆಸಿಡು II


ನಿನ್ನ ಗುಡಾರವಾಗಲಿ ನನಗೆ ನಿರಂತರ ಬಿಡಾರ I ನಿನ್ನ ರೆಕ್ಕೆಗಳ ಮರೆಯೆ ನನಗೆ ಆಶ್ರಯದಾಗರ II


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಈಜಿಪ್ಟಿನ ಸಕಲ ಐಶ್ವರ್ಯಕ್ಕಿಂತಲೂ ‘ಕ್ರಿಸ್ತ'ನಿಗೋಸ್ಕರ ನಿಂದೆಯನ್ನು ಅನುಭವಿಸುವುದು ದೊಡ್ಡ ಭಾಗ್ಯವೆಂದು ಆತನು ಎಣಿಸಿದನು. ಏಕೆಂದರೆ, ದೇವರಿಂದ ದೊರಕಲಿದ್ದ ಪ್ರತಿಫಲದ ಮೇಲೆಯೇ ಆತನ ಮನಸ್ಸು ನಾಟಿತ್ತು.


ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುತ್ತಾನೆಯೇ? ನೀನು ಈ ದಿನ ನನಗೆ ಮಾಡಿದ ಉಪಕಾರಕ್ಕಾಗಿ ಸರ್ವೇಶ್ವರ ನಿನಗೆ ಪ್ರತ್ಯುಪಕಾರಮಾಡಲಿ.


ಅದಕ್ಕೆ ರೂತಳು: “ನಿಮ್ಮನ್ನು ಬಿಟ್ಟು ಹೋಗುವಂತೆ ಒತ್ತಾಯಪಡಿಸಬೇಡಿ. ನೀವು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುತ್ತೇನೆ. ನೀವು ಎಲ್ಲಿ ವಾಸಿಸಿದರೂ ನಾನು ಅಲ್ಲೇ ವಾಸಿಸುತ್ತೇನೆ.


“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II


ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.


“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಅಂತಿಮ ದಿನದಂದು ಪ್ರಭು ಯೇಸು ಆತನಿಗೆ ಕರುಣೆತೋರಲಿ. ನಾನು ಏಷ್ಯಾದಲ್ಲಿದ್ದಾಗ ಆತನು ನನಗೆ ಎಷ್ಟೊಂದು ನೆರವು ನೀಡಿದನೆಂದು ನಿನಗೆ ಚೆನ್ನಾಗಿ ತಿಳಿದಿದೆ.


“ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.


ಆಗ ನಿನ್ನ ಭವಿಷ್ಯ ಶುಭದಾಯಕವಾಗಿರುವುದು, ನಿನ್ನ ನಿರೀಕ್ಷೆ ಸಾರ್ಥಕವಾಗುವುದು.


ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II


ನಿಮ್ಮಲ್ಲಿ ಕೆಲವರು ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದಾರೆ. ಲೌಕಿಕ ಜ್ಞಾನದಿಂದ ನಿರರ್ಥಕವಾಗಿ ಉಬ್ಬಿಕೊಂಡಿದ್ದಾರೆ. ತಾವು ಬಹಳ ವಿನಯಶಾಲಿಗಳೆಂದು ಹೆಚ್ಚಳಪಡುತ್ತಾರೆ. ಇಂಥವರು ನಿಮ್ಮನ್ನು ಕಡೆಗಾಣಿಸದಂತೆ ಎಚ್ಚರದಿಂದಿರಿ. ಇವರು ಯೇಸುಕ್ರಿಸ್ತರೆಂಬ ಶಿರಸ್ಸಿನಿಂದ ಬೇರ್ಪಟ್ಟಿದ್ದಾರೆ.


ಅದಕ್ಕೆ ಬೋವಜನು, “ನಿನ್ನ ಪತಿ ತೀರಿಹೋದಂದಿನಿಂದ ನೀನು ಅತ್ತೆಗಾಗಿ ಮಾಡಿದ್ದ ಎಲ್ಲವನ್ನೂ ಕುರಿತು ಕೇಳಿದ್ದೇನೆ. ನೀನು ಹೇಗೆ ನಿನ್ನ ತಂದೆತಾಯಿಗಳನ್ನು ಮತ್ತು ಸ್ವಂತ ನಾಡನ್ನು ಬಿಟ್ಟು, ಅಪರಿಚಿತರಾದ ಜನರ ಮಧ್ಯೆ ವಾಸಿಸಲು ಬಂದಿರುವೆ ಎಂಬುದು ಸಹ ನನಗೆ ತಿಳಿದಿದೆ.


ಆಗ ರೂತಳು, “ಒಡೆಯಾ, ತಾವು ನನಗೆ ದೊಡ್ಡ ಉಪಕಾರವನ್ನು ಮಾಡಿದ್ದೀರಿ. ನಾನು ತಮ್ಮ ದಾಸಿ ಎನಿಸಿಕೊಳ್ಳುವುದಕ್ಕೂ ಯೋಗ್ಯಳಲ್ಲ. ಆದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿದ್ದೀರಿ,” ಎಂದು ಹೇಳಿದಳು.


ಅವನು ನಿನಗೆ ನವಚೈತನ್ಯವನ್ನು ಕೊಟ್ಟು ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಣೆಯನ್ನು ನೀಡುವನು. ಸಪ್ತಕುವರರಿಗಿಂತ ನಿನಗೆ ಮೆಚ್ಚುಗೆ ಆದ ನಿನ್ನ ಪ್ರಿಯ ಸೊಸೆ ಈ ಮಗುವನ್ನು ನಿನಗೆ ಕೊಟ್ಟಿದ್ದಾಳೆ!” ಎಂದು ಹರಸಿದರು.


ಸರ್ವೇಶ್ವರ ಹೀಗೆನ್ನುತ್ತಾರೆ: “ನಿಲ್ಲಿಸು ನಿನ್ನ ಗೋಳಾಟವನ್ನು ಒರಸು ನಿನ್ನ ಕಣ್ಗಳಿಂದ ನೀರನ್ನು. ನಿನ್ನ ಪ್ರಯಾಸ ಸಾರ್ಥಕವಾಗುವುದು ಶತ್ರುವಿನ ದೇಶದಿಂದ ನಿನ್ನ ಮಕ್ಕಳು ಹಿಂದಿರುಗುವರು. ಸರ್ವೇಶ್ವರನಾದ ನನ್ನ ನುಡಿ ಇದು.”


ಕೇಳು; ನೀನು ಹೇಗೂ ಅರಸನಾಗುವೆಯೆಂದೂ ಇಸ್ರಯೇಲ್ ರಾಜ್ಯ ನಿನ್ನ ಆಳ್ವಿಕೆಯಲ್ಲಿ ಸ್ಥಿರವಾಗುವುದೆಂದೂ ಬಲ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು