Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:3 - ಕನ್ನಡ ಸತ್ಯವೇದವು C.L. Bible (BSI)

3 ಹೀಗಿರುವಾಗ, ಇತರರಿಗೆ ಯಾವ ಅಪರಾಧಕ್ಕಾಗಿ ತೀರ್ಪುನೀಡಿದೆಯೋ ಅಂಥ ಅಪರಾಧವನ್ನೇ ನೀನೂ ಮಾಡುತ್ತಿರುವೆಯಲ್ಲಾ! ದೇವರು ಕೊಡುವ ನ್ಯಾಯತೀರ್ಪಿನಿಂದ ನೀನು ಮಾತ್ರ ತಪ್ಪಿಸಿಕೊಳ್ಳುವಿಯೆಂದು ನೆನೆಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಲೈ ಮನುಷ್ಯನೇ, ಅಂಥವುಗಳನ್ನು ನಡಿಸುವವರಲ್ಲಿ ದೋಷವೆಣಿಸಿ ಅವುಗಳನ್ನೇ ಮಾಡುತ್ತಿರುವ ನೀನು ದೇವರ ದಂಡನೆಯ ತೀರ್ಪಿಗೆ ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಅಪರಾಧಗಳನ್ನು ಮಾಡುವ ಜನರಿಗೆ ನೀವು ಸಹ ತೀರ್ಪು ಮಾಡುತ್ತೀರಿ. ಆದರೆ ನೀವೇ ಆ ಅಪರಾಧಗಳನ್ನು ಮಾಡುತ್ತೀರಿ. ಹೀಗಿರಲು ದೇವರ ದಂಡನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮನುಷ್ಯನೇ, ಅಂಥವುಗಳನ್ನು ನಡೆಸುವವರ ಮೇಲೆ ತೀರ್ಪುಮಾಡುತ್ತಿರುವ ನೀನು ದೇವರ ತೀರ್ಪಿನಿಂದ ತಪ್ಪಿಸಿಕೊಂಡೇನೆಂದು ನೆನಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ತಿಯಾ ಮಾಜ್ಯಾ ದೊಸ್ತಾ, ಹಿ ಸಗ್ಳಿ ಬುರ್ಶಿ ಕಾಮಾ ಕರ್ತೆಯ್ ಅನಿ ದುಸ್ರ್ಯಾಂಚ್ಯಾ ವಿಶಯಾತ್ನಿ ನಿರ್ನಯಾ ಕರ್ತೆಯ್! ತುಕಾ ದೆವಾಚ್ಯಾ ನಿರ್ನಯಾತ್ನಾ ಚುಕ್ವುನ್ ಘೆವ್ಕ್ ಹೊತಾ ಮನುನ್ ಚಿಂತ್ಲೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:3
22 ತಿಳಿವುಗಳ ಹೋಲಿಕೆ  

ಗರ್ವಿಷ್ಠನು ಯಾರೇ ಆಗಿರಲಿ, ಅವನು ಸರ್ವೇಶ್ವರನಿಗೆ ಅಸಹ್ಯ; ಅವನಿಗೆ ದಂಡನೆ ತಪ್ಪದು, ಇದು ಖಂಡಿತ.


ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.


ಸ್ವಲ್ಪಹೊತ್ತಾದ ಮೇಲೆ ಇನ್ನೊಬ್ಬನು ಆತನನ್ನು ಕಂಡು, “ನೀನು ಕೂಡ ಅವರಲ್ಲಿ ಒಬ್ಬನು,” ಎನ್ನಲು ಪೇತ್ರನು, “ಇಲ್ಲಪ್ಪಾ, ನಾನಲ್ಲ,” ಎಂದುಬಿಟ್ಟನು.


ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದುಕೊಂಡೆಯಾ?


“ಎಲೈ ಸರ್ಪಗಳೇ, ವಿಷಸರ್ಪಗಳ ಪೀಳಿಗೆಯೇ, ನರಕ ದಂಡನೆಯಿಂದ ನೀವು ಹೇಗೆ ತಾನೆ ಪಾರಾಗುವಿರಿ? ಇಗೋ ಕೇಳಿ: ‘ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಪಂಡಿತರನ್ನೂ ಧರ್ಮಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ.


ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಪ್ಪಂದವನ್ನೂ ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಭಾಷೆಮಾಡಿ ಪ್ರಯೋಜನವೇನು? ಅದನ್ನೆಲ್ಲಾ ಮುರಿದುಬಿಟ್ಟನಲ್ಲವೇ? ಇವನು ನನ್ನಿಂದ ಪಾರಾಗನು.


ಆದರೆ ಅವನು ಬಾಬಿಲೋನಿನ ಅರಸನ ವಿರುದ್ಧ ದಂಗೆಯೆದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಈಜಿಪ್ಟಿಗೆ ರಾಯಭಾರಿಗಳನ್ನು ಕಳುಹಿಸಿದ. ಆದರೂ ಇವನು ಗೆಲ್ಲುವನೇ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೇ? ಒಪ್ಪಂದವನ್ನು ಮೀರಿದವನು ತಪ್ಪಿಸಿಕೊಂಡಾನೇ?


ದುಷ್ಟನಿಗೆ ದಂಡನೆ ಕಟ್ಟಿಟ್ಟ ಬುತ್ತಿ; ಶಿಷ್ಟ ಸಂತಾನಕ್ಕೆ ಸಿಗುವುದು ಮುಕ್ತಿ.


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


“’ಸಜ್ಜನನಾಗಿ ಬಾಳಿ ನನಗಾದ ಪ್ರಯೋಜನವೇನು? ಪಾಪರಹಿತನಾಗಿ ಜೀವಿಸಿ ನನಗೆ ಬಂದ ಲಾಭವೇನು’


ಅಲ್ಲಿನ ನಾಯಕರು ತಮ್ಮ ಒಡೆಯ ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆಂದು ತಿಳಿಯುತ್ತೀರೋ? ಇಲ್ಲವೇ ಇಲ್ಲ. ಪಟ್ಟಣವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ತನ್ನ ಆಳುಗಳನ್ನು ಕಳುಹಿಸಿದ್ದಾನೆ,” ಎಂದು ಹೇಳಿದರು.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ಅದಕ್ಕೆ ಪೇತ್ರನು, “ನೀನು ಏನು ಹೇಳುತ್ತೀಯೋ ನನಗೆ ಅರ್ಥವಾಗುವುದಿಲ್ಲ,” ಎಂದನು. ಆಕ್ಷಣವೇ, ಅವನು ಇನ್ನೂ ಮಾತನಾಡುತ್ತಿರುವಾಗಲೇ, ಕೋಳಿ ಕೂಗಿತು.


ಇಂಥಾ ದ್ರೋಹಿಗಳು ತಪ್ಪಿಸಿಕೊಳ್ಳಬಾರದಯ್ಯಾ I ರೌದ್ರದಿಂದಾ ಜನರನು ನೀ ಕೆಡವಿಬಿಡು ದೇವಾ II


ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪುನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು.


ಇಂಥ ಅಪರಾಧಗಳನ್ನು ಮಾಡುವವರ ಬಗ್ಗೆ ದೇವರು ನೀಡುವ ತೀರ್ಪು ನ್ಯಾಯಬದ್ಧವಾದುದು ಎಂಬುದನ್ನು ನಾವು ಬಲ್ಲೆವು.


ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು