Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:20 - ಕನ್ನಡ ಸತ್ಯವೇದವು C.L. Bible (BSI)

20 ಇದನ್ನು ಕೇಳಿದ ನವೊಮಿ ಆವೇಶದಿಂದ, “ಜೀವಂತರಿಗೂ ಮೃತರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಸರ್ವೇಶ್ವರ ಅವನನ್ನು ಆಶೀರ್ವದಿಸಲಿ!” ಎಂದು ಹರಸಿ, “ಆ ಮನುಷ್ಯ ನಮಗೆ ಹತ್ತಿರದ ನೆಂಟ, ನಮ್ಮನ್ನು ಪೋಷಿಸಬೇಕಾದವನು,” ಎಂದು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ನೊವೊವಿುಯು - ಸತ್ತವರಿಗೂ ಬದುಕುವವರಿಗೂ ಬಿಡದೆ ದಯೆತೋರಿಸುತ್ತಿರುವ ಇವನು ಯೆಹೋವನಿಂದ ಆಶೀರ್ವಾದ ಹೊಂದಲಿ ಎಂದು ಹೇಳಿ, ಆ ಮನುಷ್ಯನು ತಮ್ಮ ಸಂಬಂಧಿಕನೆಂದೂ ಸಮೀಪಬಂಧುಗಳಲ್ಲೊಬ್ಬನೆಂದೂ ರೂತಳಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೊವೊಮಿಯು ತನ್ನ ಸೊಸೆಗೆ, “ಯೆಹೋವನು ಅವನಿಗೆ ಕೃಪೆತೋರಲಿ. ಯೆಹೋವನು ಸತ್ತುಹೋದವರಿಗೂ ಬದುಕಿರುವವರಿಗೂ ದಯೆತೋರಿಸುತ್ತಾನೆ” ಎಂದು ಹೇಳಿದಳು. ಆಮೇಲೆ ನೊವೊಮಿಯು ತನ್ನ ಸೊಸೆಗೆ, “ಬೋವಜನು ನಮ್ಮ ಸಂಬಂಧಿಗಳಲ್ಲೊಬ್ಬನಲ್ಲದೆ ನಮ್ಮ ಸಮೀಪದ ಬಂಧುವೂ ನಮ್ಮ ಸಂರಕ್ಷಕನೂ ಆಗಿದ್ದಾನೆ” ಎಂದು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೊವೊಮಿ ತನ್ನ ಸೊಸೆಗೆ, “ಜೀವಂತ ಇರುವವರಿಗೂ ಸತ್ತವರಿಗೂ ದಯೆ ತೋರಿಸುತ್ತಿರುವ ಯೆಹೋವ ದೇವರಿಂದ ಅವನಿಗೆ ಆಶೀರ್ವಾದವಾಗಲಿ,” ಎಂದಳು. ಅನಂತರ ನೊವೊಮಿ ಅವಳಿಗೆ, “ಆ ಮನುಷ್ಯನು ನಮ್ಮ ಬಂಧುವೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:20
15 ತಿಳಿವುಗಳ ಹೋಲಿಕೆ  

ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ರಾಜನಿಷ್ಠೆಯಿಂದ ನಿಮ್ಮ ಒಡೆಯ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ಸರ್ವೇಶ್ವರನ ಆಶೀರ್ವಾದ ನಿಮಗೆ ಲಭಿಸಲಿ!


ಮಿತ್ರನ ಪ್ರೀತಿ ನಿರಂತರ; ಕಷ್ಟಕ್ಕಾದವನೆ ಹುಟ್ಟುನಂಟ.


ನಿಮ್ಮ ಸ್ವಜನರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರು ಮಾರಿಕೊಂಡರೆ ಅವನ ಸಮೀಪ ನೆಂಟನು ಇದನ್ನು ಬಿಡಿಸಿಕೊಳ್ಳಬೇಕು.


ನನ್ನ ಬಗ್ಗೆ ನಿಮಗಿರುವ ಮಮತೆಯು ಇಷ್ಟು ದಿನಗಳಾದ ಮೇಲೆ ಪುನಃ ಅರಳಿದ್ದಕ್ಕೆ ಪ್ರಭುವಿನಲ್ಲಿ ನಾನು ಬಹಳ ಸಂತೋಷಪಡುತ್ತೇನೆ. ಇಂಥ ಮಮತೆ ನಿಮಗೆ ಮೊದಲಿನಿಂದ ಇತ್ತಾದರೂ ಅದನ್ನು ವ್ಯಕ್ತಪಡಿಲು ನಿಮಗೆ ಸೂಕ್ತ ಸಂದರ್ಭ ಒದಗಿರಲಿಲ್ಲ.


ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.


ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರು ಇನ್ನೂ ಉಳಿದಿದ್ದಾರೋ? ಯೋನಾತಾನನ ಸಲುವಾಗಿ ನಾನು ಅವರಿಗೆ ದಯೆತೋರಿಸಬೇಕೆಂದಿರುತ್ತೇನೆ,” ಎಂದು ವಿಚಾರಿಸಿದನು.


“ಸರ್ವೇಶ್ವರ ಸ್ವಾಮಿಗೆ ಸ್ತುತಿ ಸ್ತೋತ್ರ! ನಿನಗೊಬ್ಬ ವಂಶೋದ್ಧಾರಕನನ್ನು ಅನುಗ್ರಹಿಸಿದ ಇಸ್ರಯೇಲ್ ನಾಡಿನಲ್ಲಿ ಆ ಮಗು ಪ್ರಖ್ಯಾತನಾಗಲಿ!


ಅದಕ್ಕೆ ಆ ವ್ಯಕ್ತಿ, “ಹಾಗಾದರೆ ಹೊಲವನ್ನು ಕೊಂಡುಕೊಳ್ಳುವ ಹಕ್ಕನ್ನು ನಾನು ಬಿಟ್ಟುಕೊಡುತ್ತೇನೆ. ಇಲ್ಲದಿದ್ದರೆ ನನ್ನ ಕುಟುಂಬಕ್ಕೆ ಸೇರಿರುವ ಆಸ್ತಿಗೆ ನಷ್ಟವಾಗುತ್ತದೆ. ಆದ್ದರಿಂದ ಆ ಹಕ್ಕನ್ನು ನೀನೇ ವಹಿಸಿಕೋ, ನನ್ನಿಂದಾಗದು,” ಎಂದುಬಿಟ್ಟನು.


ಇದಲ್ಲದೆ ರೂತಳು, “ಸುಗ್ಗಿಕಾಲ ತೀರುವವರೆಗೂ ನನ್ನ ಆಳುಗಳ ಜೊತೆಯಲ್ಲೇ ಇರಬಹುದೆಂದು ಹೇಳಿದ್ದಾನೆ,” ಎಂದಳು.


ನಾನು ನಿಮಗೆ ಹತ್ತಿರದ ನೆಂಟನಾಗಿರುವುದೇನೋ ನಿಜ. ನಿನ್ನನ್ನು ಸಲಹುವ ಮೈದುನ ಕರ್ತವ್ಯ ನನ್ನದು. ಆದರೆ ನನಗಿಂತಲೂ ಹತ್ತಿರದ ನೆಂಟನೊಬ್ಬನಿದ್ದಾನೆ.


ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಹಿರಿಯರ ಮುಂದೆ ಕೊಂಡುಕೊಳ್ಳುವ ಹಕ್ಕು ಮೊದಲು ನಿನಗೆ, ಅನಂತರ ನನಗೆ ಸೇರಿದ್ದು; ಬೇರೆಯವರಿಗಲ್ಲ,” ಎಂದನು. ಆಗ ಆ ವ್ಯಕ್ತಿ: “ನಾನೇ ಕೊಂಡುಕೊಳ್ಳುತ್ತೇನೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು