Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:3 - ಕನ್ನಡ ಸತ್ಯವೇದವು C.L. Bible (BSI)

3 ನೀನು ಸ್ನಾನಮಾಡಿಕೊಂಡು ಸುಗಂಧ ತೈಲವನ್ನು ಹಚ್ಚಿ, ಸೊಗಸಾದ ಉಡುಪನ್ನು ತೊಟ್ಟುಕೊ. ಆಮೇಲೆ ಕಣಕ್ಕೆ ಹೋಗು. ಅವನು ಅನ್ನಪಾನಮಾಡಿ ಮುಗಿಸುವವರೆಗೂ ಅವನಿಗೆ ಕಾಣಿಸಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಸ್ನಾನಮಾಡಿ, ಸುಗಂಧತೈಲವನ್ನು ಹಚ್ಚಿಕೊಂಡು, ಶ್ರೇಷ್ಠವಸ್ತ್ರಗಳನ್ನು ಧರಿಸಿಕೊಂಡು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಸ್ನಾನಮಾಡಿ ತೈಲಹಚ್ಚಿಕೊಂಡು ಶ್ರೇಷ್ಠವಸ್ತ್ರಗಳನ್ನುಟ್ಟು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ಸ್ನಾನ ಮಾಡಿ ಶೃಂಗರಿಸಿಕೊಂಡು ಶ್ರೇಷ್ಠವಾದ ಉಡುಪುಗಳನ್ನು ಧರಿಸಿಕೊಂಡು ಕಣಕ್ಕೆ ಹೋಗು. ಆದರೆ ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೆ ಅವನಿಗೆ ಮರೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ಒಳ್ಳೆಯ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ತಿಂದು ಕುಡಿದು ತೀರಿಸುವವರೆಗೂ ಅವನಿಗೆ ನೀನು ಅಲ್ಲಿರುವದು ಅವನಿಗೆ ತಿಳಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:3
10 ತಿಳಿವುಗಳ ಹೋಲಿಕೆ  

ಅವನು ತೆಕೋವದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆಕಳುಹಿಸಿ ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ನಟಿಸಿ ಶೋಕವಸ್ತ್ರಗಳನ್ನು ಧರಿಸಿಕೋ;


ಮೂರನೆಯ ದಿನ ಎಸ್ತೇರಳು ರಾಜವಸ್ತ್ರಾಭರಣಗಳನ್ನು ಧರಿಸಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದೊಳಗೆ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.


ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ.


ನಿನ್ನ ಬಟ್ಟೆಗಳು ಬೆಳ್ಳಗಿರಲಿ, ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಆ ಬೋವಜನು ನಮ್ಮ ನೆಂಟ. ಅವನ ಹೆಣ್ಣಾಳುಗಳ ಜೊತೆಯಲ್ಲಿ ನೀನು ತೆನೆ ಆರಿಸಿಕೊಳ್ಳುತ್ತಿದ್ದೀಯಲ್ಲವೇ? ಈಗ ನಾನು ಹೇಳುವುದನ್ನು ಗಮನಿಸು; ಈ ಸಂಜೆ ಬೋವಜನು ಕಣದಲ್ಲಿ ಜವೆಗೋದಿಯನ್ನು ತೂರುವನು.


ಅವನು ಎಲ್ಲಿ ಮಲಗುತ್ತಾನೆ ಎಂಬುದನ್ನು ಗೊತ್ತುಮಾಡಿಕೊ. ಅವನು ಮಲಗಿದ ಮೇಲೆ ಅಲ್ಲಿಗೆ ಹೋಗು. ಅವನ ಪಾದಗಳ ಮೇಲಿನ ಹೊದಿಕೆಯನ್ನು ಮೆತ್ತಗೆ ಸರಿಸಿಬಿಟ್ಟು ಪಕ್ಕದಲ್ಲೇ ಮಲಗು. ಆಮೇಲೆ ನೀನು ಮಾಡಬೇಕಾದುದೇನೆಂಬುದನ್ನು ಅವನೇ ತಿಳಿಸುವನು,” ಎಂದು ಹೇಳಿದಳು.


ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಸರ್ವೇಶ್ವರನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.


“ಆಗ ನಾನು ನೀರಿನಲ್ಲಿ ನಿನಗೆ ಸ್ನಾನ ಮಾಡಿಸಿ, ನಿನ್ನ ಮೇಲಿನ ರಕ್ತವನ್ನು ತೊಳೆದುಬಿಟ್ಟು, ನಿನಗೆ ತೈಲವನ್ನು ಹಚ್ಚಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು