Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:17 - ಕನ್ನಡ ಸತ್ಯವೇದವು C.L. Bible (BSI)

17 ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕಶ್ಯಾಕ್ ಮಟ್ಲ್ಯಾರ್ ದೆವಾಚೊ ರಾಜ್ ಖಾತಲ್ಯಾ ಅನಿ ಫಿತಲ್ಯಾಚ್ಯಾ ವರ್‍ತಿ ಹೊಂದುನ್ ನಾ. ಖರಿ ವಾಟ್, ಸಮಾದಾನ್, ಅನಿ ಪವಿತ್ರ್ ಆತ್ಮೊ ದಿತಲ್ಯಾ ಕುಶಿಚ್ಯಾ ವರ್‍ತಿ ಹೊಂದುನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:17
38 ತಿಳಿವುಗಳ ಹೋಲಿಕೆ  

ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ದೇವರ ಸಾಮ್ರಾಜ್ಯ ಮರುಳು ಮಾತಲ್ಲ, ಶಕ್ತಿಯ ಸಾಧನ,


ನಾವು ತಿನ್ನುವ ಆಹಾರ ನಮ್ಮನ್ನು ದೇವರ ಸನ್ನಿಧಿಗೆ ಸೇರಿಸಲಾರದು. ಅದನ್ನು ತಿನ್ನದಿರುವುದರಿಂದ ನಮಗೆ ನಷ್ಟವಿಲ್ಲ, ತಿಂದರೆ ಲಾಭವಿಲ್ಲ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಶರೀರ ಸ್ವಭಾವದಲ್ಲೆ ಮಗ್ನರಾಗಿರುವುದರ ಪರಿಣಾಮ ಮರಣ; ಪವಿತ್ರಾತ್ಮ ಅವರಲ್ಲೇ ಮಗ್ನರಾಗಿರುವುದರ ಪರಿಣಾಮ ಸಜ್ಜೀವ ಮತ್ತು ಶಾಂತಿಸಮಾಧಾನ.


ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ಭಕ್ತ ವಿಶ್ವಾಸಿಗಳಾದರೋ ಪರಮಾನಂದಪಟ್ಟರು, ಪವಿತ್ರಾತ್ಮಭರಿತರಾದರು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.


ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


“ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು.


ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು.


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು