Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:10 - ಕನ್ನಡ ಸತ್ಯವೇದವು C.L. Bible (BSI)

10 ಬೋವಜನು: “ಮಗಳೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ! ನೀನು ಬಡ ಯೌವನಸ್ಥನನ್ನಾಗಲೀ, ಸಿರಿವಂತ ಯೌವನಸ್ಥನನ್ನಾಗಲೀ ಅರಸಲಿಲ್ಲ. ನೀನು ನನಗೆ ತೋರಿದ ವಂಶ ಗೌರವವು ಇಲ್ಲಿಯವರೆಗೆ ನೀನು ಅತ್ತೆಗೆ ತೋರಿದ ಗೌರವಕ್ಕಿಂತಲೂ ಶ್ರೇಷ್ಠವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅವನು “ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಅಥವಾ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮೊದಲಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಅವನು - ನನ್ನ ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರನ್ನು ನೋಡಿ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮುಂಚಿಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಬೋವಜನು, “ಯುವತಿಯೇ, ಯೆಹೋವನು ನಿನಗೆ ದಯೆತೋರಲಿ. ನೀನು ನನ್ನ ಮೇಲೆ ತುಂಬಾ ಕರುಣೆಯನ್ನು ತೋರಿರುವೆ. ನೀನು ಮೊದಲು ನೊವೊಮಿಗೆ ತೋರಿದ ಕರುಣೆಗಿಂತಲೂ ಹೆಚ್ಚಿನ ಕರುಣೆಯನ್ನು ನನಗೆ ತೋರಿರುವೆ. ನೀನು ಒಬ್ಬ ತರುಣನನ್ನು ಅವನು ಬಡವನಾಗಿರಲಿ ಅಥವಾ ಶ್ರೀಮಂತನಾಗಿರಲಿ ಮದುವೆಗಾಗಿ ಆರಿಸಿಕೊಳ್ಳಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಅವನು, “ನನ್ನ ಮಗಳೇ, ಯೆಹೋವ ದೇವರಿಂದ ನಿನಗೆ ಆಶೀರ್ವಾದವಾಗಲಿ, ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದುದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದ ದಯೆಯು ಹೆಚ್ಚಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:10
8 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ ನವೊಮಿ ಆವೇಶದಿಂದ, “ಜೀವಂತರಿಗೂ ಮೃತರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಸರ್ವೇಶ್ವರ ಅವನನ್ನು ಆಶೀರ್ವದಿಸಲಿ!” ಎಂದು ಹರಸಿ, “ಆ ಮನುಷ್ಯ ನಮಗೆ ಹತ್ತಿರದ ನೆಂಟ, ನಮ್ಮನ್ನು ಪೋಷಿಸಬೇಕಾದವನು,” ಎಂದು ತಿಳಿಸಿದಳು.


ಹೀಗೆ ಹೋಗುತ್ತಿರುವಾಗ ದಾರಿಯಲ್ಲಿ ನವೊಮಿ ಅವರಿಗೆ: “ನೀವು ಇಬ್ಬರೂ ನಿಮ್ಮ ತವರುಮನೆಗಳಿಗೆ ಹಿಂದಿರುಗಿರಿ. ನನಗೂ ಮರಣಹೊಂದಿದ ನನ್ನ ಮಕ್ಕಳಿಗೂ ನೀವು ಒಳಿತು ಮಾಡಿದಿರಿ.


ಸ್ವಲ್ಪ ಹೊತ್ತಾದ ಮೇಲೆ, ಇದ್ದಕ್ಕಿದ್ದ ಹಾಗೆ ಬೋವಜನು ಬೆತ್ಲೆಹೇಮಿನಿಂದ ಅಲ್ಲಿಗೆ ಬಂದನು. ಅವನು, “ಸರ್ವೇಶ್ವರಸ್ವಾಮಿ ನಿಮ್ಮೊಡನೆ ಇರಲಿ!” ಎಂದು ಕೆಲಸದಾಳುಗಳನ್ನು ವಂದಿಸಿದನು. ಅದಕ್ಕೆ ಅವರು, “ಸರ್ವೇಶ್ವರ ನಿಮ್ಮನ್ನೂ ಹರಸಲಿ!” ಎಂದು ಪ್ರತಿವಂದನೆ ಮಾಡಿದರು.


“ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದವನೇ, ಮನೆಗೆ ಬಾ; ಇಲ್ಲಿ ಹೊರಗೇಕೆ ನಿಂತಿರುವೆ? ನಿನಗೆ ಮನೆ ಸಿದ್ಧವಾಗಿದೆ; ಒಂಟೆಗಳಿಗೆ ಬೇಕಾದ ಸ್ಥಳವಿದೆ,” ಎಂದು ಕರೆದನು.


ಸಮುವೇಲನು ಅಲ್ಲಿಗೂ ಹೋದನು. ಸೌಲನು ಅವನನ್ನು ಕಂಡು, “ಸರ್ವೇಶ್ವರ ನಿನ್ನನ್ನು ಹರಸಲಿ! ನಾನು ಅವರ ಅಪ್ಪಣೆಯನ್ನು ನೆರವೇರಿಸಿದ್ದೇನೆ,” ಎಂದನು.


ಅದಕ್ಕೆ ಬೋವಜನು, “ನಿನ್ನ ಪತಿ ತೀರಿಹೋದಂದಿನಿಂದ ನೀನು ಅತ್ತೆಗಾಗಿ ಮಾಡಿದ್ದ ಎಲ್ಲವನ್ನೂ ಕುರಿತು ಕೇಳಿದ್ದೇನೆ. ನೀನು ಹೇಗೆ ನಿನ್ನ ತಂದೆತಾಯಿಗಳನ್ನು ಮತ್ತು ಸ್ವಂತ ನಾಡನ್ನು ಬಿಟ್ಟು, ಅಪರಿಚಿತರಾದ ಜನರ ಮಧ್ಯೆ ವಾಸಿಸಲು ಬಂದಿರುವೆ ಎಂಬುದು ಸಹ ನನಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು