Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:4 - ಕನ್ನಡ ಸತ್ಯವೇದವು C.L. Bible (BSI)

4 ಅವರು ನನ್ನ ಪ್ರಾಣರಕ್ಷಣೆಗಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡಾಗಿಸಿದವರು. ಅದಕ್ಕಾಗಿ ನಾನು ಅವರಿಗೆ ಚಿರಋಣಿ. ನಾನು ಮಾತ್ರವಲ್ಲ, ಯೆಹೂದ್ಯೇತರ ಸಭೆಗಳ ಎಲ್ಲರೂ ಅವರು ಮಾಡಿದ ಉಪಕಾರಕ್ಕೆ ಚಿರಋಣಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ನನ್ನ ಪ್ರಾಣವನ್ನು ಉಳಿಸುವುದಕ್ಕಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡುಮಾಡಿದರು. ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಯೆಹೂದ್ಯರಲ್ಲದ ಸಭೆಗಳವರೆಲ್ಲರೂ ಅವರಿಗೆ ಕೃತಜ್ಞರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ನನ್ನ ಪ್ರಾಣದ ನಿಮಿತ್ತವಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಒಡ್ಡಿದರು. ಅವರಿಗೆ ನಾನು ಮಾತ್ರವೇ ಅಲ್ಲ ಯೆಹೂದ್ಯರಲ್ಲದವರು ಎಲ್ಲಾ ಸಭೆಗಳವರೂ ಕೃತಜ್ಞರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಾಜೊ ಜಿವ್ ರಾಕುಸಾಟ್ನಿ ಅಪ್ನಾಚೊ ಜಿವ್ ಅಪಾಯಾತ್ ಘಾಲುಕ್ ಸೈತ್ ತೆನಿ ಫಾಟಿ-ಫಿಡೆ ಬಗುಕ್‍ನ್ಯಾತ್. ಜುದೆವ್ ನ್ಹಯ್ ಅಸಲ್ಲ್ಯಾ ಲೊಕಾಂಚೆ ದೆವಾಕ್ ವಿಶ್ವಾಸ್ ಕರಲ್ಲೆ ಸಗ್ಳೆ ತಾಂಡೆಬಿ ತೆನಿ ಕರಲ್ಲ್ಯಾ ಉಪ್ಕಾರಾಚಿ ಯಾದ್ ಕಾಡ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:4
17 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ.


ಕ್ರಿಸ್ತಯೇಸುವಿನ ಸೇವೆಯಲ್ಲಿ ಅವನು ಸತ್ತು ಬದುಕಿದ್ದಾನೆ. ನೀವು ಕೊಡಲು ಸಾಧ್ಯವಾಗದೆ ಹೋದ ನೆರವನ್ನು ಅವನು ನನಗೆ ಕೊಟ್ಟು ಸೇವೆಯನ್ನು ಪೂರ್ಣಗೊಳಿಸಿದ್ದಾನೆ.


ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.


ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಹೇಳುವುದಾದರೆ: ಗಲಾತ್ಯದ ಸಭೆಗಳಿಗೆ ನಾನು ಕೊಟ್ಟ ನಿಯಮವನ್ನೇ ನೀವೂ ಅನುಸರಿಸಿರಿ. ನಾನು ಬಂದಾಗ ಹಣ ಸಂಗ್ರಹಿಸುವ ಅವಶ್ಯಕತೆ ಇರಬಾರದು.


ದೇವರ ಕರೆಗೆ ಮತ್ತು ಪ್ರಭು ನೀಡಿರುವ ವರದಾನಗಳಿಗೆ ಅನುಗುಣವಾಗಿ ಪ್ರತಿಯೊಬ್ಬನೂ ಬಾಳುವೆ ನಡೆಸಲಿ. ಎಲ್ಲ ಸಭೆಗಳಿಗೂ ನಾನಿದನ್ನೇ ವಿಧಿಸಿದ್ದೇನೆ.


ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು.


ಹೀಗೆ ಕ್ರೈಸ್ತಸಭೆಗಳು ವಿಶ್ವಾಸದಲ್ಲಿ ದೃಢಗೊಂಡು ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯತೊಡಗಿತು.


ಅವನು ಸಿರಿಯ ಮತ್ತು ಸಿಲಿಸಿಯಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಕ್ರೈಸ್ತಸಭೆಗಳನ್ನು ದೃಢಪಡಿಸುತ್ತಾ ಪ್ರಯಾಣ ಬೆಳೆಸಿದನು.


ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ.


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತೇನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು.


ಆ ಶತ್ರುಗಳೋಡಿದರು ನನಗೆ ಬೆಂಗೊಟ್ಟು ಆ ಹಗೆಗಳನು ನಿರ್ಮೂಲಮಾಡಿದೆ ನಾ ಗುರಿಯಿಟ್ಟು.


ತಂದ ಮೇಲೆ ಯೆಹೋಶುವನು ಎಲ್ಲಾ ಇಸ್ರಯೇಲರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೇನಾಧಿಪತಿಗಳಿಗೆ, “ಹತ್ತಿರ ಬಂದು ಆ ಅರಸರ ಕೊರಳಿನ ಮೇಲೆ ನಿಮ್ಮ ಪಾದಗಳನ್ನಿಡಿ,” ಎಂದು ಹೇಳಿದನು. ಅಂತೆಯೇ ಅವರು ಹತ್ತಿರ ಬಂದು ಕುತ್ತಿಗೆಯ ಮೇಲೆ ಕಾಲಿಟ್ಟರು.


ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ನಮ್ಮ ಪ್ರಭುವಾದ ಯೇಸುಕ್ರಿಸ್ತರಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ನಮ್ಮೊಲವಿನ ಬಾರ್ನಬ ಮತ್ತು ಪೌಲರೊಡನೆ ಈ ಪ್ರತಿನಿಧಿಗಳು ಬರುತ್ತಿದ್ದಾರೆ.


ಕ್ರಿಸ್ತಯೇಸುವಿನ ಸೇವೆಯಲ್ಲಿ ನನ್ನ ಸಹೋದ್ಯೋಗಿಗಳಾದ ಪ್ರಿಸಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.


ಅವರ ಮನೆಯಲ್ಲಿ ಸೇರುವ ಸಭೆಗೂ ನನ್ನ ಶುಭಾಶಯಗಳು. ನನ್ನ ಆಪ್ತಗೆಳೆಯ ಎಪೈನೆತನಿಗೆ ನನ್ನ ಪ್ರಣಾಮಗಳು; ಏಷ್ಯಾಸೀಮೆಯಲ್ಲಿ ಮೊತ್ತಮೊದಲಿಗೆ ಕ್ರಿಸ್ತಯೇಸುವನ್ನು ವಿಶ್ವಾಸಿಸಿದವನು ಆತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು