Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:14 - ಕನ್ನಡ ಸತ್ಯವೇದವು C.L. Bible (BSI)

14 ಯಾವ ಪದಾರ್ಥವು ಸ್ವತಃ ಅಶುದ್ಧವಲ್ಲವೆಂದು ಪ್ರಭುಯೇಸುವಿನಲ್ಲಿ ನಾನು ಖಚಿತವಾಗಿ ಹೇಳಬಲ್ಲೆ. ಆದರೆ, ಒಂದು ಪದಾರ್ಥವನ್ನು ಅಶುದ್ಧವೆಂದು ಯಾರಾದರೂ ಭಾವಿಸಿದರೆ ಅದು ಅವನಿಗೆ ಅಶುದ್ಧವೇ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಬಲ್ಲೆನು, ಮತ್ತು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಪ್ರಭುವಾದ ಯೇಸುವಿನಲ್ಲಿದ್ದೇನೆ. ಯಾವ ಆಹಾರಪದಾರ್ಥವನ್ನೇ ಆಗಲಿ ತಿನ್ನುವುದು ತಪ್ಪಲ್ಲವೆಂದು ನನಗೆ ಗೊತ್ತಿದೆ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ನಂಬಿದರೆ, ಆ ಆಹಾರಪದಾರ್ಥವು ಅವನಿಗೆ ಅಶುದ್ಧವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಧನಿಯಾ ಜೆಜು ಕ್ರಿಸ್ತಾಚೊ ಮನ್ ಮಾಕಾ ಗೊತ್ತ್ ಹೊತ್ತ್ಯಾ ಪರ್‍ಕಾರ್, ಖಲಿಬಿ ಖಾತಲಿ ಜಿನ್ಸಾ ಹೊಂವ್ದಿತ್ ಬುರ್ಶಿ ನ್ಹಯ್ ಮನುನ್ ಮಾಕಾ ಗೊತ್ತ್ ಹಾಯ್; ಖರೆ ಕೊನ್‍ಬಿ ಎಕ್ಲೊ ಅಪ್ನಿ ತೆ ಜಿನಸ್ ಬುರ್ಶೆ ಮನುನ್ ಚಿಂತಾ, ಹೊಲ್ಯಾರ್ ತೆಕಾ ತೆ ಬುರ್ಶೆಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:14
12 ತಿಳಿವುಗಳ ಹೋಲಿಕೆ  

ಮನಃಶುದ್ಧಿಯುಳ್ಳವರಿಗೆ ಎಲ್ಲವೂ ಶುದ್ಧವಾಗಿಯೇ ಇದೆ. ಭ್ರಷ್ಟರಿಗೆ ಮತ್ತು ಅವಿಶ್ವಾಸಿಗಳಿಗೆ ಯಾವುದೂ ಶುದ್ಧವಲ್ಲ. ಏಕೆಂದರೆ, ಅವರ ಮನಸ್ಸೂ ಮನಸ್ಸಾಕ್ಷಿಯೂ ಮಲಿನವಾಗಿದೆ.


ಒಬ್ಬನು ಎಂಥ ಆಹಾರವನ್ನಾದರೂ ಭುಜಿಸಬಹುದೆಂದು ಭಾವಿಸುತ್ತಾನೆ. ವಿಶ್ವಾಸದಲ್ಲಿ ಸ್ಥಿರವಿಲ್ಲದವನು ಸಸ್ಯಾಹಾರಿ ಆಗಿಯೇ ಇರುತ್ತಾನೆ.


ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ.


ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದೇ. ಅವರಿಗೆ ಸ್ತುತಿಸಲ್ಲಿಸಿ ಸ್ವೀಕರಿಸಿದ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.


ನೈಜ ಅರಿವುಳ್ಳವನೆಂದು ಹೇಳಿಕೊಳ್ಳುವ ನೀನು ವಿಗ್ರಹದ ಗುಡಿಯಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲ ಮನಸ್ಸಾಕ್ಷಿಯುಳ್ಳ ಸೋದರನು ಕಂಡರೆ, ಅವನು ಸಹ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಲು ಧೈರ್ಯಗೊಳ್ಳಲಾರನೇ?


ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಮಾಂಸದ ಮಾರುಕಟ್ಟೆಯಲ್ಲಿ ಮಾರುವುದೆಲ್ಲವನ್ನೂ ನೀವು ತಂದು ತಿನ್ನಬಹುದು.


ಅನುಮಾನದಿಂದ ಊಟಮಾಡುವವನು ದೇವರ ಮುಂದೆ ಅಪರಾಧಿಯಾಗುತ್ತಾನೆ. ಏಕೆಂದರೆ, ಅವನು ವಿಶ್ವಾಸದ ಆಧಾರದ ಮೇಲೆ ವರ್ತಿಸುತ್ತಿಲ್ಲ. ವಿಶ್ವಾಸದ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.


ಕೇವಲ ಆಹಾರಕ್ಕಾಗಿ, ದೇವರು ಕಟ್ಟಿದ್ದನ್ನು ನೀನು ಕೆಡವಬೇಡ. ಆಹಾರಪದಾರ್ಥಗಳೆಲ್ಲಾ ಒಳ್ಳೆಯವೇ. ಆದರೆ ಅವುಗಳಲ್ಲಿ ಯಾವುದಾದರೂ ಒಂದನ್ನು ತಿನ್ನುವುದರಿಂದ ಮತ್ತೊಬ್ಬನಿಗೆ ವಿಘ್ನವನ್ನು ಒಡ್ಡುವುದಾದರೆ, ಅದು ತಪ್ಪು.


ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಅವರು ನೋಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು