Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:6 - ಕನ್ನಡ ಸತ್ಯವೇದವು C.L. Bible (BSI)

6 ಆದರೆ ವಿಶ್ವಾಸದ ಮೂಲಕ ದೊರಕುವ ಸತ್ಸಂಬಂಧದ ಬಗ್ಗೆ ಹೀಗೆ ಬರೆಯಲಾಗಿದೆ: “ಕ್ರಿಸ್ತಯೇಸುವನ್ನು ಕೆಳಕ್ಕೆ ಕರೆತರಲು ಸ್ವರ್ಗಕ್ಕೆ ಏರಿಹೋಗುವವರು ಯಾರು?” ಎಂದಾಗಲೀ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ನಂಬಿಕೆಯಿಂದುಂಟಾಗುವ ನೀತಿಯು ಏನು ಹೇಳುತ್ತದೆ? ಕ್ರಿಸ್ತನನ್ನು ಕೆಳಕ್ಕೆ ಕರೆದುಕೊಂಡು ಬರುವದಕ್ಕೆ ಯಾರು ಮೇಲಣ ಲೋಕಕ್ಕೆ ಏರಿಹೋದಾರು? ಎಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ನಂಬಿಕೆಯ ಮೂಲಕ ನೀತಿನಿರ್ಣಯ ಹೊಂದುವುದರ ಬಗ್ಗೆ, “(ಕ್ರಿಸ್ತನನ್ನು ಕೆಳಕ್ಕೆ ಕರೆದುಕೊಂಡು ಬರಲು) ‘ಯಾರು ಪರಲೋಕಕ್ಕೆ ಏರಿಹೋಗಬಲ್ಲರು?’” ಎಂದಾಗಲಿ (ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ವಿಶ್ವಾಸದಿಂದ ಬರುವ ನೀತಿಯ ಬಗ್ಗೆ ಮೋಶೆಯು ಹೇಳುವುದೇನೆಂದರೆ: “ ‘ಕ್ರಿಸ್ತನನ್ನು ಕೆಳಗೆ ತರಲು ಪರಲೋಕಕ್ಕೆ ಯಾರು ಏರಿ ಹೋಗುವರು?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಪವಿತ್ರ್ ಪುಸ್ತಕ್ ವಿಶ್ವಾಸಾಚ್ಯಾ ವೈನಾ ದೆವಾಚ್ಯಾ ವಾಂಗ್ಡಾ ಖರ್ಯಾ ವಾಟೆನ್ ಚಲಲ್ಲಿ ಮನುನ್ ಘೆತಲ್ಯಾಂಚ್ಯಾ ವಿಶಯಾತ್ ಅಶೆ ಮನ್ತಾ “ತುಮ್ಚ್ಯಾತ್ಲೆ ಕೊನ್‍ಬಿ ತುಮ್ಕಾಚ್ ಜೆಜುಕ್ ಖಾಲ್ತಿ ಹಾನುಕ್ ಸರ್‍ಗಾ ಪತರ್ ವರ್‍ತಿ ಕೊನ್‍ ಜಾತಾ ಮನುನ್ ಇಚಾರ್‍ತಲೆ ನಕ್ಕೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:6
15 ತಿಳಿವುಗಳ ಹೋಲಿಕೆ  

ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?


ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು.


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ.


ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.


ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು