Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:6 - ಕನ್ನಡ ಸತ್ಯವೇದವು C.L. Bible (BSI)

6 ಒಂದು ದಿನವನ್ನು ಮಂಗಳಕರವೆಂದು ಭಾವಿಸುವವನು ಪ್ರಭುವಿಗಾಗಿಯೇ ಆ ರೀತಿ ಭಾವಿಸುತ್ತಾನೆ. ಮಾಂಸವನ್ನು ತಿನ್ನುವವನು ಪ್ರಭುವಿಗಾಗಿಯೇ ತಿನ್ನುತ್ತಾನೆ. ಹೇಗೆಂದರೆ, ತಿನ್ನುವ ಆ ಪದಾರ್ಥಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ಸಸ್ಯಾಹಾರಿಯೂ ಪ್ರಭುವಿಗಾಗಿಯೇ ಮಾಂಸವನ್ನು ತಿನ್ನದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದಿನವನ್ನು ಗಣ್ಯಮಾಡುವವನು ಕರ್ತನಿಗಾಗಿ ಅದನ್ನು ಗಣ್ಯಮಾಡುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವಸ್ತೋತ್ರ ಮಾಡುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವಸ್ತೋತ್ರ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಮುಖ್ಯವೆಂದು ಯೋಚಿಸುವ ವ್ಯಕ್ತಿಯು ಪ್ರಭುವಿಗೋಸ್ಕರವಾಗಿಯೇ ಹಾಗೆ ಯೋಚಿಸುವವನಾಗಿದ್ದಾನೆ. ಅಂತೆಯೇ ಎಲ್ಲಾ ಬಗೆಯ ಆಹಾರಪದಾರ್ಥಗಳನ್ನು ತಿನ್ನುವ ವ್ಯಕ್ತಿಯು ಪ್ರಭುವಿಗೋಸ್ಕರವೇ ಅವುಗಳನ್ನು ತಿನ್ನುತ್ತಾನೆ. ಹೌದು, ಅವನು ಆ ಆಹಾರಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಒಬ್ಬ ಒಂದು ದಿನವನ್ನು ವಿಶೇಷವೆಂದು ಎಣಿಸುವುದಾದರೆ ಅವನು ಅದನ್ನು ಕರ್ತನಿಗಾಗಿಯೇ ಮಾಡಲಿ. ಮಾಂಸಾಹಾರಿಯು ದೇವರಿಗೆ ಕೃತಜ್ಞತೆಯನ್ನು ಮಾಡಿ ಊಟಮಾಡುವುದಾದರೆ ಅವನು ಅದನ್ನು ಮಾಡುವುದು ಕರ್ತನಿಗಾಗಿಯೇ. ಸಸ್ಯಾಹಾರಿಯು ಕರ್ತನಿಗಾಗಿಯೇ ತಿನ್ನದೆ ಕೃತಜ್ಞತೆ ಸಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೆ ಕೊನ್ ತೊ ದಿಸ್ ಲೈ ಮಹತ್ವಾಚೊ ಮನುನ್ ಚಿಂತಾ, ತೊ ತೆ ಧನಿಯಾಚ್ಯಾ ಗೌರವಾಚ್ಯಾ ಸಾಟ್ನಿ ಕರ್‍ತಾ. ಜೆ ಕೊನ್ ಸಗ್ಳೆ ಖಾತಾ ತೆ ಧನಿಯಾಚ್ಯಾ ಗೌರವಾಸಾಟಿ ಮನುನ್ ಖಾತಾ. ಅನಿ ಅಪ್ನಾಕ್ ಗಾವಲ್ಲ್ಯಾ ಖಾನಾಸಾಟಿ ದೆವಾಕ್ ಧನ್ಯವಾದ್ ದಿತಾ. ಅನಿ ಜೊ ಕೊನ್ ಉಲ್ಲಿ ಜಿನಸಾ ಖಾಯ್ನಾ ತೊಬಿ ಧನಿಯಾಚ್ಯಾ ಗೌರವಾಸಾಟಿ ಖಾತಾ, ಅನಿ ತೊಬಿ ಅನಿ ಎಕ್ ರಿತಿನ್ ದೆವಾಕ್ ಧನ್ಯವಾದ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:6
12 ತಿಳಿವುಗಳ ಹೋಲಿಕೆ  

ಅನಂತರ ಆ ಏಳು ರೊಟ್ಟಿಗಳನ್ನೂ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಸಲ್ಲಿಸಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಟ್ಟರು; ಶಿಷ್ಯರು ಜನರಿಗೆ ಬಡಿಸಿದರು.


ಬಳಿಕ ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನರಿಗೆ ಹಂಚಿದರು.


ನೀವು ಶುಭಾಶುಭ ದಿನಗಳನ್ನು, ಮಾಸಗಳನ್ನು ಮತ್ತು ಸಂವತ್ಸರಗಳನ್ನು ಜಾಗರೂಕತೆಯಿಂದ ನೋಡುತ್ತೀರಿ.


ಆಗ ಆ ಜನರು, “ದೇವರು ಮೆಚ್ಚುವ ಕಾರ್ಯಗಳನ್ನು ನಾವು ಮಾಡಬೇಕಾದರೆ, ಏನುಮಾಡಬೇಕು?” ಎಂದು ಕೇಳಿದರು.


ಸ್ವಾರ್ಥ ನಿಗ್ರಹಕ್ಕಾಗಿ ನಾನು ನೇಮಿಸಿದ ಉಪವಾಸದ ದಿನ ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣೀತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ನನಗೆ ಮೆಚ್ಚುಗೆಯಾಗುವ ಉಪವಾಸ ಎನ್ನುತ್ತೀರೊ?


ಮೋಶೆ ಅವರಿಗೆ, “ಈ ದಿನ ಅದನ್ನು ಊಟಮಾಡಿ. ಇದು ಸರ್ವೇಶ್ವರನ ಸಬ್ಬತ್ ದಿನವಾದ್ದರಿಂದ ಈ ದಿನ ಅದು ಅಡವಿಯಲ್ಲಿ ದೊರೆಯುವುದಿಲ್ಲ.


ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡಲು ಜಾಗರೂಕರಾಗಿದ್ದದ್ದು ಆ ರಾತ್ರಿಯೇ. ಆದುದರಿಂದಲೆ ಇಸ್ರಯೇಲರೆಲ್ಲರು ತಲತಲಾಂತರಕ್ಕೂ ಸರ್ವೇಶ್ವರನ ಗೌರವಾರ್ಥ ಈ ರಾತ್ರಿಯಲ್ಲೇ ಜಾಗರಣೆಯನ್ನು ಅನುಸರಿಸಬೇಕು.


ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


ಜೆರುಸಲೇಮಿನಲ್ಲಿಯೂ ಜುದೇಯದಲ್ಲಿಯೂ ಇರುವ ಸಕಲ ಅಡಿಗೆಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಸಮರ್ಪಿತವಾಗಿರುವುವು. ಬಲಿಯನ್ನರ್ಪಿಸಲು ಬರುವವರೆಲ್ಲರೂ ಬಲಿಪಶುವಿನ ಮಾಂಸವನ್ನು ಬೇಯಿಸಲು ಈ ಪಾತ್ರೆಗಳನ್ನು ಬಳಸುವರು. ಆ ದಿನ ಬಂದಾಗ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಯಾವ ವರ್ತಕನೂ ಇರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು