Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:21 - ಕನ್ನಡ ಸತ್ಯವೇದವು C.L. Bible (BSI)

21 ಮಾಂಸವನ್ನು ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ, ಅಥವಾ ಇನ್ನಾವುದೇ ಆಗಲಿ, ನಿನ್ನ ಸಹೋದರನಿಗೆ ಪಾಪಕ್ಕೆ ಕಾರಣವಾಗುವುದಾದರೆ ಅದನ್ನು ಬಿಟ್ಟುಬಿಡುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮಾಂಸ ತಿನ್ನುವದನ್ನಾಗಲಿ ದ್ರಾಕ್ಷಾರಸ ಕುಡಿಯುವದನ್ನಾಗಲಿ ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವದನ್ನಾಗಲಿ ಬಿಟ್ಟುಬಿಡುವದೇ ಒಳ್ಳೇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮಾಂಸ ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ ಅಥವಾ ಬೇರೆ ಏನನ್ನೇ ಆಗಲಿ, ಅದು ನಿಮ್ಮ ಸಹೋದರರನ್ನು ಎಡವುವಂತೆ ಮಾಡುವುದಾದರೆ ಅದನ್ನು ಮಾಡದೆ ಇರುವುದೇ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಾಸ್ ಖಾಯ್ನಸ್ತಾನಾ, ದಾರು ಫಿ ನಸ್ತಾನಾ, ಅನಿ ತುಜೊ ವಿಶ್ವಾಸಾತ್ ಹೊತ್ತೊ ಭಾವ್ ಚುಕೆತ್ ಪಡುಕ್ ನಾಹೊಲ್ಯಾರ್ ತೆಚೊ ವಿಶ್ವಾಸ್ ಹಾಲುಕ್ ಕಾರನ್ ಹೊತಲೆ ಕಾಯ್ಬಿ ಹೊಂವ್ದಿತ್ ತಿಯಾ ಕರಿನಸ್ತಾನಾ ರ್‍ಹಾತಲೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:21
13 ತಿಳಿವುಗಳ ಹೋಲಿಕೆ  

ನಾನು ತಿನ್ನುವ ಆಹಾರ ನನ್ನ ಸಹೋದರನ ವಿಶ್ವಾಸಕ್ಕೆ ಅಡ್ಡಿಯಾಗುವುದಾದರೆ ಎಂದಿಗೂ ನಾನದನ್ನು ತಿನ್ನಲಾರೆ, ಅವನ ವಿಶ್ವಾಸಕ್ಕೆ ಅಡ್ಡಿಯನ್ನು ತರಲಾರೆ.


ಆದಕಾರಣ ಒಬ್ಬರ ವಿಷಯದಲ್ಲಿ ಒಬ್ಬರು ತೀರ್ಪುಮಾಡದೆ ಇರೋಣ. ಬದಲಾಗಿ ಸಹೋದರನಿಗೆ ಯಾವ ರೀತಿಯ ಅಡ್ಡಿಯನ್ನಾಗಲೀ ಅಡಚಣೆಗಳನ್ನಾಗಲೀ ಉಂಟುಮಾಡುವುದಿಲ್ಲವೆಂದು ತೀರ್ಮಾನಿಸಿಕೊಳ್ಳಿ.


ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.


“ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.


ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.


ನೀವು ಹಿಡಿದಿರುವ ಹಾದಿಯನ್ನು ಸರಿಪಡಿಸಿಕೊಳ್ಳಿ. ಆಗ ಕುಂಟುವ ಕಾಲು ಉಳುಕದೆ ವಾಸಿಯಾಗುತ್ತದೆ.


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.


ಆದರೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸುವಾಗ ದುರ್ಬಲಮನಸ್ಸುಳ್ಳ ಸೋದರನ ವಿಶ್ವಾಸಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು