Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:22 - ಕನ್ನಡ ಸತ್ಯವೇದವು C.L. Bible (BSI)

22 ಈ ವಿಷಯದಲ್ಲಿ ನಿನಗಿರುವ ವೈಯಕ್ತಿಕ ನಂಬಿಕೆ ದೇವರಿಗೆ ಮತ್ತು ನಿನಗೆ ಮಾತ್ರ ತಿಳಿದಿರಲಿ. ತಾನು ಅನುಮೋದಿಸಿ ಮಾಡಿದುದರ ಬಗ್ಗೆ ಅನುಮಾನಪಡದವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ನಿನ್ನ ಮಟ್ಟಿಗೇ ಇರಲಿ. ತಾನು ಒಪ್ಪಿದ ಕೆಲಸದ ವಿಷಯದಲ್ಲಿ ಇದು ಸರಿಯೋ ಸರಿಯಲ್ಲವೋ ಎಂದು ಸಂಶಯ ಪಡದವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈ ಸಂಗತಿಗಳ ಬಗ್ಗೆ ನಿನಗಿರುವ ವಿಶ್ವಾಸವು ನಿನಗೂ ದೇವರಿಗೂ ಮಾತ್ರ ತಿಳಿದಿರಲಿ. ತನಗೆ ಸರಿಯೆನಿಸಿದ ಕಾರ್ಯಗಳನ್ನು ತಾನು ದೋಷಿಯಾಗುತ್ತೇನೆಂಬ ಸಂಶಯವಿಲ್ಲದೆ ಮಾಡುವವನೇ ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈ ವಿಷಯದಲ್ಲಿ ನಿಮಗಿರುವ ವೈಯಕ್ತಿಕ ದೃಢವಿಶ್ವಾಸವನ್ನು ನೀವು ದೇವರ ಮುಂದೆ ಇಟ್ಟುಕೊಂಡಿರು. ತಾವು ಅನುಮೋದಿಸಿ ಮಾಡಿದ ಕಾರ್ಯಗಳ ಬಗ್ಗೆ ತಮಗೆ ದಂಡನಾತೀರ್ಪು ಮಾಡಿಕೊಳ್ಳದವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ವಿಶ್ವಾಸಾಚ್ಯಾ ವೈನಾ ದೆವಾಚ್ಯಾ ನದ್ರೆತ್ ತಿಯಾ ಕರಲ್ಲೊ ನಿರ್‍ದಾರ್ ತುಜ್ಯಾ ಜಿವನಾಚೊ ಉಜ್ವೊಡ್ ಹೊವ್ನ್ ರ್‍ಹಾಂವ್ದಿತ್. ಅಪ್ನಾಚ್ಯಾ ಭುತ್ತುರ್‍ಲ್ಯಾ ಮನಾಚ್ಯಾ ವಿರೊದ್ ಜಾಯ್ನಸ್ತಾನಾ ಹೆ ನಾಹೊಲ್ಯಾರ್ ತೆ ಕರುಕ್ ನಿರ್‍ದಾರ್ ಘೆತಲೊ ಮಾನುಸ್ ಸುಖಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:22
13 ತಿಳಿವುಗಳ ಹೋಲಿಕೆ  

ಪ್ರಿಯರೇ, ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸದಿದ್ದರೆ, ನಾವು ದೇವರ ಮುಂದೆ ಧೈರ್ಯದಿಂದಿರಲು ಸಾಧ್ಯವಾಗುತ್ತದೆ.


ಒಂದು ದಿನಕ್ಕಿಂತ ಮತ್ತೊಂದು ದಿನ ಮಂಗಳಕರವಾದುದು ಎಂದು ಒಬ್ಬನು ಭಾವಿಸಬಹುದು. ಮತ್ತೊಬ್ಬನು, ಎಲ್ಲಾ ದಿನಗಳು ಮಂಗಳಕರವಾದುವು ಎಂದು ಹೇಳಬಹುದು. ಈ ವಿಷಯದಲ್ಲಿ ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.


ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ಅನುಮಾನದಿಂದ ಊಟಮಾಡುವವನು ದೇವರ ಮುಂದೆ ಅಪರಾಧಿಯಾಗುತ್ತಾನೆ. ಏಕೆಂದರೆ, ಅವನು ವಿಶ್ವಾಸದ ಆಧಾರದ ಮೇಲೆ ವರ್ತಿಸುತ್ತಿಲ್ಲ. ವಿಶ್ವಾಸದ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಯಾವ ಪದಾರ್ಥವು ಸ್ವತಃ ಅಶುದ್ಧವಲ್ಲವೆಂದು ಪ್ರಭುಯೇಸುವಿನಲ್ಲಿ ನಾನು ಖಚಿತವಾಗಿ ಹೇಳಬಲ್ಲೆ. ಆದರೆ, ಒಂದು ಪದಾರ್ಥವನ್ನು ಅಶುದ್ಧವೆಂದು ಯಾರಾದರೂ ಭಾವಿಸಿದರೆ ಅದು ಅವನಿಗೆ ಅಶುದ್ಧವೇ ಆಗುತ್ತದೆ.


ಒಬ್ಬನು ಎಂಥ ಆಹಾರವನ್ನಾದರೂ ಭುಜಿಸಬಹುದೆಂದು ಭಾವಿಸುತ್ತಾನೆ. ವಿಶ್ವಾಸದಲ್ಲಿ ಸ್ಥಿರವಿಲ್ಲದವನು ಸಸ್ಯಾಹಾರಿ ಆಗಿಯೇ ಇರುತ್ತಾನೆ.


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


ಅಯ್ಯೋ, ನಾನೆಂಥ ನಿರ್ಭಾಗ್ಯನು! ಸಾವಿನ ದವಡೆಗೆ ಸಿಕ್ಕಿರುವ ಈ ಶರೀರದಿಂದ ನನ್ನನ್ನು ಬಿಡಿಸುವವರು ಯಾರು?


ನಾನು ಮಾಡುವುದು ನನಗೇ ಅರ್ಥವಾಗುತ್ತಿಲ್ಲ. ಏನನ್ನು ಮಾಡಲು ಅಪೇಕ್ಷಿಸುತ್ತೇನೋ ಅದನ್ನು ಮಾಡುತ್ತಿಲ್ಲ. ಏನನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುತ್ತೇನೆ.


ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪುನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು.


ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು