Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:14 - ಕನ್ನಡ ಸತ್ಯವೇದವು C.L. Bible (BSI)

14 ಆದರೂ ಈ ಸೇವೆಯ ಮೂಲಕ ನನ್ನ ಸ್ವಜನರಲ್ಲಿ ಪ್ರೇಮಾಸೂಯೆಯನ್ನು ಮೂಡಿಸಿ ಅವರಲ್ಲಿ ಬಹುಶಃ ಕೆಲವರನ್ನಾದರೂ ಉದ್ಧಾರದ ಮಾರ್ಗಕ್ಕೆ ತರಲು ಸಾಧ್ಯವಾದೀತೆಂದು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗೆ ಒಂದು ವೇಳೆ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಸಹ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ನನ್ನ ಸ್ವಂತ ಜನರಲ್ಲಿ (ಯೆಹೂದ್ಯರಲ್ಲಿ) ಅಸೂಯೆಯನ್ನು ಉಂಟುಮಾಡಿ ಅವರಲ್ಲಿ ಕೆಲವರಾದರೂ ರಕ್ಷಣೆ ಹೊಂದುವಂತೆ ಮಾಡಬಲ್ಲೆನೆಂಬ ನಿರೀಕ್ಷೆ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೇಗೂ ನಾನು ನನ್ನ ಸ್ವಂತ ಜನರಾದ ಯೆಹೂದ್ಯರಲ್ಲಿ ಮತ್ಸರವನ್ನು ಉದ್ರೇಕಿಸಿ ಅವರಲ್ಲಿ ಕೆಲವರನ್ನಾದರೂ ರಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹೆಚ್ಯಾ ವೈನಾ ಮಿಯಾ ಮಾಜ್ಯಾ ಸ್ವತಾಚ್ಯಾ ಕುಳಿಚ್ಯಾ ಲೊಕಾಂಚ್ಯಾ ಪೊಟಾತ್ನಿ ಝಳ್ ಪಡಿಸರ್ಕೆ ಕರ್‍ತಾ, ಅನಿ ಅಶೆ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಹುರ್‍ವುನ್ ಘೆವ್ಕ್ ಮಾಜ್ಯಾನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:14
19 ತಿಳಿವುಗಳ ಹೋಲಿಕೆ  

ಅದೂ ಅಲ್ಲದೆ ಸ್ತ್ರೀಯೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಪತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ? ಪುರುಷನೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಸತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ?


ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.


ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.


ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ಎಲ್ಲಾ ಮಾನವರೂ ಸತ್ಯವನ್ನರಿತು ಜೀವೋದ್ಧಾರ ಪಡೆಯಬೇಕೆಂಬುದೇ ದೈವೇಚ್ಛೆ.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ಹಾಗಾದರೆ ಇಸ್ರಯೇಲರು ಮೇಲೇಳದಂತೆ ಮುಗ್ಗರಿಸಿಬಿದ್ದರು ಎಂದು ಹೇಳೋಣವೆ? ಎಂದಿಗೂ ಇಲ್ಲ. ಅವರ ಅಪರಾಧದ ನಿಮಿತ್ತ ಇತರರಿಗೆ ಉದ್ಧಾರ ಲಭಿಸುವಂತಾಯಿತು. ಹೀಗೆ ಇತರರನ್ನು ನೋಡಿ ಅವರೇ ಅಸೂಯೆ ಪಡುವಂತಾಯಿತು.


ಇದನ್ನು ನೆನಪಿಗೆ ತಂದುಕೊಳ್ಳಿರಿ: ಪಾಪಿಯನ್ನು ದುರ್ಮಾರ್ಗದಿಂದ ಮರಳಿ ಸನ್ಮಾರ್ಗಕ್ಕೆ ತಂದವನು ತನ್ನ ಆತ್ಮವನ್ನು ನಿತ್ಯ ಮರಣದಿಂದ ತಪ್ಪಿಸಿ ತನ್ನ ಲೆಕ್ಕವಿಲ್ಲದ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾನೆ.


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ.


ಲಾಬಾನನು, “ನಿಜವಾಗಿಯೂ ನೀನು ನನ್ನ ರಕ್ತಸಂಬಂಧಿ,” ಎಂದನು. ಅವನೊಂದಿಗೆ ಯಕೋಬನು ಒಂದು ತಿಂಗಳವರೆಗೂ ವಾಸಮಾಡಿದನು.


ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರು; ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ಹಿಂದುಳಿದಿರುವುದು ಸರಿಯಲ್ಲ’


ಹಾಗೆಂದ ಮೇಲೆ ಇಸ್ರಯೇಲರು ಆ ಶುಭಸಂದೇಶವನ್ನು ಅರ್ಥಮಾಡಿಕೊಳ್ಳಲಿಲ್ಲ. ಎನ್ನೋಣವೆ? ಮೊದಲನೆಯದಾಗಿ, ಮೋಶೆಯ ಮಾತಿನಲ್ಲಿ ಉತ್ತರಿಸುವುದಾದರೆ: “ ‘ಜನಾಂಗ’ ಎನಿಸಿಕೊಳ್ಳದವರನ್ನು ನೋಡಿ ನೀವು ಅಸೂಯೆಪಡುವಂತೆ ಮಾಡುತ್ತೇನೆ; ಮತಿಹೀನರೆನಿಸಿಕೊಂಡ ಜನಾಂಗವನ್ನು ನೋಡಿ ನೀವು ಕೆರಳುವಂತೆ ಮಾಡುತ್ತೇನೆ.”


ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ.


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು