Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:25 - ಕನ್ನಡ ಸತ್ಯವೇದವು C.L. Bible (BSI)

25 ನೀನು ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ನಡೆದರೆ, ನೀನು ಮಾಡಿಸಿಕೊಂಡಿರುವ ಸುನ್ನತಿಗೆ ಅರ್ಥವಿದೆ. ಆದರೆ ನಿನ್ನ ನಡತೆ ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾಗಿದ್ದರೆ ನೀನು ಸುನ್ನತಿ ಮಾಡಿಸಿಕೊಂಡಿದ್ದರೂ ಮಾಡಿಸಿಕೊಳ್ಳದಂತೆಯೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀನು ಧರ್ಮಶಾಸ್ತ್ರಾನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ಪ್ರಯೋಜನಕರವಾದದ್ದೇ ಸರಿ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನೀನು ಧರ್ಮಶಾಸ್ತ್ರವನ್ನು ಅನುಸರಿಸಿದರೆ ನೀನು ಮಾಡಿಸಿಕೊಂಡ ಸುನ್ನತಿಗೆ ಅರ್ಥವಿದೆ. ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದರೆ ನಿನಗೆ ಸುನ್ನತಿಯಾಗಿಲ್ಲದಂತೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೀನು ನಿಯಮವನ್ನು ಕೈಕೊಳ್ಳುವವನಾದರೆ, ಸುನ್ನತಿ ಪ್ರಯೋಜನಕರವಾಗಿರುವುದು. ಆದರೆ ನೀನು ನಿಯಮವನ್ನು ಮೀರಿ ನಡೆಯುವವನಾದರೆ, ನಿನಗೆ ಸುನ್ನತಿಯಾಗಿದ್ದರೂ ಇಲ್ಲದಂತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಿಯಾ ಖಾಯ್ದ್ಯಾಂಚ್ಯಾ ಸಾರ್ಕೆ ಚಲ್ಲ್ಯಾರ್, ತುಜ್ಯಾ ಸುನ್ನತಿಕ್ ಕಿಮ್ಮತ್ ಹಾಯ್; ತಿಯಾ ಖಾಯ್ದ್ಯಾಂಚ್ಯಾ ಸಾರ್ಕೆ ಚಲಿನಸ್ಲ್ಯಾರ್, ತಿಯಾ ಸುನ್ನತ್ ಕರುನ್ ಘೆವ್ನ್ ಬಿ ಕರುನ್ ಘೆಯ್‍ನಸಲ್ಲ್ಯಾರ್ ಸಾರ್ಕೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:25
16 ತಿಳಿವುಗಳ ಹೋಲಿಕೆ  

ಜುದೇಯದವರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನಾದ ನನಗಾಗಿ ಸುನ್ನತಿಯಾಗಿರಿ. ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲವಾದರೆ ನಿಮ್ಮ ಪಾಪಾಕ್ರಮಗಳ ನಿಮಿತ್ತ ನನ್ನ ಕೋಪಾಗ್ನಿಯು ಭುಗಿಲೆದ್ದು ಆರಿಸಲಾಗದಷ್ಟು ಧಗಧಗಿಸುವುದು.”


ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ಬಾಹ್ಯಾಚರಣೆಯಲ್ಲಿ ಮಾತ್ರ ಯೆಹೂದ್ಯನಾಗಿರುವವನು ನಿಜವಾದ ಯೆಹೂದ್ಯನಲ್ಲ. ಅಂತೆಯೇ, ನಿಜವಾದ ಸುನ್ನತಿಯು ಕೇವಲ ಬಾಹ್ಯಲಕ್ಷಣವುಳ್ಳ ಶಾರೀರಿಕ ಪದ್ಧತಿಯಲ್ಲ.


ದೇವರಿಂದಲೇ ನಿಯಮಗಳನ್ನು ಪಡೆದಿರುವುದಾಗಿ ಕೊಚ್ಚಿಕೊಳ್ಳುವ ನೀನು ಆ ನಿಯಮಗಳನ್ನೇ ಉಲ್ಲಂಘಿಸಿ ದೇವರಿಗೆ ದ್ರೋಹಬಗೆಯುತ್ತೀಯೇನು?


ಧರ್ಮಶಾಸ್ತ್ರವನ್ನು ಆಲಿಸಿದ ಮಾತ್ರಕ್ಕೆ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ಆಲಿಸುವುದರ ಜೊತೆಗೆ ಪಾಲಿಸಲೂ ಬೇಕು.


ಸುನ್ನತಿ ಮಾಡಿಸಿಕೊಳ್ಳದ ಮತ್ತೊಬ್ಬನು ಧರ್ಮಶಾಸ್ತ್ರದ ವಿಧಿಗಳನ್ನು ಪಾಲಿಸಿಕೊಂಡು ಬಂದವನಾಗಿದ್ದರೆ, ದೇವರು ಅವನನ್ನು ಸುನ್ನತಿ ಮಾಡಿಸಿಕೊಂಡವನಂತೆ ಪರಿಗಣಿಸುವುದಿಲ್ಲವೆ?


ನೀವು ಸುನ್ನತಿ ಮಾಡಿಸಿಕೊಂಡಿದ್ದೀರಿ; ಲಿಖಿತ ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ, ದೇವರ ಆಜ್ಞೆಗಳಿಗೆ ವಿಧೇಯನಾಗಿರುವುದೇ ಮುಖ್ಯ.


ಸುನ್ನತಿಮಾಡಿಸಿಕೊಳ್ಳುವ ತಾವಾದರೂ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವುದಿಲ್ಲ. ಆದರೆ ನಿಮ್ಮ ದೈಹಿಕ ಸುನ್ನತಿಯಿಂದ, ಅವರು ಹೆಚ್ಚಳಿಕೆ ಗಳಿಸುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಬಯಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು