Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:2 - ಕನ್ನಡ ಸತ್ಯವೇದವು C.L. Bible (BSI)

2 ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿ ಜ್ಞಾನಾನುಸಾರವಾದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಯೆಹೂದ್ಯರ ಬಗ್ಗೆ ಹೀಗೆ ಹೇಳಬಲ್ಲೆನು: ಅವರು ದೇವರನ್ನು ಹಿಂಬಾಲಿಸಲು ನಿಜವಾಗಿಯೂ ಪ್ರಯತ್ನಿಸುತ್ತಾರೆ. ಆದರೆ ಅವರಿಗೆ ಸರಿಯಾದ ಮಾರ್ಗ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ದೇವರಿಗಾಗಿ ಆಸಕ್ತರು ಎಂಬುದಾಗಿ ನಾನು ಸಾಕ್ಷಿಕೊಡುತ್ತೇನೆ. ಆದರೆ ಅವರ ಆಸಕ್ತಿಯು ಜ್ಞಾನಕ್ಕೆ ಅನುಸಾರವಾದದ್ದು ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಿಯಾ ತುಮ್ಕಾ ಖರೆಚ್ ಸಾಂಗ್ತಾ ತೆಂಚಿ ಭಕ್ತಿ ದೆವಾ ವರ್‍ತಿ ಲೈ ಘಟ್ ಹಾಯ್, ಖರೆ ತೆಂಚಿ ಭಕ್ತಿ ಖರ್ಯಾ ಬುದ್ವಂತ್ಕಿ ವರ್‍ತಿ ಠಿಕುನ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:2
22 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.


ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು.


ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.


ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ಅರಿವಿಲ್ಲದ ಹುರುಪು ಸರಿಯಲ್ಲ; ದುಡುಕುವ ಕಾಲು ದಾರಿತಪ್ಪುವುದು ದಿಟ.


ಇದಲ್ಲದೆ, ನಾನು ನನ್ನ ಪೂರ್ವಜರ ಮತಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


“ನನ್ನ ಜೊತೆಯಲ್ಲಿ ಬಂದು ಸರ್ವೇಶ್ವರನಲ್ಲಿ ನನಗಿರುವ ಶ್ರದ್ಧೆಯನ್ನು ನೋಡು,” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I


ತಮ್ಮ ಶಕ್ತಿಗನುಸಾರವಾಗಿ ಮಾತ್ರವಲ್ಲ, ಕೆಲವೊಮ್ಮೆ ಶಕ್ತಿಮೀರಿಯೂ ನೀಡಿದ್ದಾರೆಂದು ನಾನು ಖಂಡಿತವಾಗಿ ಹೇಳುತ್ತೇನೆ.


“ಇಸ್ರಯೇಲಿನ ಮಹಾಜನರೇ, ಬೇಗ ಬನ್ನಿ; ನಮ್ಮ ಜನಾಂಗಕ್ಕೂ ನಮ್ಮ ಧರ್ಮಶಾಸ್ತ್ರಕ್ಕೂ ಈ ಮಹಾದೇವಾಲಯಕ್ಕೂ ವಿರುದ್ಧವಾಗಿ ಬೋಧಿಸುವ ವ್ಯಕ್ತಿ ಇವನೇ; ಎಲ್ಲೆಡೆಯಲ್ಲೂ ಎಲ್ಲರಿಗೂ ಇವನು ನಮಗೆ ವಿರುದ್ಧವಾಗಿ ಬೋಧಿಸುತ್ತಾನೆ. ಅಷ್ಟು ಮಾತ್ರವಲ್ಲ. ಈ ಪವಿತ್ರಾಲಯದೊಳಕ್ಕೆ ಅನ್ಯಧರ್ಮೀಯರನ್ನು ಕರೆತಂದು ಇದನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿಕೊಂಡರು.


ಅದೊಂದು ಭಾಗ್ಯವೆಂದೇ ತಿಳಿದಿರಿ. ಆ ಭಾವನೆ ಈಗೆಲ್ಲಿದೆ? ಆಗ, ಬೇಕಾಗಿದ್ದಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಾನು ಹೇಳಬಲ್ಲೆ!


ನಿಮಗಾಗಿಯೂ ಲವೊದಿಕೀಯ ಹಾಗೂ ಹಿರೆಯಾಪೊಲಿಯದ ಜನರಿಗಾಗಿಯೂ ಆತನು ಶ್ರಮವಹಿಸಿ ದುಡಿಯುತ್ತಿದ್ದಾನೆಂಬುದಕ್ಕೆ ನಾನೇ ಸಾಕ್ಷಿ.


ಇಲ್ಲಿಯವರೆಗೆ ಪೌಲನು ಹೇಳುತ್ತಿದ್ದನ್ನು ಜನರು ಕಿವಿಗೊಟ್ಟು ಕೇಳುತ್ತಿದ್ದರು. ಆಮೇಲೆ ಅವರು, “ಇವನು ಈ ಲೋಕದಿಂದಲೇ ತೊಲಗಬೇಕು; ಇಂಥವನು ಜೀವದಿಂದ ಇರಬಾರದು,” ಎಂದು ಗಟ್ಟಿಯಾಗಿ ಕೂಗಾಡಲಾರಂಭಿಸಿದರು.


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


ಸಹೋದರರೇ, ನನ್ನ ಸ್ವಜನರಾದ ಇಸ್ರಯೇಲರು ಜೀವೋದ್ಧಾರ ಹೊಂದಬೇಕೆಂದೇ ನನ್ನ ಹಾರ್ದಿಕ ಹಂಬಲ. ನಾನು ದೇವರಲ್ಲಿ ಮಾಡುವ ಪ್ರಾರ್ಥನೆಯೂ ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು