Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:13 - ಕನ್ನಡ ಸತ್ಯವೇದವು C.L. Bible (BSI)

13 ಬೋವಜನು ರೂತಳನ್ನು ಮದುವೆಯಾಗಿ ಮನೆಗೆ ಕರೆದುಕೊಂಡು ಹೋದನು. ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ಆಕೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಊರಿನ ಮಹಿಳೆಯರು ನವೊಮಿಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿದ್ದರಿಂದ ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿ ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬೋವಜನು ರೂತಳನ್ನು ಮದುವೆಯಾದನು. ಯೆಹೋವನ ಕೃಪೆಯಿಂದ ರೂತಳು ಗರ್ಭವತಿಯಾಗಿ ಗಂಡುಮಗುವಿಗೆ ಜನ್ಮಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬೋವಜನು ರೂತಳನ್ನು ಮದುವೆಯಾದನು. ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳೊಂದಿಗೆ ಬಾಳಿದಾಗ, ರೂತಳು ಯೆಹೋವ ದೇವರ ಅನುಗ್ರಹದಿಂದ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:13
12 ತಿಳಿವುಗಳ ಹೋಲಿಕೆ  

ಅವರಿಬ್ಬರ ಕಣ್ಣಲ್ಲೂ ನೀರು ಹರಿಯಿತು. ಬಳಿಕ ಏಸಾವನು ಕಣ್ಣೆತ್ತಿ ಆ ಮಹಿಳೆಯರನ್ನೂ ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ವಿಚಾರಿಸಿದನು. ಯಕೋಬನು, “ದೇವರು ನಿಮ್ಮ ದಾಸನಾದ ನನಗೆ ಅನುಗ್ರಹಿಸಿದ ಮಕ್ಕಳು ಇವರೇ” ಎಂದು ಹೇಳಿದನು.


ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.


ಮಗಳೇ, ಭಯಪಡಬೇಡ, ನೀನು ಸುಗುಣಶೀಲೆ ಎಂದು ಊರಿಗೆಲ್ಲಾ ತಿಳಿದಿದೆ; ನೀನು ಕೇಳಿಕೊಂಡದ್ದನ್ನು ನೆರವೇರಿಸುವೆನು.


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ಬಂಜೆಯಾದವಳನು ಮಕ್ಕಳ ತಾಯಾಗಿಸುವನು I ಆನಂದದಿಂದಾಕೆ ಬೆಳಗಿಸುವಳಾ ಮನೆಯನು II


ಉಂಡು ಸುಖದಿಂದಿರುವರು ಹಸಿವುಗೊಂಡವರು ಹೊಟ್ಟೆಗಾಗಿ ಕೂಲಿಮಾಡುತ್ತಿಹರು ತೃಪ್ತರಿದ್ದವರು. ಬಂಜೆ ಹೆರುವಳು ಆರೇಳು ಮಕ್ಕಳನು ಒಬ್ಬಂಟಿಗಳಾಗಿರುವಳು ಮಕ್ಕಳಿವೆ ಎಂದವಳು.


ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ.


ಬೆತ್ಲೆಹೇಮಿನಲ್ಲಿ ಘನವಂತನಾಗು! ಆ ಯುವತಿಯ ಮುಖಾಂತರ ಸರ್ವೇಶ್ವರ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆತನವು, ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆತನದಂತೆ ಪ್ರಖ್ಯಾತವಾಗಲಿ!” ಎಂದು ಹರಸಿದರು.


ಯಕೋಬನು ಆಕೆಯ ಮೇಲೆ ಸಿಟ್ಟುಗೊಂಡು, "ನಾನೇನು ದೇವರೋ? ಅವರೇ ಅಲ್ಲವೆ ನಿನಗೆ ಮಕ್ಕಳನ್ನು ಕೊಡದೆ ಇರುವುದು?” ಎಂದು ಉತ್ತರಕೊಟ್ಟನು.


ರೆಬೆಕ್ಕಳಿಗೆ ಮಕ್ಕಳಾಗಲಿಲ್ಲ. ಸರ್ವೇಶ್ವರ ಅವನ ವಿಜ್ಞಾಪನೆಯನ್ನು ಆಲಿಸಿದರು. ರೆಬೆಕ್ಕಳು ಗರ್ಭವತಿಯಾದಳು.


ತರುವಾಯ ಅಬ್ರಹಾಮನು ಅಬೀಮೆಲೆಕನಿಗೋಸ್ಕರ ದೇವರಲ್ಲಿ ಪ್ರಾರ್ಥನೆ ಮಾಡಿದನು. ದೇವರು ಅಬೀಮೆಲೆಕನನ್ನು, ಅವನ ಪತ್ನಿಯನ್ನು ಹಾಗೂ ದಾಸಿಯರನ್ನು ಗುಣಪಡಿಸಿದನು; ಅವರಿಗೆ ಮಕ್ಕಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು