Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:3 - ಕನ್ನಡ ಸತ್ಯವೇದವು C.L. Bible (BSI)

3 ರೂತಳು ಕೊಯ್ಯುವವರ ಹಿಂದೆ ಹೋಗುತ್ತಾ ಅಲ್ಲಲ್ಲಿ ಬಿದ್ದ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಸುದೈವದಿಂದ ಅದು ಎಲಿಮೆಲೆಕನ ನೆಂಟನಾದ ಬೋವಜನ ಹೊಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಕ್ಕವಳು - ನನ್ನ ಮಗಳೇ, ಹೋಗು ಎನ್ನಲು ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವಾಸ್ತ್ಯವಾಗಿದ್ದ ಹೊಲಕ್ಕೆ ಹೋಗಿ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೊವೊಮಿಯು, “ಆಗಲಿ ಮಗಳೇ, ಹಾಗೆಯೇ ಮಾಡು” ಅಂದಳು. ರೂತಳು ಹೊಲಗಳಿಗೆ ಹೋದಳು. ಅವಳು ಅಲ್ಲಿ ಫಸಲು ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾಯುತ್ತಾ ಎಲೀಮೆಲೆಕನ ಗೋತ್ರದವನಾದ ಬೋವಜನ ಹೊಲಕ್ಕೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ರೂತಳು ಹೊಲದಲ್ಲಿ ಕೊಯ್ಯುವವರ ಹಿಂದೆ ಹೋಗಿ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಆ ಹೊಲದ ಭಾಗ ಎಲೀಮೆಲೆಕನ ಕುಲದವನಾದ ಬೋವಜನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:3
10 ತಿಳಿವುಗಳ ಹೋಲಿಕೆ  

ಇಂಥವರು ತಮ್ಮ ಜೀವನೋಪಾಯಕ್ಕಾಗಿ ತಾವೇ ದುಡಿದು ಸಂಪಾದಿಸಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ಎಚ್ಚರಿಸಿ ಆಜ್ಞಾಪಿಸುತ್ತೇವೆ.


ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದುಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ.


ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ.


ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ವಿವರಿಸುತ್ತಿರುವಾಗಲೇ, ಜೀವದಾನಹೊಂದಿದ ಹುಡುಗನ ತಾಯಿ ತನ್ನ ಹೊಲಮನೆಗಳಿಗಾಗಿ ಮೊರೆಯಿಡಲು ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು, “ಅರಸರೇ, ನನ್ನ ಒಡೆಯರೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆ ಇವನ ತಾಯಿ,” ಎಂದು ಹೇಳಿದನು.


ರೂತಳು ನವೊಮಿಗೆ: “ನಾನು ಹೊಲಗಳಿಗೆ ಹೋಗಿ ತೆನೆಗಳನ್ನು ಆಯ್ದುಕೊಂಡು ಬರಲೇ? ಇದಕ್ಕೆ ಯಾರಾದರು ನನಗೆ ನೆರವಾಗಬಹುದು,” ಎಂದು ಕೇಳಿದಳು. ನವೊಮಿ, “ಹೋಗಿ ಬಾ, ಮಗಳೇ,” ಎಂದು ಅಪ್ಪಣೆಕೊಟ್ಟಳು.


ಸ್ವಲ್ಪ ಹೊತ್ತಾದ ಮೇಲೆ, ಇದ್ದಕ್ಕಿದ್ದ ಹಾಗೆ ಬೋವಜನು ಬೆತ್ಲೆಹೇಮಿನಿಂದ ಅಲ್ಲಿಗೆ ಬಂದನು. ಅವನು, “ಸರ್ವೇಶ್ವರಸ್ವಾಮಿ ನಿಮ್ಮೊಡನೆ ಇರಲಿ!” ಎಂದು ಕೆಲಸದಾಳುಗಳನ್ನು ವಂದಿಸಿದನು. ಅದಕ್ಕೆ ಅವರು, “ಸರ್ವೇಶ್ವರ ನಿಮ್ಮನ್ನೂ ಹರಸಲಿ!” ಎಂದು ಪ್ರತಿವಂದನೆ ಮಾಡಿದರು.


ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಹೋದಾಗ ಸೌಲ ತಮ್ಮ ಭರ್ಜಿಯನ್ನೂರಿಕೊಂಡು ನಿಂತಿದ್ದರು. ರಥಿಕರೂ ರಾಹುತರೂ ಅವರನ್ನು ಹಿಂದಟ್ಟಿಬರುತ್ತಿರುವುದನ್ನೂ ಕಂಡೆ.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು