Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:4 - ಕನ್ನಡ ಸತ್ಯವೇದವು C.L. Bible (BSI)

4 ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಹಿರಿಯರ ಮುಂದೆ ಕೊಂಡುಕೊಳ್ಳುವ ಹಕ್ಕು ಮೊದಲು ನಿನಗೆ, ಅನಂತರ ನನಗೆ ಸೇರಿದ್ದು; ಬೇರೆಯವರಿಗಲ್ಲ,” ಎಂದನು. ಆಗ ಆ ವ್ಯಕ್ತಿ: “ನಾನೇ ಕೊಂಡುಕೊಳ್ಳುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿನಗೆ ಹೇಳಬೇಕೆಂದಿರುವುದೇನಂದರೆ ‘ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ.’ ಇಲ್ಲದಿದ್ದರೆ ನನಗೆ ತಿಳಿಸು; ಇದು ನನಗೆ ಗೊತ್ತಾಗಬೇಕು. ನೀನೂ, ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ” ಎಂದು ಹೇಳಲು ಅವನು “ನಾನೇ ಕೊಂಡುಕೊಳ್ಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕೂತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ. ಇಲ್ಲದಿದ್ದರೆ ನನಗೆ ತಿಳಿಸು; ನನಗೆ ಗೊತ್ತಾಗಬೇಕು. ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ ಎಂದು ಹೇಳಲು ಅವನು - ನಾನೇ ಕೊಂಡುಕೊಳ್ಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಇದರ ಬಗ್ಗೆ ನಿನಗೆ ಈ ಜನರ ಸಮ್ಮುಖದಲ್ಲಿ ಮತ್ತು ನಮ್ಮ ಹಿರಿಯರ ಸಮ್ಮುಖದಲ್ಲಿ ಹೇಳಬೇಕೆಂದು ತೀರ್ಮಾನಿಸಿದ್ದೇನೆ. ನೀನು ಆ ಹೊಲವನ್ನು ಕೊಂಡುಕೊಳ್ಳ ಬಯಸಿದರೆ ಕೊಂಡುಕೋ. ನಿನಗೆ ಕೊಂಡುಕೊಳ್ಳಲು ಇಷ್ಟವಿಲ್ಲದಿದ್ದರೆ ನನಗೆ ಹೇಳು. ನಿನ್ನ ಬಳಿಕ ಆ ಹೊಲವನ್ನು ಕೊಂಡುಕೊಳ್ಳುವ ಹಕ್ಕು ನನಗಿದೆ. ನೀನು ಆ ಹೊಲವನ್ನು ಕೊಂಡುಕೊಳ್ಳದಿದ್ದರೆ ನಾನು ಕೊಂಡುಕೊಳ್ಳುತ್ತೇನೆ.” ಅದಕ್ಕೆ ಅವನು, “ಸರಿ, ನಾನೇ ಕೊಂಡುಕೊಳ್ಳುತ್ತೇನೆ.” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ. ಬಿಡಿಸಿಕೊಳ್ಳದಿದ್ದರೆ ನಾನು ತಿಳಿದುಕೊಳ್ಳುವ ಹಾಗೆ ನನಗೆ ಹೇಳು. ಏಕೆಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ,” ಎಂದು ಹೇಳಿದನು. ಅದಕ್ಕೆ ಅವನು, “ನಾನು ಬಿಡಿಸಿಕೊಳ್ಳುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:4
12 ತಿಳಿವುಗಳ ಹೋಲಿಕೆ  

ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಪ್ರಭುವಿನ ದೃಷ್ಟಿಯಲ್ಲಿ ಮಾತ್ರವಲ್ಲ.ಮಾನವರ ದೃಷ್ಟಿಯಲ್ಲೂ ಯೋಗ್ಯವಾದುದನ್ನು ಮಾಡುವುದೇ ನಮ್ಮ ಉದ್ದೇಶ.


ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.


ದೇವರಾದ ಸರ್ವೇಶ್ವರಾ, ಸಾಕ್ಷಿಗಳನ್ನು ಕರೆಯಿಸಿ, ಕ್ರಯಕೊಟ್ಟು ಹೊಲವನ್ನು ಕೊಂಡುಕೊ ಎಂದು ನೀವು ನನಗೆ ಆಜ್ಞಾಪಿಸಿದಿರಿ. ಆದರೆ ನೋಡಿ, ನಗರವು ಬಾಬಿಲೋನಿಯರ ಕೈವಶವಾಗಲಿದೆ.”


ಅಬ್ರಹಾಮನಿಗೆ ಸ್ವಂತವೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆಯೇ ತೀರ್ಮಾನವಾಯಿತು.


“ಒಡೆಯಾ, ನನ್ನ ಮಾತಿಗೆ ಸ್ವಲ್ಪ ಕಿವಿಗೊಡಿ; ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ನಿಮಗೆ ದಾನಮಾಡಿಬಿಡುತ್ತೇನೆ; ನನ್ನ ಈ ಜನರ ಮುಂದೆಯೇ ದಾನಕೊಡುತ್ತೇನೆ; ಮೃತಳಾದ ನಿಮ್ಮ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು,” ಎಂದು ಹೇಳಿದನು.


ಆಗ ಆ ಊರಿನ ಹಿರಿಯರು ಅವನನ್ನು ಕರೆಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, ‘ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ಹೇಳುವ ಪಕ್ಷಕ್ಕೆ


ಇದನ್ನು ಕೇಳಿದ ನವೊಮಿ ಆವೇಶದಿಂದ, “ಜೀವಂತರಿಗೂ ಮೃತರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಸರ್ವೇಶ್ವರ ಅವನನ್ನು ಆಶೀರ್ವದಿಸಲಿ!” ಎಂದು ಹರಸಿ, “ಆ ಮನುಷ್ಯ ನಮಗೆ ಹತ್ತಿರದ ನೆಂಟ, ನಮ್ಮನ್ನು ಪೋಷಿಸಬೇಕಾದವನು,” ಎಂದು ತಿಳಿಸಿದಳು.


ನಾನು ನಿಮಗೆ ಹತ್ತಿರದ ನೆಂಟನಾಗಿರುವುದೇನೋ ನಿಜ. ನಿನ್ನನ್ನು ಸಲಹುವ ಮೈದುನ ಕರ್ತವ್ಯ ನನ್ನದು. ಆದರೆ ನನಗಿಂತಲೂ ಹತ್ತಿರದ ನೆಂಟನೊಬ್ಬನಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು