Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:22 - ಕನ್ನಡ ಸತ್ಯವೇದವು C.L. Bible (BSI)

22 ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹಿತ್ತೆ ಅಮ್ಕಾ ದೆವಾಚಿ ದಯಾ ಕಶಿ ಹಾಯ್, ತೆಚೆ ಕಟೊರ್‍ಪಾನ್‍ಬಿ ಕಶೆ ಹಾಯ್ ಮನುನ್ ದಿಸುನ್ ಯೆತಾ. ವಿಶ್ವಾಸಾತ್ ಪಡುನ್ ಗೆಲ್ಲ್ಯಾಕ್ನಿ ತೊ ಕಟೊರ್, ಖರೆ ತಿಯಾ ತೆಚ್ಯಾ ದಯಾಳ್‍ಪಾನಾಚ್ಯಾ ಅಸ್ರ್ಯಾತ್ ಹಾಸ್ ಜಾಲ್ಯಾರ್ ತುಕಾ ತೊ ದಯಾಳ್‍ಪಾನ್ ದಾಕ್ವುತಾ, ನಾಹೊಲ್ಯಾರ್ ತುಕಾಬಿ ತೊ ಕಾತ್ರುನ್ ಟಾಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:22
33 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುತ್ತೇನೆ.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಕೊಟ್ಟ ಮಾತನ್ನು ದೇವರು ಮೀರುವುದಿಲ್ಲ. ಆದ್ದರಿಂದ ನಾವು ನಿವೇದಿಸುವ ನಂಬಿಕೆ ನಿರೀಕ್ಷೆಯಲ್ಲಿ ಚಂಚಲರಾಗದೆ ಸದೃಢರಾಗಿರೋಣ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ನೀವು ಪ್ರಭುವಿನಲ್ಲಿ ಅಚಲರಾಗಿರುವುದನ್ನು ಕೇಳಿ ಪುನಶ್ಚೇತನಗೊಂಡಿದ್ದೇವೆ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.


ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II


ದೇವರು ಹುಟ್ಟುರೆಂಬೆಗಳನ್ನೇ ಉಳಿಸಲಿಲ್ಲ ಎಂದಮೇಲೆ ನಿನ್ನನ್ನು ಉಳಿಸುವರೆಂದು ತಿಳಿಯುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು