Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:20 - ಕನ್ನಡ ಸತ್ಯವೇದವು C.L. Bible (BSI)

20 ಮಕ್ಕಳಿಗೆ ಶಿಕ್ಷಕನೂ ಆಗಿರುವುದಾಗಿ ದೃಢವಾಗಿ ನಂಬಿಕೊಂಡಿದ್ದೀಯೆ; ಧರ್ಮಶಾಸ್ತ್ರದಲ್ಲಿ ಜ್ಞಾನ ಮತ್ತು ಸತ್ಯ ಮೇಳೈಸಿರುವುದಾಗಿ ಭಾವಿಸುತ್ತೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕತ್ತಲೆಯಲ್ಲಿರುವವರಿಗೆ ಬೆಳಕೂ ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೇನೆಂದು ನಂಬಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮೂಢರಿಗೆ ಶಿಕ್ಷಕನೆಂತಲೂ ಕಲಿಯಬೇಕಾದವರಿಗೆ ಉಪಾಧ್ಯಾಯನೆಂತಲೂ ನೀನು ನಿನ್ನ ಬಗ್ಗೆ ಆಲೋಚಿಸಿಕೊಂಡಿರುವೆ. ನಿನ್ನಲ್ಲಿ ಧರ್ಮಶಾಸ್ತ್ರವಿದೆ, ಆದ್ದರಿಂದ ಪ್ರತಿಯೊಂದನ್ನೂ ತಿಳಿದುಕೊಂಡಿರುವುದಾಗಿಯೂ ಎಲ್ಲಾ ಸತ್ಯವನ್ನು ಹೊಂದಿಕೊಂಡಿರುವುದಾಗಿಯೂ ನೀನು ಭಾವಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೀಯೆಂದು ಧೈರ್ಯವಾಗಿದ್ದೀಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಎಕ್ ಪಿಶ್ಯಾಕ್ ಬುದ್ ಸಾಂಗ್ತಲೊ, ವಳಕ್‍ ನಸಲ್ಲ್ಯಾ ಲೊಕಾಕ್ನಿ ಎಕ್ ಶಿಕ್ಚುತಲೊ ತಿಯಾ. ತುಕಾ ಖಾಯ್ದ್ಯಾಚ್ಯಾ ವಿಶಯಾತ್ ಸಗ್ಳೆ ಗೊತ್ತ್ ಹಾಯ್, ಖಾಯ್ದ್ಯಾನಿತ್ಲೆ ಖರೆ ಅನಿ ತೆಂಚೊ ಸಗ್ಳೊ ಅರ್ತ್ ತುಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:20
11 ತಿಳಿವುಗಳ ಹೋಲಿಕೆ  

ಅವರು ಭಕ್ತಿಯ ವೇಷ ಧರಿಸಿದ್ದರೂ ಅದರ ನಿಜವಾದ ಶಕ್ತಿಯನ್ನು ಅಲ್ಲಗಳೆಯುವರು. ಇಂಥವರ ಸಹವಾಸ ನಿನಗೆ ಬೇಡ.


ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ವಿಶ್ವಾಸ ಹಾಗೂ ಪ್ರೀತಿಯಲ್ಲಿ ನೀನು ನೆಲೆಗೊಂಡಿರು. ನಾನು ಬೋಧಿಸಿದ್ದನ್ನು ಆದರ್ಶವಾಗಿಟ್ಟುಕೊಂಡು ಅನುಸರಿಸು.


ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇಸುವಿನಲ್ಲಿ ಹಸುಗೂಸುಗಳು ನೀವು ಎಂದು ಭಾವಿಸಿ ನಿಮ್ಮೊಡನೆ ಮಾತನಾಡಬೇಕಾಯಿತು.


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.


ಹಾಲು ಕುಡಿಯಬೇಕಾದವನು ಹಸುಗೂಸು. ನ್ಯಾಯನೀತಿಯ ಅನುಭವ ಅವನಿಗಿಲ್ಲ.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ನೀನು ಕುರುಡರಿಗೆ ದಾರಿ ತೋರಿಸುವವನೂ ಕತ್ತಲೆಯಲ್ಲಿರುವವರಿಗೆ ಬೆಳಕೂ ಬುದ್ಧಿಹೀನರಿಗೆ ಬೋಧಕನೂ


‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


ಸಹೋದರರೇ, ಎಲ್ಲರೂ ಬೋಧಕರಾಗಲು ಆತುರಪಡಬೇಡಿ. ಬೋಧಕರಾದ ನಾವು ಇತರರಿಗಿಂತಲೂ ತೀವ್ರವಾದ ನ್ಯಾಯವಿಚಾರಣೆಗೆ ಗುರಿಯಾಗುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು