Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:18 - ಕನ್ನಡ ಸತ್ಯವೇದವು C.L. Bible (BSI)

18 ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೂ ಅವರ ಕಿವಿಗೆ ಬೀಳಲಿಲ್ಲವೇನು ಎಂದು ಕೇಳುತ್ತೇನೆ. ಬಿದ್ದದ್ದು ನಿಶ್ಚಯ. ಸಾರುವವರ ಧ್ವನಿಯು ಭೂವಿುಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ, “ಜನರು ಸುವಾರ್ತೆಯನ್ನು ಕೇಳಲಿಲ್ಲವೇ?” ಎಂದು ನಾನು ಪ್ರಶ್ನಿಸುತ್ತೇನೆ. ಹೌದು, ಅವರು ಕೇಳಿದರು ಪವಿತ್ರ ಗ್ರಂಥ ಹೇಳುವಂತೆ: “ಅವರ ಸ್ವರಗಳು ಲೋಕದಲ್ಲೆಲ್ಲಾ ಪ್ರಸಾರಗೊಂಡವು. ಅವರ ಮಾತುಗಳು ಪ್ರಪಂಚದ ಎಲ್ಲಾ ಕಡೆಗಳಿಗೂ ಹೋದವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ ಮಿಯಾ ಇಚಾರ್ತಾ: ತೆನಿ ಬಾತ್ಮಿ ಆಯ್ಕಿನಸಲ್ಲೆ ಖರೆ ಹಾಯ್? ಹೊಯ್ ತೆನಿ ಖರೆ ಹೊತ್ತೆ ಕರ್‍ಲ್ಯಾನಿ. ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ, ತೆಂಚ್ಯಾ ಧನಾಚೊ ಅವಾಜ್ ಸಗ್ಳ್ಯಾ ಜಗಾವರ್ತಿ ಜಾವ್ನ್ ಪಾವ್ಲೊ: ತೆಂಚ್ಯಾ ಗೊಸ್ಟಿಯಾ ಜಿಮ್ನಿಚ್ಯಾ ಆಕ್ರಿ ಪತರ್ ಜಾವ್ನ್ ಪಾವ್ಲ್ಯಾತ್:

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:18
23 ತಿಳಿವುಗಳ ಹೋಲಿಕೆ  

ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ I ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ II


ಮೊಟ್ಟಮೊದಲನೆಯದಾಗಿ, ನಿಮ್ಮೆಲ್ಲರ ಪರವಾಗಿ ಯೇಸುಕ್ರಿಸ್ತರ ಮುಖಾಂತರ ನಾನು ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಏಕೆಂದರೆ, ನಿಮ್ಮ ವಿಶ್ವಾಸ ಹಾಗು ವಿಧೇಯತೆ ಇಡೀ ಜಗತ್ತಿನಲ್ಲಿ ಪ್ರಖ್ಯಾತವಾಗಿದೆ.


ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸರ್ವಜನಾಂಗಗಳಿಗೂ ಸಾಕ್ಷಿಯಾಗಿ ಜಗತ್ತಿನಲ್ಲೆಲ್ಲಾ ಪ್ರಬೋಧಿಸಲಾಗುವುದು. ಅಂತ್ಯವು ಬರುವುದು ಅನಂತರವೇ.


ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.


ಬಳಿಕ ಅವರಿಗೆ, “ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಜಗತ್ತಿನಾದ್ಯಂತ, ಎಲ್ಲೆಲ್ಲಿ ಶುಭಸಂದೇಶ ಪ್ರಕಟವಾಗುವುದೋ ಅಲ್ಲೆಲ್ಲಾ ಈ ಸತ್ಕಾರ್ಯವನ್ನು ಈಕೆಯ ಸವಿನೆನಪಿಗಾಗಿ ಸಾರಲಾಗುವುದು. ಇದು ನಿಶ್ಚಯ,” ಎಂದರು.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಅನಂತರ ಪಿಶಾಚಿ ಯೇಸುವನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದು, ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ತೋರಿಸಿತು.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಜಗದ ಕಟ್ಟಕಡೆಯಿಂದ ಕೇಳಿಬರುತಿದೆ, ‘ಸತ್ಯಸ್ವರೂಪನಿಗೆ ಸ್ತೋತ್ರ’ ಎಂಬ ಗೀತೆ. ಆದರೆ ನಶಿಸಿಹೋಗುತ್ತಿರುವೆನು ನಾನು, ಹೌದು, ನಶಿಸಿ ನಾಶವಾಗುತ್ತಿರುವೆನು, ಏನೆಂದು ಹೇಳಲಿ ನನ್ನ ಗತಿಯನು. ಇದೋ, ಬಾಧಿಸುತ್ತಿಹರು ದ್ರೋಹಿಗಳು, ದ್ರೋಹದ ಮೇಲೆ ದ್ರೋಹವೆಸಗುತಿಹರು.


ತಮ್ಮ ದೇವರಾದ ಸರ್ವೇಶ್ವರನಾಣೆ, ನನ್ನ ಒಡೆಯ ಸೇವಕರನ್ನು ಅಟ್ಟಿ ನಿಮ್ಮನ್ನು ಹುಡುಕದ ಜನಾಂಗವಾಗಲಿ, ರಾಜ್ಯವಾಗಲಿ ಒಂದೂ ಇಲ್ಲ. ಆ ಜನಾಂಗ, ರಾಜ್ಯಗಳವರು, ‘ಎಲೀಯನು ನಮ್ಮಲ್ಲಿರುವುದಿಲ್ಲ,’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು