Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:4 - ಕನ್ನಡ ಸತ್ಯವೇದವು C.L. Bible (BSI)

4 ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರ ದಯೆ, ಐಶ್ವರ್ಯ, ಸಹನೆ ಮತ್ತು ದೀರ್ಘಶಾಂತಿ ಇವುಗಳನ್ನು ತಾತ್ಸಾರ ಮಾಡುತ್ತೀಯೋ? ದೇವರ ಒಳ್ಳೆಯತನವು ನಿನ್ನನ್ನು ಪಶ್ಚಾತ್ತಾಪಕ್ಕೆ ನಡೆಸುತ್ತದೆಂಬುದು ನಿನಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ನಾಹೊಲ್ಯಾರ್ ತೆಚಿ ಮೊಟಿ ದಯಾ, ಸೊಸುನ್ ಘೆತಲೆ, ಮೊಟೆ ಸಮಾದಾನ್, ಹೆ ಸಗ್ಳೆ ಕಾಯ್ಬಿ ನ್ಹಯ್ ಮನುನ್ ಚಿಂತ್ಲೆ ಕಾಯ್? ದೆವ್ ಖರೆಚ್ ದಯಾಳ್ ಮನುನ್ ತುಕಾ ಗೊತ್ತ್ ಹಾಯ್, ಕಶ್ಯಾಕ್ ಮಟ್ಲ್ಯಾರ್ ತೊ ತುಕಾ ಪರಿವರ್ತನಾಚ್ಯಾ ವಾಟೆಕ್ ಘೆವ್ನ್ ಜಾವ್ಕ್ ಬಗುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:4
51 ತಿಳಿವುಗಳ ಹೋಲಿಕೆ  

ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II


ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ,


ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.


ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೆ ಜೀವಿಸೋಣವೆ? ಸರ್ವಥಾ ಇಲ್ಲ.


ಹಾಗಾದರೆ ನಾವು ಏನು ಹೇಳೋಣ? ದೈವಾನುಗ್ರಹವು ಹೆಚ್ಚುವಂತೆ ನಾವು ಪಾಪದಲ್ಲೇ ನೆಲೆಗೊಂಡು ಇರೋಣವೇ?


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.


ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಈ ವಿಷಯದಲ್ಲಿ ಯೆಹೂದ್ಯರು, ಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲ. ಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ನನ್ನ ಹೆಸರು ಪಡೆದಿರುವ ಈ ದೇವಾಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು - ‘ನಾವು ಸುರಕ್ಷಿತರು’ ಎನ್ನುತ್ತೀರಿ. ಈ ಎಲ್ಲ ಅಸಹ್ಯಕಾರ್ಯಗಳನ್ನು ನಡೆಸುವುದಕ್ಕೋ ಈ ಸುರಕ್ಷತೆ?


‘ಸರ್ವೇಶ್ವರ ದೀರ್ಘಶಾಂತನು, ಪ್ರೀತಿಮಯನು, ಪಾಪ-ಅಪರಾಧಗಳನ್ನು ಕ್ಷಮಿಸುವವನು, ಆದರೂ ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು,’ ಎಂದು ಹೇಳಿದ್ದೀರಿ. ಆ ಮಾತನ್ನು ನೆನಪಿಗೆ ತಂದುಕೊಳ್ಳಿ.


ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II


ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ.


ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖಳಾಗುವಂತೆ ನಾನು ಅವಳಿಗೆ ಕಾಲಾವಕಾಶ ಕೊಟ್ಟೆ. ಆದರೆ ಅವಳು ತನ್ನ ಜಾರತ್ವವನ್ನು ತ್ಯಜಿಸಿ ದೇವರಿಗೆ ಅಭಿಮುಖಳಾಗಲು ನಿರಾಕರಿಸುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು