Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:14 - ಕನ್ನಡ ಸತ್ಯವೇದವು C.L. Bible (BSI)

14 ಊಟದ ಸಮಯದಲ್ಲಿ ಬೋವಜನು ರೂತಳನ್ನು ಕರೆದು, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ದ್ರಾಕ್ಷಾರಸದಲ್ಲಿ ಅದ್ದಿ ತಿನ್ನು,” ಎಂದನು. ಆಕೆ ಕೊಯ್ಯುವವರ ಸಂಗಡ ಕುಳಿತುಕೊಂಡಳು. ಇದಲ್ಲದೆ ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಅವಳು ತೃಪ್ತಿಯಾಗಿ ಊಟಮಾಡಿ ಇನ್ನೂ ಸ್ವಲ್ಪ ಉಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಊಟದ ವೇಳೆಯಲ್ಲಿ ಬೋವಜನು “ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು” ಎಂದು ಕರೆಯಲು ಆಕೆಯು ಹೋಗಿ ತೆನೆ ಕೊಯ್ಯುವವರ ಬಳಿಯಲ್ಲಿ ಕುಳಿತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಊಟದ ವೇಳೆಯಾದಾಗ ಬೋವಜನು - ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು ಎಂದು ಕರೆಯಲು ಆಕೆಯು ಹೋಗಿ ಕೊಯ್ಯುವವರ ಬಳಿಯಲ್ಲಿ ಕೂತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಟ್ಟುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಊಟದ ಸಮಯದಲ್ಲಿ ಬೋವಜನು ರೂತಳಿಗೆ, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ಹುಳಿರಸದಲ್ಲಿ ಅದ್ದಿಕೊಂಡು ತಿನ್ನು” ಎಂದು ಹೇಳಿದನು. ರೂತಳು ಕೆಲಸಗಾರರ ಜೊತೆ ಕುಳಿತುಕೊಂಡಳು. ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ರೂತಳು ಹೊಟ್ಟೆತುಂಬ ಊಟ ಮಾಡಿದ ಮೇಲೂ ಸ್ವಲ್ಪ ಆಹಾರ ಉಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಊಟದ ವೇಳೆಯಲ್ಲಿ ಬೋವಜನು ಅವಳಿಗೆ, “ಇಲ್ಲಿ ಹತ್ತಿರ ಬಂದು ರೊಟ್ಟಿ ತಿಂದು ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು,” ಎಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು, ಇನ್ನೂ ಉಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:14
17 ತಿಳಿವುಗಳ ಹೋಲಿಕೆ  

ಅದನ್ನು ತೆಗೆದುಕೊಂಡು ಊರೊಳಕ್ಕೆ ಹೋಗಿ ತನ್ನ ಅತ್ತೆಗೆ ತೋರಿಸಿದಳು. ಅಂತೆಯೇ ತನ್ನ ಆಹಾರದಿಂದ ಉಳಿಸಿಟ್ಟಿದ್ದನ್ನು ತನ್ನ ಅತ್ತೆಗೆ ಕೊಟ್ಟಳು.


ಎಲ್ಲರೂ ಹೊಟ್ಟೆತುಂಬ ತಿಂದು ತೃಪ್ತರಾದರು. ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿಗಳ ತುಂಬ ಆದುವು.


ನೀವು ಹೊಟ್ಟೆತುಂಬ ಉಂಡು ಸುಖದಿಂದಿರುವಾಗ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂಥ ಉತ್ತಮ ನಾಡನ್ನು ಕೊಟ್ಟದ್ದಕ್ಕಾಗಿ ಅವರನ್ನು ಸ್ತುತಿಸಬೇಕು.


ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?


ಆದರೆ ಧರ್ಮವಂತನು ಮಹತ್ಕಾರ್ಯಗಳಲ್ಲಿಯೇ ನಿರತನಾಗಿರುತ್ತಾನೆ.


ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II


ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳನ್ನು ಕೊಟ್ಟರು; ಊಟಕ್ಕಾಗಿ ಗೋದಿ, ಜವೆಗೋದಿ ಹಿಟ್ಟು, ಹುರಿಗಾಳು,


ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷೀ ಗೊಂಚಲುಗಳು, ಅಂಜೂರ ಹಣ್ಣುಗಳ ಇನ್ನೂರು ಉಂಡೆಗಳು, ಇವುಗಳನ್ನೆಲ್ಲ ಕತ್ತೆಗಳ ಮೇಲೆ ಹೇರಿಸಿದಳು.


ಒಂದು ದಿನ ಜೆಸ್ಸೆಯನು ತನ್ನ ಮಗ ದಾವೀದನಿಗೆ, “ನೋಡು, ಇಲ್ಲಿ ಹತ್ತು ಕಿಲೋಗ್ರಾಂ ಹುರಿಗಾಳು, ಹತ್ತು ರೊಟ್ಟಿ ಇವೆ. ಇವುಗಳನ್ನು ತೆಗೆದುಕೊಂಡು ಬೇಗನೆ ಪಾಳೆಯಕ್ಕೆ ಹೋಗಿ ನಿನ್ನ ಅಣ್ಣಂದಿರಿಗೆ ಕೊಟ್ಟು ಬಾ.


ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವರು; ನೀವು ಆಹಾರದಿಂದ ತೃಪ್ತರಾಗುವಿರಿ.


ಆಗ ರೂತಳು, “ಒಡೆಯಾ, ತಾವು ನನಗೆ ದೊಡ್ಡ ಉಪಕಾರವನ್ನು ಮಾಡಿದ್ದೀರಿ. ನಾನು ತಮ್ಮ ದಾಸಿ ಎನಿಸಿಕೊಳ್ಳುವುದಕ್ಕೂ ಯೋಗ್ಯಳಲ್ಲ. ಆದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿದ್ದೀರಿ,” ಎಂದು ಹೇಳಿದಳು.


ಅವಳು ಪುನಃ ಹಕ್ಕಲು ತೆನೆಗಳನ್ನು ಆರಿಸಿಕೊಳ್ಳಲು ಹೋದಾಗ, ಬೋವಜನು ತನ್ನ ಆಳುಗಳಿಗೆ, “ಸಿವುಡುಗಳ ಮಧ್ಯದಲ್ಲೂ ಅವಳು ತೆನೆಗಳನ್ನು ಆರಿಸಿಕೊಳ್ಳಲಿ; ಅಡ್ಡಿಮಾಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು