Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:26 - ಕನ್ನಡ ಸತ್ಯವೇದವು C.L. Bible (BSI)

26 ಮಾನವರು ಈ ರೀತಿ ವರ್ತಿಸಿದ್ದರಿಂದಲೇ ದೇವರು ಅವರನ್ನು ತುಚ್ಛವಾದ ಕಾಮಾಭಿಲಾಷೆಗಳಿಗೆ ಬಿಟ್ಟುಬಿಟ್ಟರು. ಅವರ ಸ್ತ್ರೀಯರು, ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರು ಇಂಥದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ತುಚ್ಫವಾದ ಕಾಮಾಭಿಲಾಷೆಗೆ ಒಪ್ಪಿಸಿದನು. ಹೇಗಂದರೆ ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ಬಿಟ್ಟು ಸ್ವಭಾವಕ್ಕೆ ವಿರುದ್ಧವಾದ ಭೋಗವನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರು ಆ ರೀತಿ ವರ್ತಿಸಿದ್ದರಿಂದಲೇ, ದೇವರು ಅವರನ್ನು ನಾಚಿಕೆಕರವಾದ ಕಾಮಾಭಿಲಾಷೆಗೆ ಬಿಟ್ಟುಕೊಟ್ಟನು. ಅವರ ಸ್ತ್ರೀಯರು ಪುರಷರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ, ಸಲಿಂಗಕಾಮಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗೆ ಒಪ್ಪಿಸಿಬಿಟ್ಟರು. ಹೇಗೆಂದರೆ ಅವರ ಸ್ತ್ರೀಯರು ಸಹ ಸ್ವಾಭಾವಿಕವಾದ ಭೋಗವನ್ನು ಬಿಟ್ಟು, ಅಸ್ವಾಭಾವಿಕವಾದದ್ದನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಹೆ ಸಗ್ಳೆ ಕರಲ್ಲ್ಯಾಸಾಟಿ ದೆವಾನ್ ತೆಂಕಾ ತೆಂಚ್ಯಾ ಅಬ್ರು‍ಗೆಡಿಪಾನಾಚ್ಯಾ ಚಾಲಿಚ್ಯಾ ತಾಬೆತ್ ದಿವ್ನ್ ಸೊಡ್ಲ್ಯಾನಾಯ್. ಬಾಯ್ಕಾಮನ್ಸಾನಿ ಸೈತ್ ತೆಂಚೊ ಸ್ವಾಭಾವಿಕ್ ರಿತಿನ್ ಆಂಗಾಚೊ ಸಮಂದ್ ಕರ್‍ತಲೊ ಸೊಡುನ್ ಸ್ವಬಾವಾಕ್ ಸಮಾ ನಸಲ್ಲ್ಯಾ ರಿತಿನ್ ಆಂಗಾಚೊ ಸಮಂದ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:26
14 ತಿಳಿವುಗಳ ಹೋಲಿಕೆ  

ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


ಆದುದರಿಂದ, ಮಾನವರು ಮನಸ್ಸಿನ ಆಶಾಪಾಶಗಳಿಗೆ ಬಲಿಯಾಗಿ ತಮ್ಮ ದೇಹಗಳಿಂದ ತಮ್ಮತಮ್ಮಲ್ಲೇ ಅಶ್ಲೀಲಕೃತ್ಯಗಳೆಸಗಲೆಂದು ದೇವರು ಅವರನ್ನು ಅಶುದ್ಧ ನಡತೆಗೆ ಬಿಟ್ಟುಬಿಟ್ಟರು.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಲಜ್ಜೆಗೆಟ್ಟವರಾಗಿ ದುರಿಚ್ಛೆಗಳಿಗೆ ಮಾರುಹೋಗಿದ್ದಾರೆ; ಅಶುದ್ಧ ಕಾರ್ಯಗಳಲ್ಲೇ ನಿರತರಾಗಿದ್ದಾರೆ.


ಅಲ್ಲದೆ ಲೋಟನಿಗೆ, "ಈ ರಾತ್ರಿ ತಂಗಲು ನಿನ್ನ ಬಳಿಗೆ ಬಂದ ಆ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ಸಂಭೋಗಿಸಬೇಕು,” ಎಂದು ಕೂಗಿ ಹೇಳಿದರು.


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು.


ಆ ಜನರು ಗುಟ್ಟಾಗಿ ಮಾಡುವ ಕೃತ್ಯಗಳು ಹೇಳುವುದಕ್ಕೂ ಅವಮಾನಕರವಾದುವು.


ದೇವರ ಅರಿವೇ ಇಲ್ಲದ ಅನ್ಯಜನರಂತೆ ಕಾಮಾತಿರೇಕದಿಂದ ವರ್ತಿಸಬಾರದು.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಆದರೆ, ಈ ಜನರು ತಮಗೆ ಅರ್ಥವಾಗದ ಎಲ್ಲವನ್ನೂ ದೂಷಿಸುತ್ತಾರೆ. ವಿಚಾರ ಶೂನ್ಯ ಪ್ರಾಣಿಗಳಂತೆ ಸಹಜ ಪ್ರವೃತ್ತಿಯಿಂದ ಏನನ್ನು ತಿಳಿದುಕೊಳ್ಳುತ್ತಾರೋ ಅದರಿಂದಲೇ ನಾಶವಾಗುತ್ತಾರೆ.


“ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು