Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:11 - ಕನ್ನಡ ಸತ್ಯವೇದವು C.L. Bible (BSI)

11 ಹಾಗಾದರೆ ಇಸ್ರಯೇಲರು ಮೇಲೇಳದಂತೆ ಮುಗ್ಗರಿಸಿಬಿದ್ದರು ಎಂದು ಹೇಳೋಣವೆ? ಎಂದಿಗೂ ಇಲ್ಲ. ಅವರ ಅಪರಾಧದ ನಿಮಿತ್ತ ಇತರರಿಗೆ ಉದ್ಧಾರ ಲಭಿಸುವಂತಾಯಿತು. ಹೀಗೆ ಇತರರನ್ನು ನೋಡಿ ಅವರೇ ಅಸೂಯೆ ಪಡುವಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹಾಗಾದರೆ ಅವರು ಬಿದ್ದೇ ಹೋಗುವಂತೆ ಎಡವಿದರೇನು ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಹುರುಡು ಹುಟ್ಟಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹಾಗಾದರೆ, ಯೆಹೂದ್ಯರು ಮೇಲೇಳದಂತೆ ಮುಗ್ಗರಿಸಿ ಬಿದ್ದರೇ? ಎಂದಿಗೂ ಇಲ್ಲ. ಆದರೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆ ಲಭಿಸುವಂತಾಯಿತು. ಹೀಗೆ ಇತರರನ್ನು ನೋಡಿ ಅವರೇ ಅಸೂಯೆಪಡುವಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲರು ಏಳಲಾರದ ಹಾಗೇ ಎಡವಿದರೋ? ಎಂದು ನಾನು ಕೇಳುತ್ತೇನೆ. ಇಲ್ಲವೇ ಇಲ್ಲ! ಆದರೆ, ಇಸ್ರಾಯೇಲರಲ್ಲಿ ಮತ್ಸರ ಉಂಟಾಗುವಂತೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆಯು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಸೆ ಜಾಲ್ಯಾರ್ ಮಿಯಾ ಇಚಾರ್ತಾ: ಜುದೆವ್ ಲೊಕಾ ಅಟ್ಕಳುನ್ ಪಡ್ಲಿ ತನ್ನಾ ನಾಸುಚ್ ಹೊವ್ನ್ ಗೆಲಿ ಕಾಯ್? ನಾ ತಸೆ ಹೊವುಕುಚ್‍ನಾ! ತೆನಿ ಪಾಪ್ ಕರ್‍ಲ್ಯಾನಿ, ಜುದೆವ್ ಲೊಕಾಂಚ್ಯಾ ಪೊಟಾತ್ನಿ ಝಳ್ ಪಡಿಸರ್ಕೆ ಕರುಕ್ ಮನುನ್ ಸುಟ್ಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾತ್ನಿ ಯೆಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:11
14 ತಿಳಿವುಗಳ ಹೋಲಿಕೆ  

ಅದೇ ಪ್ರಕಾರ ಅವರು ಈಗ ಅವಿಧೇಯರಾಗಿದ್ದರೂ ನೀವು ಹೊಂದಿದ ಕರುಣೆಯ ನಿಮಿತ್ತ ಅವರೂ ಕರುಣೆಯನ್ನು ಹೊಂದುವರು.


ಅವರ ಅಪರಾಧ ಜಗತ್ತಿಗೆಲ್ಲ ಸೌಭಾಗ್ಯವನ್ನೂ ಅವರ ಅಪಜಯವು ಇತರರಿಗೆಲ್ಲಾ ಆಶೀರ್ವಾದವನ್ನೂ ತರಲು ಕಾರಣವಾದರೆ, ಅವರ ಸಂಪೂರ್ಣ ಪರಿವರ್ತನೆ ಮತ್ತೆಷ್ಟೋ ಕಲ್ಯಾಣವನ್ನು ಉಂಟುಮಾಡಬೇಕಲ್ಲವೆ?


ಹಾಗೆಂದ ಮೇಲೆ ಇಸ್ರಯೇಲರು ಆ ಶುಭಸಂದೇಶವನ್ನು ಅರ್ಥಮಾಡಿಕೊಳ್ಳಲಿಲ್ಲ. ಎನ್ನೋಣವೆ? ಮೊದಲನೆಯದಾಗಿ, ಮೋಶೆಯ ಮಾತಿನಲ್ಲಿ ಉತ್ತರಿಸುವುದಾದರೆ: “ ‘ಜನಾಂಗ’ ಎನಿಸಿಕೊಳ್ಳದವರನ್ನು ನೋಡಿ ನೀವು ಅಸೂಯೆಪಡುವಂತೆ ಮಾಡುತ್ತೇನೆ; ಮತಿಹೀನರೆನಿಸಿಕೊಂಡ ಜನಾಂಗವನ್ನು ನೋಡಿ ನೀವು ಕೆರಳುವಂತೆ ಮಾಡುತ್ತೇನೆ.”


ಆದರೂ ಈ ಸೇವೆಯ ಮೂಲಕ ನನ್ನ ಸ್ವಜನರಲ್ಲಿ ಪ್ರೇಮಾಸೂಯೆಯನ್ನು ಮೂಡಿಸಿ ಅವರಲ್ಲಿ ಬಹುಶಃ ಕೆಲವರನ್ನಾದರೂ ಉದ್ಧಾರದ ಮಾರ್ಗಕ್ಕೆ ತರಲು ಸಾಧ್ಯವಾದೀತೆಂದು ನಂಬುತ್ತೇನೆ.


ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.


ಹಾಗಾದರೆ ದೇವರು ತಮ್ಮ ಜನರಾದ ಇಸ್ರಯೇಲರನ್ನು ತಿರಸ್ಕರಿಸಿದ್ದಾರೆ ಎಂದು ಹೇಳೋಣವೆ? ಎಂದಿಗೂ ಇಲ್ಲ. ನಾನು ಸಹ ಇಸ್ರಯೇಲನು, ಅಬ್ರಹಾಮನ ಸಂತತಿಯವನು; ಬೆನ್ಯಮೀನ್ ಮನೆತನಕ್ಕೆ ಸೇರಿದವನು.


ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪಕ್ಕೆ ವಿಮುಖರಾಗಿ ಜೀವಿಸಿರಿ; ಇದು ಸರ್ವೇಶ್ವರನಾದ ದೇವರ ನುಡಿ.”


ಪೌಲ ಮತ್ತು ಬಾರ್ನಬ ಪ್ರಾರ್ಥನಾಮಂದಿರವನ್ನು ಬಿಟ್ಟುಹೊರಟರು. “ಮುಂದಿನ ಸಬ್ಬತ್‍ದಿನ ಪುನಃ ಬಂದು ಈ ವಿಷಯಗಳ ಬಗ್ಗೆ ಹೆಚ್ಚು ತಿಳಿಸಿರಿ,” ಎಂದು ಜನರು ಕೇಳಿಕೊಂಡರು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


“ಹೀಗಿರುವಲ್ಲಿ, ತೋಟದ ಯಜಮಾನ ಇವರಿಗೆ ಏನು ಮಾಡುತ್ತಾನೆ?” ಎಂದು ಕೇಳಿದ ಯೇಸು, ತಾವೇ ಉತ್ತರಿಸುತ್ತಾ, “ಅವನು ಬಂದು ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುತ್ತಾನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು