Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:2 - ಕನ್ನಡ ಸತ್ಯವೇದವು C.L. Bible (BSI)

2 ರೂತಳು ನವೊಮಿಗೆ: “ನಾನು ಹೊಲಗಳಿಗೆ ಹೋಗಿ ತೆನೆಗಳನ್ನು ಆಯ್ದುಕೊಂಡು ಬರಲೇ? ಇದಕ್ಕೆ ಯಾರಾದರು ನನಗೆ ನೆರವಾಗಬಹುದು,” ಎಂದು ಕೇಳಿದಳು. ನವೊಮಿ, “ಹೋಗಿ ಬಾ, ಮಗಳೇ,” ಎಂದು ಅಪ್ಪಣೆಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೋವಾಬ್ಯಳಾದ ರೂತಳು ನೊವೊವಿುಗೆ - ನಾನು ಹೋಗಿ ಯಾವನು ನನಗೆ ದಯೆತೋರಿಸುವನೋ ಅವನ ಹೊಲದಲ್ಲಿ ಹಕ್ಕಲತೆನೆಗಳನ್ನು ಕೂಡಿಸಿಕೊಂಡು ಬರುವೆನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಒಂದು ದಿನ ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಗಳಿಗೆ ಹೋಗುತ್ತೇನೆ. ಯಾರಾದರೂ ದಯೆತೋರಿ ತಮ್ಮ ಹೊಲದಲ್ಲಿ ಹಕ್ಕಲನ್ನು ಆರಿಸಲು ಅನುಮತಿ ಕೊಡಬಹುದು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಕ್ಕೆ ಹೋಗಿ ಯಾರ ದಯೆಯು ನನಗೆ ಆಗುವುದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿ ಕೊಳ್ಳುವೆನು,” ಎಂದಳು. ನೊವೊಮಿ, “ಹೋಗಿ ಬಾ, ಮಗಳೇ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:2
9 ತಿಳಿವುಗಳ ಹೋಲಿಕೆ  

ನಿಮ್ಮ ನಾಡಿನ ಹೊಲ ಕೊಯ್ಯುವಾಗ ಮೂಲೆ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು, ಹಕ್ಕಲನ್ನು ಆಯಬಾರದು, ಬಡವರಿಗಾಗಿ ಹಾಗು ಪರದೇಶಿಗಳಿಗಾಗಿ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಸರ್ವೇಶ್ವರ.


“ನೀವು ಹೊಲಕೊಯ್ಯುವಾಗ ಮೂಲೆಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು; ಕೊಯ್ದಾದ ಮೇಲೆ ಹಕ್ಕಲಾಯಬಾರದು.


ಕೊಯ್ಯುವವರ ಹಿಂದೆ ಹೋಗಿ ಸಿವುಡುಗಳ ಮಧ್ಯೆ ಹಕ್ಕಲಾಯ್ದುಕೊಳ್ಳುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲೇ ಇದ್ದಾಳೆ. ಸದ್ಯಕ್ಕೆ ನೆರಳಿನಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ,” ಎಂದು ಉತ್ತರಕೊಟ್ಟನು.


“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.


ದ್ರಾಕ್ಷಿತೋಟಗಳಲ್ಲೂ ಹಕ್ಕಲಾಯಕೂಡದು. ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡಬಗ್ಗರಿಗೂ ಪರದೇಶಿಗಳಿಗೂ ಅವುಗಳನ್ನು ಬಿಟ್ಟುಬಿಡಬೇಕು. ನಿಮ್ಮ ದೇವರಾದ ಸರ್ವೇಶ್ವರ ನಾನೇ.


ರೂತಳು ಕೊಯ್ಯುವವರ ಹಿಂದೆ ಹೋಗುತ್ತಾ ಅಲ್ಲಲ್ಲಿ ಬಿದ್ದ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಸುದೈವದಿಂದ ಅದು ಎಲಿಮೆಲೆಕನ ನೆಂಟನಾದ ಬೋವಜನ ಹೊಲವಾಗಿತ್ತು.


ಆ ಆಳುಗಳು ಹೋಗಿ ಯಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿಮ್ಮ ಅಣ್ಣ ಏಸಾವನ ಬಳಿಗೆ ಹೋಗಿದ್ದೆವು. ಅವರು ನಾನೂರು ಜನರ ಸಮೇತ ನಿಮ್ಮನ್ನು ಎದುರುಗೊಳ್ಳಲು ಬರುತ್ತಿದ್ದಾರೆ,” ಎಂದು ತಿಳಿಸಿದರು.


“ನಿಮ್ಮ ದಾಸಿಯಾದ ನನ್ನ ಮೇಲೆ ಕರುಣೆಯಿರಲಿ,” ಎಂದು ಹೇಳಿ ಆಕೆ ಅಲ್ಲಿಂದ ಹೊರಟುಹೋಗಿ ಊಟಮಾಡಿದಳು. ಬಳಿಕ ಅವಳ ದುಃಖ ದೂರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು