Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:33 - ಕನ್ನಡ ಸತ್ಯವೇದವು C.L. Bible (BSI)

33 ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು! ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು! ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ದೆವಾಚಿ ಸಂಪತ್ತ್ ಕವ್ಡಿ ಮೊಟಿ!‍ ತೆಚಿ ಬುದ್ದ್ ಅನಿ ಶಾನ್‍ಪಾನ್ ಕವ್ಡೆ ಮೊಟೆ! ತೆನಿ ಘೆಟಲ್ಲ್ಯಾ ನಿರ್ದಾರಾಂಚ್ಯಾ ವಿಶಯಾತ್ನಿ ಸೊಡ್ಸುನ್ ಸಾಂಗ್ತಲೊ ಕೊನ್ ಹಾಯ್? ತೆಚ್ಯಾ ವಾಟಾಂಚ್ಯಾ ವಿಶಯಾತ್ ಕಳ್ವುನ್ ಘೆತಲೊ ಕೊನ್ ಹಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:33
38 ತಿಳಿವುಗಳ ಹೋಲಿಕೆ  

ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


ಪ್ರಭು, ನಿನ್ನ ಕೃತ್ಯಗಳೆನಿತೋ ಅಮೂಲ್ಯ I ನಿನ್ನಾಲೋಚನೆಗಳು ಎನಿತೋ ಅಶೋಧ್ಯ II


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.


ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಈ ಮೂಲಕ ತಮ್ಮ ಕರುಣೆಯನ್ನು ಹೊಂದಲು ಅವರು ಮೊದಲೇ ತಯಾರಿಸಿದ್ದ ಕುಡಿಕೆಯನ್ನು ಹೋಲುವವರಿಗೆ ದೇವರು ತಮ್ಮ ಮಹಿಮಾತಿಶಯವನ್ನು ತೋರ್ಪಡಿಸಲು ಇಚ್ಛಿಸಿದರು.


ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II


ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II


ದೇವರ ಅದ್ಭುತಗಳಲ್ಲಿ ಇವು ಕೆಲವು ಮಾತ್ರ ಆತನ ಬಗ್ಗೆ ನಾವು ಕೇಳಿರುವುದು ಕಿಂಚಿತ್ತು ಮಾತ್ರ ಆತನ ಘನ ಗರ್ಜನೆಯ ಪ್ರಾಬಲ್ಯವನ್ನು ಗ್ರಹಿಸಲು ಯಾರಿಂದ ಸಾಧ್ಯ?”


ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ಅಪ್ರತಿಮ ಮಹಾಕಾರ್ಯಗಳನ್ನು ಎಸಗಿರುವನು ಅಸಂಖ್ಯ ಅದ್ಭುತಕರ ಪವಾಡಗಳನ್ನು ಮಾಡಿರುವನು.


ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಆಕಾಶವು ಉನ್ನತ, ಭೂಮಿಯು ಅಗಾಧ, ಅಂತೆಯೇ ರಾಜರ ಮನಸ್ಸು ಅಗೋಚರ.


ಹೀಗೆ ದೇವಜನರೆಲ್ಲರೊಡನೆ, ಕ್ರಿಸ್ತಯೇಸುವಿನ ಅಗಾಧ ಪ್ರೀತಿಯ ಉದ್ದ-ಅಗಲ, ಆಳ-ಎತ್ತರ ಎಷ್ಟೆಂಬುದನ್ನು ನೀವು ಗ್ರಹಿಸಿಕೊಳ್ಳುವಂತಾಗಲಿ.


ಆತನಿಗೆ ಹೇಳಬೇಕಾದ ಉತ್ತರವನು ನಮಗೆ ತಿಳಿಸು ಅಂಧಕಾರದಲ್ಲಿರುವ ನಮ್ಮಿಂದ ಏನೊಂದನೂ ಹೇಳಲಾಗದು.


ಆತ ನಿನ್ನ ಯಾವ ಮಾತಿಗೂ ಉತ್ತರ ಕೊಡಲಿಲ್ಲ ಎಂದ ಮಾತ್ರಕ್ಕೆ ನೀನು ಆತನೊಡನೆ ವ್ಯಾಜ್ಯವಾಡುವುದು ಸರಿಯಲ್ಲ.


ದೇವರ ಆಲೋಚನಾಸಭೆಯಲಿ ನೀನು ಭಾಗವಹಿಸಿದ್ದೆಯೋ? ಜ್ಞಾನವೆಂಬುದು ನಿನಗೆ ಮಾತ್ರ ಮೀಸಲೋ?


ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II


ಪ್ರಭು ಮಹಾತ್ಮನು, ಸ್ತುತ್ಯರ್ಹನು I ಆತನ ಮಹಿಮೆ ಅಗಮ್ಯವಾದದು II


ವಿಷಯಗಳನ್ನು ರಹಸ್ಯವಾಗಿಡುವ ದೇವರಿಗೆ ಮಹಿಮೆ; ವಿಷಯಗಳನ್ನು ವಿಮರ್ಶಿಸುವ ರಾಜರಿಗೆ ಹಿರಿಮೆ.


ಮಹೋನ್ನತವೂ ನಿಗೂಢವೂ ಆದ ತತ್ವವನ್ನು ಅರಿತುಕೊಳ್ಳಬಲ್ಲವರಾರು?


ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಅವನಿಂದ ಸಾಧ್ಯವಾಗದು. ಹೌದು, ಜ್ಞಾನಿ ತನ್ನಿಂದಾಗುತ್ತದೆ ಎಂದು ಹೇಳಿಕೊಳ್ಳಬಹುದು; ಆದರೆ ಅವನಿಂದಲೂ ಅದು ಸಾಧ್ಯವಾಗದು.


ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.


ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.


ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.


ಈ ವಿಷಯ ಮೊರ್ದೆಕೈಗೆ ತಿಳಿದುಬಂದಾಗ, ಆತನು ಎಸ್ತೇರಳಿಗೆ ತಿಳಿಸಿದನು. ರಾಣಿಯು ಅವನ ಹೆಸರನ್ನು ಅರಸನಿಗೆ ಹೇಳಿ ಅವರು ನಡೆಸುತ್ತಿದ್ದ ಆ ಪಿತೂರಿ ಬಗ್ಗೆ ತಿಳಿಸಿದಳು.


ಆದರೂ ನನಗೆ ಚೆನ್ನಾಗಿ ಗೊತ್ತಿತ್ತು; ನಿನ್ನ ಹೃದಯದಲ್ಲಿ ಗುಟ್ಟಾದ ಯೋಜನೆಯೊಂದು ಹುದುಗಿತ್ತು;


ನನಗೆ ವಿಧಿತವಾದುವುಗಳನೆ ಕಾರ್ಯಗೊಳಿಸುತ್ತಾನೆ ಈ ಪರಿಯ ಹಲವಾರು ಯೋಜನೆಗಳು ಆತನಲ್ಲಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು