Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:8 - ಕನ್ನಡ ಸತ್ಯವೇದವು C.L. Bible (BSI)

8 “ದೇವರು ಅವರಿಗೆ ಜಡಸ್ವಭಾವವನ್ನು ಕೊಟ್ಟರು. ಇಂದಿನವರೆಗೂ ಅವರು ಕಣ್ಣಿದ್ದೂ ಕಾಣರು, ಕಿವಿಯಿದ್ದೂ ಕೇಳರು,” ಎಂದು ಲಿಖಿತವಾಗಿದೆ. ಇದಲ್ಲದೆ ದಾವೀದನು ಇಂತೆಂದಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರು ಅವರಿಗೆ ಜಡಭಾವವನ್ನು ಅಂದರೆ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟನು; ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಅದೆ ಎಂದು ಬರೆದ ಪ್ರಕಾರ ಅವರಿಗೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪವಿತ್ರ ಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ಜನರಿಗೆ ಅರ್ಥವಾಗದಂತೆ ದೇವರು ಅವರನ್ನು ಮಂಕುಗೊಳಿಸಿದನು.” “ಅವರು ಇಂದಿನವರೆಗೂ ಕಣ್ಣಿದ್ದರೂ ಕಾಣದಂತೆ ಕಿವಿಯಿದ್ದರೂ ಕೇಳದಂತೆ ದೇವರು ಅವುಗಳನ್ನು ಮುಚ್ಚಿಬಿಟ್ಟನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪವಿತ್ರ ವೇದದಲ್ಲಿ ಬರೆದಿರುವಂತೆ, “ದೇವರು ಅವರಿಗೆ ಜಡಸ್ವಭಾವದ ಆತ್ಮವನ್ನು, ಕಾಣಲಾರದ ಕಣ್ಣನ್ನು ಮತ್ತು ಕೇಳಲಾರದ ಕಿವಿಯನ್ನು ಕೊಟ್ಟರು, ಅದು ಇಂದಿನವರೆಗೂ ಹಾಗೆಯೇ ಇದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪವಿತ್ರ್ ಪುಸ್ತಕ್ ಮನ್ತಾ, “ದೆವಾನ್ ತೆಂಚಿ ಮನಾ ಅನಿ ಕಾಳ್ಜಾ ಮಂದ್ ಕರ್‍ಲ್ಯಾನ್; ಆಜ್‍ ಬಿ ತೆಂಕಾ ದಿಸಿನಾ ನಾಹೊಲ್ಯಾರ್ ಆಯ್ಕಿನಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:8
13 ತಿಳಿವುಗಳ ಹೋಲಿಕೆ  

ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಸರ್ವೇಶ್ವರ ಇಂದಿನವರೆಗೂ ಅಯ್ಯೋ ನಿಮಗೆ ಅನುಗ್ರಹಿಸಲಿಲ್ಲ!


ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.


“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.”


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


‘ನೀನು ಆ ಜನರ ಬಳಿಗೆ ಹೋಗಿ ಅವರಿಗೆ ಇಂತೆನ್ನು: ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರೀ ಜನರು


ಅದಕ್ಕೆ, “ನೀನು ಜನರ ಬಳಿಗೆ ಹೋಗಿ ಹೀಗೆಂದು ಹೇಳು : ‘ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು. ಕಣ್ಣಾರೆ ಕಂಡರೂ ಗ್ರಹಿಸಬಾರದು.’


ಆ ಜನಾಂಗಗಳವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮ ವಿಗ್ರಹಗಳನ್ನು ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.


ಆ ಕಾಲದ ಪದ್ಧತಿಯನ್ನು ಇಂದಿಗೂ ಮುಂದುವರಿಸುತ್ತಿದ್ದಾರೆ. ಸರ್ವೇಶ್ವರನಲ್ಲಿ ಭಯಭಕ್ತಿ ಇಸ್ರಯೇಲರಿಗಿಲ್ಲ; ಅವರಿಂದಲೇ ಇಸ್ರಯೇಲನೆಂಬ ಹೆಸರು ಹೊಂದಿದ ಯಕೋಬನ ಸಂತಾನದವರಿಗೆ ಕೊಡಲಾದ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ಅವರು ಅನುಸರಿಸಲಿಲ್ಲ.


ಅವರು ತಮ್ಮ ಚೊಚ್ಚಲುಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು