Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:1 - ಕನ್ನಡ ಸತ್ಯವೇದವು C.L. Bible (BSI)

1 ಇತ್ತ ಬೋವಜನು ಊರಿನ ಸಭಾಮಂಟಪದ ಬಳಿ ಹೋಗಿ ಅಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೋವಜನು ಹೋಗಿ ಊರುಬಾಗಲಲ್ಲಿ ಕೂತನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿರುವದನ್ನು ಕಂಡು ಅವನನ್ನು - ಎಲಾ, ಅಪ್ಪಾ, ಇತ್ತ ಬಂದು ಕೂತುಕೋ ಎಂದು ಕರೆಯಲು ಅವನು ಬಂದು ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬೋವಜನು ನಗರದ್ವಾರದ ಬಳಿಯಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಅಲ್ಲಿಂದ ಹಾದು ಹೋಗುವವರೆಗೂ ಅವನು ಅಲ್ಲಿಯೇ ಕುಳಿತಿದ್ದನು. ಅವನನ್ನು ಕಂಡ ಬೋವಜನು, “ಸ್ನೇಹಿತನೇ ಇಲ್ಲಿ ಬಾ, ಇಲ್ಲಿ ಕುಳಿತುಕೋ” ಎಂದು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೋವಜನು ಪಟ್ಟಣದ ಬಾಗಿಲ ಬಳಿ ಹೋಗಿ ಕುಳಿತುಕೊಂಡನು. ಆಗ ಬೋವಜನು ಹೇಳಿದ್ದ ಆ ವಿಮೋಚಕ ಬಂಧುವು ಹಾದುಹೋಗುತ್ತಿದ್ದನು. ಬೋವಜನು ಅವನಿಗೆ, “ನನ್ನ ಸ್ನೇಹಿತನೇ, ಈ ಕಡೆಗೆ ಬಂದು ಇಲ್ಲಿ ಕುಳಿತುಕೋ,” ಎಂದನು. ಅವನು ಬಂದು ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:1
21 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹತ್ತಿರದ ನೆಂಟನಾಗಿರುವುದೇನೋ ನಿಜ. ನಿನ್ನನ್ನು ಸಲಹುವ ಮೈದುನ ಕರ್ತವ್ಯ ನನ್ನದು. ಆದರೆ ನನಗಿಂತಲೂ ಹತ್ತಿರದ ನೆಂಟನೊಬ್ಬನಿದ್ದಾನೆ.


ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸಲೊಲ್ಲದೆ ಹೋದರೆ ಅವಳು ಚಾವಡಿಗೆ ಹೋಗಿ ಹಿರಿಯರಿಗೆ, ‘ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸಲೊಲ್ಲನು; ಮೈದುನ ಧರ್ಮವನ್ನು ನಡಿಸುವುದಿಲ್ಲ ಎನ್ನುತ್ತಾನೆ’ ಎಂದು ತಿಳಿಸಬೇಕು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


‘ನ್ಯಾಯಸ್ಥಾನದಲ್ಲಿ ನನಗೆ ಬೆಂಬಲವಿದೆ’ ಎಂದು ತಬ್ಬಲಿಯರ ಮೇಲೆ ನಾನು ಕೈಮಾಡಿದ್ದರೆ.


ನಾನು ಊರ ಮುಂದಿನ ಚಾವಡಿಗೆ ಹೋದಾಗ ಚೌಕದ ಪೀಠದಲ್ಲಿ ಕುಳಿತುಕೊಂಡಾಗ,


ತಂದೆತಾಯಿಗಳು ಅವನನ್ನು ಹಿಡಿದು ಊರಬಾಗಿಲಿಗೆ ಹಿರಿಯರ ಮುಂದೆ ತರಬೇಕು.


ಸರ್ವೇಶ್ವರ ತಮ್ಮ ಜನರಿಗೆ ಇಂತೆನ್ನುತ್ತಾರೆ: “ಚತುರ್ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದವನು ನಾನೇ. ಆದರೆ ಈಗ ಎಚ್ಚೆತ್ತುಕೊಳ್ಳಿ, ಹೊರನಾಡುಗಳಿಂದ ಓಡಿಬನ್ನಿ, ಇದು ಸರ್ವೇಶ್ವರನ ನುಡಿ. ಬಾಬಿಲೋನಿಗೆ ಸೆರೆಹೋದ ಸಿಯೋನಿನವರೇ, ಅಲ್ಲಿಂದ ತಪ್ಪಿಸಿಕೊಂಡು ಬನ್ನಿ.


ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.


ಆ ಪುರುಷನನ್ನು ಅಥವಾ ಆ ಸ್ತ್ರೀಯನ್ನು ಹಿಡಿದು, ಊರ ಹೊರಗೆ ತಂದು, ಕಲ್ಲುಬೀರಿ ಕೊಲ್ಲಬೇಕು.


ಸದ್ಯಕ್ಕೆ ಎಫ್ರೋನನೇ ಅಲ್ಲಿ ಆ ಹಿತ್ತಿಯರ ನಡುವೆ ಕುಳಿತಿದ್ದನು. ಅವನೂ ಒಬ್ಬ ಹಿತ್ತಿಯನಾಗಿದ್ದನು. ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ಅವನು ಅಬ್ರಹಾಮನಿಗೆ,


ಎಂತಲೆ ಹಮೋರನು ಮತ್ತು ಅವನ ಮಗ ಶೆಕೆಮನು ಊರಬಾಗಿಲಿಗೆ ಬಂದರು. ಊರಿನವರನ್ನೆಲ್ಲಾ ಸಂಬೋಧಿಸುತ್ತಾ, ಹೀಗೆಂದರು:


ಅಂಥ ನಗರಕ್ಕೆ ಓಡಿಹೋದವನು ಮೊದಲು ಊರಬಾಗಿಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಗೆ ಸೇರಿಸಿಕೊಳ್ಳಲಿ; ವಾಸಕ್ಕೆ ಸ್ಥಳಕೊಡಲಿ.


ಆಗ ನವೊಮಿ, “ಮಗಳೇ, ಇದರ ಫಲಿತಾಂಶ ಏನಾಗುವುದೆಂದು ಗೊತ್ತಾಗುವವರೆಗೂ ತಾಳ್ಮೆಯಿಂದಿರು. ಬೋವಜನು ಈ ವಿಷಯವನ್ನು ಇತ್ಯರ್ಥ ಮಾಡುವವರೆಗೆ ಸುಮ್ಮನಿರಲಾರನು,” ಎಂದು ಹೇಳಿದಳು.


ಅವನು ಮುಂಜಾನೆಯೇ ಎದ್ದು ಊರುಬಾಗಿಲ ಬಳಿಯಲ್ಲಿ ನಿಂತುಕೊಳ್ಳುತ್ತಿದ್ದನು. ಯಾರಾದರೂ ತಮ್ಮ ವ್ಯಾಜ್ಯ ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋ‍ಮನು ಕಂಡರೆ ಅಂಥವನನ್ನು ತನ್ನ ಬಳಿಗೆ ಕರೆದು, “ನೀನು ಯಾವ ಊರಿನವನು?” ಎಂದು ವಿಚಾರಿಸುತ್ತಿದ್ದನು. ಅವರು, “ನಿನ್ನ ಸೇವಕರಾದ ನಾವು ಇಸ್ರಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರಕೊಡುತ್ತಿದ್ದರು.


ಇಸ್ರಯೇಲರ ಅರಸನೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರಿಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡರು; ಎಲ್ಲ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡತೊಡಗಿದರು.


ಊರ ಬಾಗಿಲಲಿ ಕೂರುವವರ ಹರಟೆಗೆ ಕಾರಣನಾದೆನಯ್ಯಾ I ಸಾರಾಯಿ ಮದ್ಯಸಾರ ಕುಡಿವವರ ಪದ್ಯವಸ್ತುವಾದೆನಯ್ಯಾ II


ಆಕೆಯ ಗಂಡ ನಾಡಿಗರಲ್ಲಿ ಗಣ್ಯ; ನ್ಯಾಯಸ್ಥಾನದಲ್ಲಿ ಸನ್ಮಾನಿತ.


ಪತ್ರಕ್ಕೆ ರುಜುಹಾಕಿ, ಮುದ್ರೆ ಒತ್ತಿ, ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆ.


ಆ ದೂತರಿಬ್ಬರು ಸೊದೋಮಿಗೆ ಬಂದಾಗ ಸಾಯಂಕಾಲವಾಗಿತ್ತು. ಲೋಟನು ಆ ಊರಬಾಗಿಲಲ್ಲೇ ಕುಳಿತುಕೊಂಡಿದ್ದನು. ದೂತರನ್ನು ಕಂಡದ್ದೇ ಅವನು ಎದ್ದುಬಂದು, ಬಾಗಿ ನಮಸ್ಕರಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು