Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:18 - ಕನ್ನಡ ಸತ್ಯವೇದವು C.L. Bible (BSI)

18 ಹೀಗೆ ಕ್ರಿಸ್ತಯೇಸುವಿಗೆ ಸೇವೆಮಾಡುವವನು, ದೇವರಿಂದ ಮೆಚ್ಚುಗೆಯನ್ನು ಮತ್ತು ಮನುಷ್ಯರಿಂದ ಮಾನ್ಯತೆಯನ್ನು ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ರೀತಿಯಲ್ಲಿ ಕ್ರಿಸ್ತನ ಸೇವೆಮಾಡುವವನು ದೇವರನ್ನು ಮೆಚ್ಚಿಸುವವನಾಗಿದ್ದಾನೆ. ಜನರೂ ಅವನನ್ನು ಸ್ವೀಕರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಶೆ ಕ್ರಿಸ್ತಾಚಿ ಸೆವಾ ಕರಲ್ಲೆ ತುಮಿ ದೆವಾಕ್ ಮಾನಿ ಸರ್ಕೆ ಕರ್‍ತ್ಯಾಶಿ, ಅನಿ ಲೊಕಾಂಚ್ಯಾ ಮದ್ದಿ ನಾವ್ ಕಮ್ವುನ್ ಘೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:18
29 ತಿಳಿವುಗಳ ಹೋಲಿಕೆ  

ಪ್ರಭುವಿನ ದೃಷ್ಟಿಯಲ್ಲಿ ಮಾತ್ರವಲ್ಲ.ಮಾನವರ ದೃಷ್ಟಿಯಲ್ಲೂ ಯೋಗ್ಯವಾದುದನ್ನು ಮಾಡುವುದೇ ನಮ್ಮ ಉದ್ದೇಶ.


ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ವಿಧವೆಯಾದವಳಿಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ, ಆ ಮಕ್ಕಳು ಮೊತ್ತಮೊದಲು ತಮ್ಮ ಸ್ವಂತ ಕುಟುಂಬಕ್ಕೆ ಸಹಾಯಮಾಡಬೇಕಾದುದು ಅವರ ಧಾರ್ಮಿಕ ಕರ್ತವ್ಯವೆಂಬುದು ಅವರಿಗೆ ತಿಳಿದಿರಲಿ. ಹೀಗೆ ಅವರು ತಮ್ಮ ತಂದೆತಾಯಿಯರಿಗೆ ಪ್ರತ್ಯುಪಕಾರಮಾಡಿದಂತಾಗುತ್ತದೆ. ಅಲ್ಲದೆ, ಇದು ದೇವರ ದೃಷ್ಟಿಯಲ್ಲಿ ಮೆಚ್ಚುಗೆ ಪಡೆದುದು.


ಹೀಗೆ ಮಾಡುವುದು ಒಳ್ಳೆಯದು, ನಮ್ಮ ಉದ್ಧಾರಕರಾದ ದೇವರಿಗೆ ಮೆಚ್ಚುಗೆಯಾದುದು.


ಅದಕ್ಕೆ ಪ್ರತಿಫಲವಾಗಿ ಪ್ರಭುವಿನಿಂದ ನೀವು ಸ್ವರ್ಗೀಯ ಬಾಧ್ಯತೆಯನ್ನು ಪಡೆಯುವಿರೆಂದು ನಿಮಗೆ ತಿಳಿದೇ ಇದೆ.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ಬದಲಿಗೆ, ಎಲ್ಲ ವಿಷಯಗಳಲ್ಲೂ ದೇವರ ದಾಸರೆಂದು ತೋರಿಸಿಕೊಳ್ಳುತ್ತೇವೆ. ಕಷ್ಟಸಂಕಟಗಳಲ್ಲೂ ದುಃಖದುರಿತಗಳಲ್ಲೂ ತಾಳ್ಮೆಯಿಂದ ವರ್ತಿಸಿದ್ದೇವೆ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಪ್ರಭುವಿನಿಂದ ಕರೆಹೊಂದಿದವನು ದಾಸನಾಗಿದ್ದರೂ ಪ್ರಭುವಿನಲ್ಲಿ ಅವನು ಸ್ವತಂತ್ರನೆ. ಅದೇ ಮೇರೆಗೆ ಸ್ವತಂತ್ರನಾದವನು ಕ್ರಿಸ್ತಯೇಸುವಿನಿಂದ ಕರೆಹೊಂದಿದ್ದರೆ ಅವನು ಕ್ರಿಸ್ತಯೇಸುವಿನ ದಾಸನೇ ಆಗುತ್ತಾನೆ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಮತ್ತೊಬ್ಬನ ದಾಸನ ಮೇಲೆ ದಂಡನೆಯ ತೀರ್ಪುಕೊಡಲು ನೀನು ಯಾರು? ಅವನು ಸಮರ್ಥನು ಅಥವಾ ಅಸಮರ್ಥನು ಎಂದು ತೀರ್ಪುಕೊಡುವುದು ಅವನ ಯಜಮಾನನಿಗೆ ಸೇರಿದ್ದು. ಅವನು ಸಮರ್ಥನಾಗುವಂತೆ ಮಾಡಲು ಪ್ರಭು ಶಕ್ತರು.


ಪ್ರಭುವಿನ ಸೇವೆಯಲ್ಲಿ ಆಲಸಿಗಳಾಗದೆ ಅತ್ಯಾಸಕ್ತರಾಗಿರಿ.


ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.


ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ;


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.


ಈ ಕಾರಣ, ಇಲ್ಲಾದರೂ ಸರಿ, ಅಲ್ಲಾದರೂ ಸರಿ, ಪ್ರಭು ಮೆಚ್ಚುವಂತೆ ಬಾಳುವುದೊಂದೇ ನಮ್ಮ ಗುರಿ.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು